ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರದ ಇಡಗುಂಜಿ ಮಹಾಗಣಪತಿ ಪಾದಯಾತ್ರೆ ಬಳಗದ ವತಿಯಿಂದ ಕೊರೋನ ನಿವಾರಣೆಗೆ ಪ್ರಾರ್ಥಿಸಿ 80 ಭಕ್ತರ ಗುಂಪು ಇಡಗುಂಜಿಗೆ ಪಾದಯಾತ್ರೆ ಆರಂಭಿಸಿದೆ.
ಮೂರನೇ ಅಲೆ ಎಂದು ಬಿಂಬಿತವಾಗಿರುವ ಒಮಿಕ್ರಾನ್ ನ್ನು ಸಂಪೂರ್ಣವಾಗಿ ನಿಯಂತ್ರಣ ಮಾಡಲು ಗಡಿ ಭದ್ರತೆ, ಆರ್.ಟಿ.ಪಿ.ಸಿ.ಆರ್ ಕಡ್ಡಾಯ, ಎರಡು ಡೋಸ್ ಲಸಿಕೆಯಾಗಿರುವ ಬಗ್ಗೆ ಪರಿಶೀಲನೆ , ಸಂಪರ್ಕ ಪತ್ತೆ ಮಾಡುವ ಮೂಲಕ ಕೊರೋನಾ ಹರಡುವುದನ್ನು ನಿಯಂತ್ರಿಸಲು ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ ಒಂದು ವಾರದಲ್ಲಿ ಪ್ರಕರಣಗಳು ಉಲ್ಬಣಗೊಂಡಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಎರಡು ಅಲೆಗಳನ್ನು ನಿಭಾಯಿಸಿರುವ ಅನುಭವದ ಹಿನ್ನೆಲೆಯಲ್ಲಿ ಇದನ್ನು ವಿಭಿನ್ನವಾಗಿ ನಿಭಾಯಿಸಬೇಕಿದೆ. ಬೆಳೆಯುತ್ತಿರುವ ಆರ್ಥಿಕತೆಯನ್ನು ಗಮನಿಸಿ, ಕೋವಿಡ್ ಹರಡದಂತೆ ಮುನ್ನಡೆಯಬೇಕಿದೆ ಎಂದು ತಂಡ ಅಭಿಪ್ರಾಯಪಟ್ಟಿದೆ.
ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಅಶೋಕ್, ಗೌರವ ಅಧ್ಯಕ್ಷ ಜಗದೀಶ್ ಮತ್ತು ಪ್ರಮುಖರಾದ ಶ್ಯಾಮ್ ಸುಂದರ್, ನಾರಾಯಣ ಶೇಟ್, ರಾಘವೇಂದ್ರ, ವಾಸುದೇವ್, ವಿಕಾಸ್ ಸಾಗರ, ಶ್ರೀಧರ್ ಮತ್ತು ಇತರ ಸದಸ್ಯರು ಹಾಜರಿದ್ದರು. ಇವರ ಈ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post