ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಜಾನಪದ ಕಲೆ ನಮ್ಮೆಲ್ಲರ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಗ್ರಾಮೀಣ ಭಾಗದಲ್ಲಿ ಜನ್ಮತಾಳಿದ ಈ ಕಲೆ ಶಾಶ್ವತವಾಗಿ ನೆಲೆಯೂರಲು ಹೆಚ್ಚಿನ ಪ್ರಮಾಣದಲ್ಲಿ ಕಲಾಮೇಳಗಳನ್ನು ನಡೆಸುವ ಮೂಲಕ ಸರ್ಕಾರ ಉತ್ತೇಜನ ನೀಡಬೇಕು ಎಂದು ನಿವೃತ್ತ ಉಪನ್ಯಾಸಕ ಬಸವರಾಜಪ್ಪ ತಿಳಿಸಿದರು.
ಇತ್ತೀಚೆಗೆ ತಾಲ್ಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಚಿಗುರು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಎಚ್. ಸುನಿತಾ ಮಾತನಾಡಿ, ಜಾನಪದ ಕಲೆ ಈ ನಾಡಿನ ಸಂಪತ್ತಾಗಿದೆ. ಜಾನಪದ ಜನರಿಂದ ಹುಟ್ಟಿಕೊಂಡ ಒಂದು ಕಲೆ. ಜನರಿಂದ ಜನರಿಗೆ ಬಾಯಿಯಿಂದ ಬಾಯಿಗೆ ಗ್ರಾಮೀಣ ಪ್ರದೇಶದಲ್ಲಿ ಜಾನಪದ ಹುಟ್ಟಿಕೊಂಡಿತು. ಆದರೆ ಇತ್ತೀಚಿನ ಟಿವಿ ಮಾಧ್ಯಮ ಹಾಗೂ ಮೊಬೈಲ್ ಹಾವಳಿಯಿಂದ ಜಾನಪದ ಕಲೆ ನಶಿಸಿ ಹೋಗುತ್ತದೆ ಇಂತಹ ಕಲೆಗಳನ್ನು ಉಳಿಸಿ ಬೆಳೆಸುವಂತಹ. ಕಾರ್ಯವಾಗಬೇಕು ಚಿಗುರು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಪ್ರತಿವರ್ಷವೂ ಜಾನಪದ ಕಲಾಮೇಳ ಮೂಲಕ ಜಾನಪದ ಕಲಾವಿದರಿಗೆ ಗೌರವ ನೀಡುವುದನ್ನು ಮುಂದುವರಿಸುತ್ತ ಬಂದಿದೆ. ಮುಂದಿನ ದಿನಗಳಲ್ಲಿ ಸಹ ಜಾನಪದ ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದರು.
ಕಲಾವಿದ ನಾಗೇಂದ್ರಪ್ಪ ಮಾತನಾಡಿ, ಸರ್ಕಾರ ಜಾನಪದ ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಕಲಾವಿದರನ್ನು ಗುರುತಿಸುವಂತಹ ಕೆಲಸವಾಗಬೇಕು ಚಿಗುರು ಸಂಸ್ಥೆ ಪ್ರತಿವರ್ಷವೂ ಕಲಾವಿದರನ್ನು ಗುರುತಿಸುವಂತಹ ಕೆಲಸ ಮಾಡುತ್ತದೆ ಹೀಗೆ ಹಲವು ಸಂಸ್ಥೆಗಳು ಕಲಾವಿದರನ್ನು ಗುರುತಿಸಿ ಅವರಿಗೆ ಅವಕಾಶ ನೀಡುವುದರ ಮೂಲಕ ಜಾನಪದ ಕಲೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಕಲಾವಿದ ನಾಗೇಂದ್ರಪ್ಪ ಅನೇಕ ರಂಗಗೀತೆಗಳನ್ನು ಹಾಡಿ ರಂಜಿಸಿದರು. ಈ ಸಮಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಆನಂದಪ್ಪ, ಮಾಜಿ ಸದಸ್ಯ ಪ್ರಕಾಶ್, ಗ್ರಾಮ ಮುಖಂಡ ರಾಮಲಿಂಗಪ್ಪ, ಮಾಜಿ ಸದಸ್ಯ ಪ್ರಕಾಶ್, ಗ್ರಾಮೀಣ ಮುಖಂಡ ರಾಮಲಿಂಗಪ್ಪ, ಮುಖ್ಯಶಿಕ್ಷಕ ಚಿದಾನಂದ, ಎಸ್ಡಿಎಂಸಿಅಧ್ಯಕ್ಷ ನಾಗರಾಜು ಮುಂತಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post