Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ದಾವಣಗೆರೆ

ಕೇಸರಿ-ಹಿಜಬ್’ಗಿಂತ ಶಿಕ್ಷಣ ಮುಖ್ಯ, ಕಾಲೇಜಿನಲ್ಲಿ ಶಾಂತಿ ಕಾಪಾಡಿ: ಶಾಸಕ ರೇಣುಕಾಚಾರ್ಯ ಸೂಚನೆ

February 7, 2022
in ದಾವಣಗೆರೆ
0 0
0
File Photo

File Photo

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಹೊನ್ನಾಳಿ  |

ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಬ್ ಧರಿಸುವ ಕುರಿತಾಗಿ ಸರಕಾರ ಹಾಗೂ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಸ್ಥಳೀಯ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಪ್ರಾಂಶುಪಾಲರಿಗೆ ಸೂಚನೆ ನೀಡಿದರು.

ಸೋಮವಾರ ಪಟ್ಟಣದ ಸರಕಾರಿ ಪದವಿ ಕಾಲೇಜಿಗೆ ಭೇಟಿ ನೀಡಿ, ಹಿಜಬ್ ಹಾಗೂ ಕೇಸರಿ ಶಾಲು‌ ಧರಿಸುವ ಕುರಿತಾಗಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು.ಸರಕಾರಿ ಹಾಗೂ ಖಾಸಗಿ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಕಡ್ಡಾಯವಾಗಿ ಸಮವಸ್ತ್ರ ಧರಿಸುವಂತೆ ಸರ್ಕಾರ ಹೊರಡಿಸಿರುವ‌ ನಿಯಮವನ್ನು ಪ್ರತಿಯೊಬ್ಬರೂ ಪಾಲನೆ ಮಾಡುವಂತೆ ಸಲಹೆ ಮಾಡಿದರು.

ವಿದ್ಯಾರ್ಥಿಗಳ ಯಾವ ಸಮವಸ್ತ್ರ ಧರಿಸಬೇಕು ಎಂಬುದನ್ನು ಆಯಾ ಕಾಲೇಜಿನ‌ ಆಡಳಿತ ಮಂಡಳಿ ಹಾಗೂ ಶಾಲೆಗಳಲ್ಲಿ ಎಸ್.ಡಿ.ಎಂ.ಸಿ ಯವರು ತೀರ್ಮಾನಿಸುತ್ತಾರೆ. ಎಲ್ಲಾ ವಿದ್ಯಾರ್ಥಿಗಳು ಈ ನಿಯಮಗಳ ಪಾಲನೆ ಮಾಡಬೇಕು ಎಂದು ಹೇಳಿದರು.

ಕೇಸರಿ ಶಾಲು ಹಾಕಿದವರು ಇಲ್ಲವೇ ಹಿಜಬ್ ಧರಿಸಿದವರನ್ನು ಕಾಲೇಜಿನ ಒಳಗಡೆ ಬಿಡಬಾರದು. ಪ್ರಾಂಶುಪಾಲರು ಇದರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚನೆ ಕೊಟ್ಟರು.ನ್ಯಾಯಾಲಯ ಏನು ತೀರ್ಪು ನೀಡಲಿದೆಯೋ ನಮಗೆ ಗೊತ್ತಿಲ್ಲ.ನ್ಯಾಯಾಧೀಶರು ನೀಡುವ ಆದೇಶಕ್ಕೆ ಪ್ರತಿಯೊಬ್ಬರೂ ಬದ್ದರಾಗಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಶಾಂತಿ ಹಾಗೂ ಸಾಮರಸ್ಯ ಕಾಪಾಡುವುದು ಎಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಈಗಾಗಲೇ ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಅಲ್ಲಿನ ಹೈ ಕೋಟ್೯ಗಳು ಹಿಜಬ್ ಧರಿಸಿ ಶಾಲಾ- ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುವಂತಿಲ್ಲ ಎಂಬ ತೀರ್ಪು ನೀಡಿದೆ. ಇದೇ ರೀತಿ ಕರ್ನಾಟಕ ಹೈ ಕೋಟ್೯ ನೀಡುವ ಆದೇಶಕ್ಕೆ ತಲೆಬಾಗಬೇಕು ಎಂದರು.

ಕಾನೂನುಗಿಂತ ಯಾರು ಕೂಡ ದೊಡ್ಡವರಲ್ಲ.‌ಈಗಾಗಲೇ ಸರಕಾರ ಸಮವಸ್ತ್ರವನ್ನು ಜಸರಿಗೊಳಿಸಿ ಅಧಿಸೂಚನೆಯನ್ನು ಹೊರಡಿಸಿದೆ. ನ್ಯಾಯಾಲಯದ ಅದೇಶಕ್ಕೆ ಸರಕಾರ ಕೂಡ ತಲೆಬಾಗುವುದಾಗಿ ಹೇಳಿದೆ. ಅಲ್ಲಿಯವರೆಗೆ ಎಲ್ಲರೂ ಶಾಂತಿ ಮತ್ತು ಸಂಯಮದಿಂದ ವರ್ತಿಸಬೇಕು ಎಂದು ಹೇಳಿದರು.ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮ- ಜಾತಿ, ಮೇಲು .ಕೀಳು ದೊಡ್ಡವರು , ಚಿಕ್ಕವರು, ಎಂಬ ಭೇದ-ಬಾವ ಇರುವುದಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವ ಉದ್ದೆಶವೇ ಎಲ್ಲರಲ್ಲೂ ನಾವೆಲ್ಲರೂ ಸಮಾನರು ಎಂಬ ಜಾಗೃತಿ ಮೂಡಿಸಲು. ಇದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಪ್ರಾರ್ಥಿಸಿದರು.

ನಾನೊಬ್ಬ ಚುನಾಯಿತರಾಗಿ ಚುನಾಯಿತ. ನನಗೆ ಹಿಂದು- ಮುಸ್ಲಿಂ ಎಂಬ ಬೇದ- ಭಾವ ಇಲ್ಲ. ನಿಮ್ಮೆಲ್ಲರ ರಕ್ಷಣೆ ನನ್ನ ಜವಾಬ್ದಾರಿಯಾಗಿದೆ. ಪರಸ್ಪರ ಮಾತಿನ ಚಕಮಕಿ ಇಲ್ಲವೇ ಘರ್ಷಣೆ ಉಂಟಾಗಿ ಯಾರಿಗಾದರೂ ಹೆಚ್ಚು ಕಡಿಮೆಯಾದರೆ ನನಗೆ ಕಪ್ಪು ಚುಕ್ಕೆ ಬರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಶಿಕ್ಷಣ ಸಂಸ್ಥೆಗಳು ಸರಸ್ವತಿಯ ದೇಗುಲ. ಇಂತಹ ಕಡೆ ನಾವೆಲ್ಲರೂ ಒಂದೇ ‌ತಾಯಿಯ ಮಕ್ಕಳಂತೆ ವರ್ತಿಸಬೇಕು. ಹಿಜಾಬ್ ಇಲ್ಲವೇ ಕೇಸರಿ ಶಾಲಿಗಿಂತ ಶಿಕ್ಷಣ ಮುಖ್ಯ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಮನವಿ ಮಾಡಿಕೊಂಡರು.ವಿದ್ಯಾರ್ಥಿಗಳಿಗೆ ಮನವರಿಕೆ
ಇದಕ್ಕೂ ಮುನ್ನ ರೇಣುಕಾಚಾರ್ಯ ಅವರು ಕಾಲೇಜಿಗೆ ಆಗಮಿಸಿ ಎರಡು ಕಡೆಯ ವಿದ್ಯಾರ್ಥಿಗಳ ಜೊತೆಗೆ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಮೊದಲು ಕೇಸರಿ ಶಾಲು ಹಾಕಿದ್ದ ವಿದ್ಯಾರ್ಥಿಗಳನ್ನು ಭೇಟಿಯಾದ ಅವರು, ಕಾಲೇಜುಗಳಿಗೆ ಈ ರೀತಿ ಹಾಕಿಕೊಟ್ಟ ಬರಬಾರದು. ಆಡಳಿತ ಮಂಡಳಿ ಯಾವ ಸಮವಸ್ತ್ರ ಧರಿಸಲು ಸೂಚಿಸಿದಿಯೋ ಅದನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಮನವೊಲಿಸಿದರು.ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರನ್ನು ಸಹಾ ಭೇಟಿ ಮಾಡಿ, ಮನವೊಲಿಸುವ ಪ್ರಯತ್ನ ಮಾಡಿದರು.

ಕಾಲೇಜುಗಳಲ್ಲಿ ಧರ್ಮದ ಆಚರಣೆಗಿಂತ ಶಿಕ್ಷಣ ಮುಖ್ಯ. ನೀವು ಉತ್ತಮ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. ನೀವು ಹಿಜಾಬ್ ಧರಿಸಲು ನಮ್ಮ ತಕರಾರು ಇಲ್ಲ. ಕಾಲೇಜಿನ ಆವರಣದೊಳಗೆ ಅದನ್ನು ತೆಗೆದುಬನ್ನಿ. ನೀವು ಹಿಜಾಬ್ ಧರಿಸುವುದು ಇನ್ನೊಬ್ಬರು ಕೇಸರಿ ಶಾಲು ಹಾಕುವುದರಿಂದ ವಾತವರಣ ಹಾಳಾಗುತ್ತದೆ.ನಮಗೆ ಶಾಂತಿ, ಸೌಹಾರ್ದತೆ, ಸಾಮರಸ್ಯ ಮುಖ್ಯ. ಇದನ್ನು ಎಲ್ಲರೂ ಚಾಚುತಪ್ಪದೆ ಪಾಲನೆ ಮಾಡಬೇಕು ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayalu Seeme NewsCourtDavanagereHIjabHonnaliKannada News WebsiteKeralaLatest News KannadaMLA M P Renukacharyaಕೇರಳಕೇಸರಿ ಶಾಲು‌ದಾವಣಗೆರೆನ್ಯಾಯಾಲಯಶಾಸಕ ಎಂ.ಪಿ. ರೇಣುಕಾಚಾರ್ಯಹಿಜಬ್ಹೊನ್ನಾಳಿ
Previous Post

ಕೆಎಫ್‍ಡಿ ನಿಯಂತ್ರಣ ಲಸಿಕೆಗೆ ಗುರುತಿಸಿರುವ ಜಿಲ್ಲಾ ಹಾಟ್’ಸ್ಪಾಟ್’ಗಳಾವುವು? ಇಲ್ಲಿದೆ ಮಾಹಿತಿ

Next Post

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!