No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಘಟನೆ ಕೇವಲ ಸಮವಸ್ತ್ರದಲ್ಲ, ದೇಶದ್ರೋಹಿಗಳ ಷಡ್ಯಂತ್ರ: ಬಿಜೆಪಿ ವಾಗ್ದಾಳಿ

ಕೋಮುಪ್ರಚೋದನೆ ಷಡ್ಯಂತ್ರದ ಬಗ್ಗೆ ವಾಟ್ಸಪ್ ಗ್ರೂಪ್’ಗಳ ದಾಖಲೆ ಪ್ರದರ್ಶಿಸಿದ ಜಿಲ್ಲಾಧ್ಯಕ್ಷ ಮೇಘರಾಜ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 8, 2022
in ಶಿವಮೊಗ್ಗ
0
ಶಿವಮೊಗ್ಗ ಘಟನೆ ಕೇವಲ ಸಮವಸ್ತ್ರದಲ್ಲ, ದೇಶದ್ರೋಹಿಗಳ ಷಡ್ಯಂತ್ರ: ಬಿಜೆಪಿ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗದಲ್ಲಿ ಕೇವಲ ಸಮವಸ್ತ್ರ ವಿವಾದವಲ್ಲ, ಇದು ರಾಷ್ಟ್ರದ್ರೋಹಿ ಶಕ್ತಿಗಳ ಹಿಡನ್ ಅಜೆಂಡಾ ಆಗಿದ್ದು, ಹೊಸದೊಂದು ವಿವಾದ ಸೃಷ್ಠಿಸಿ ಕೋಮು ಭಾವನೆ ಪ್ರಚೋದಿಸುವ ಷಡ್ಯಂತ್ರ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಆರೋಪಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ರಾಜ್ಯದ ಎಲ್ಲಾ ಶಾಲಾ, ಕಾಲೇಜ್ ಗಳಿಗೆ ಸಮವಸ್ತ್ರದ ನೀತಿ ಪ್ರಕಟಿಸಿದ್ದು, ಜಿಲ್ಲಾ ಬಿಜೆಪಿ ಇದನ್ನು ಸ್ವಾಗತಿಸುತ್ತದೆ. ಆ ಸಮವಸ್ತ್ರ ನೀತಿ ವಸ್ತುನಿಷ್ಠವಾಗಿ ಜಾರಿಗೆ ತರುವುದು ಆಯಾ ಕಾಲೇಜ್ ಆಡಳಿತ ಮಂಡಳಿಗಳ ಕರ್ತವ್ಯವಾಗಿದೆ. ಮತ್ತು ಅದನ್ನು ಜಾರಿಗೆ ತರಲು ಜಿಲ್ಲಾ ಬಿಜೆಪಿ ಆಗ್ರಹಿಸುತ್ತದೆ ಎಂದರು.

ರಾಜಕೀಯವಾಗಿ ತನ್ನ ಶಕ್ತಿ ವೃದ್ಧಿಗಾಗಿ ಮತ್ತು ವಿದ್ಯಾರ್ಥಿ ಸ್ತರಕ್ಕೆ ಕೊಂಡೊಯ್ಯಲು ಎಸ್.ಡಿ.ಪಿ.ಐ. ದುರಾಲೋಚನೆ ಮಾಡಿ ಶೈಕ್ಷಣಿಕ ಸಂಸ್ಥೆಯಲ್ಲಿ ವಿದ್ಯಾ ದೇಗುಲದಲ್ಲಿ ವಿದ್ಯಾರ್ಥಿಗಳನ್ನು ಬಳಸಿಕೊಂಡು ಇಂತಹ ಕೋಮುದ್ವೇಷ ಬಿತ್ತುತ್ತಿರುವುದು ಖಂಡನೀಯವಾಗಿದ್ದು, ಮೇಲ್ನೋಟಕ್ಕೆ ಇದು ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಎನ್ನಿಸಿದ್ದರೂ ಇದರ ಹಿಂದೆ ಪಿಎಫ್ಐ, ಸಿಎಫ್ಐ ಮತ್ತು ಎಸ್.ಡಿ.ಎಫ್.ಐ. ಇದ್ದು ವಿದ್ಯಾರ್ಥಿ ಸಮೂಹಕ್ಕೆ ಜಾತಿ ಧರ್ಮದ ವಿಷ ಬೀಜ ಬಿತ್ತುತ್ತಿದೆ. ಇದನ್ನು ಕೂಡಲೇ ತನಿಖೆಗೊಳಪಡಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅವರು ಆಗ್ರಹಿಸಿದರು.

ನ್ಯಾಯಾಂಗ ವ್ಯವಸ್ಥೆಯನ್ನು ಭಾರತದ ಎಲ್ಲಾ ಪ್ರಜೆಗಳು ಗೌರವಿಸಬೇಕು. ಕೋರ್ಟ್ ಆದೇಶ ಬರಲಿ, ಅದಕ್ಕೂ ಮುನ್ನ ಏಕಾಏಕಿ ಗಲಭೆ ಎಬ್ಬಿಸಿರುವುದು ಇದು ವ್ಯವಸ್ಥಿತ ಪೂರ್ವಯೋಜಿತ ಕೃತ್ಯ. ಇದಕ್ಕಾಗಿ ಆಯ್ದ ಕೆಲವು ಧಾರ್ಮಿಕ ಸ್ಥಳಗಳಲ್ಲಿ ತಯಾರಿ ನಡೆದಿರುವುದರ ಬಗ್ಗೆ ಸಿಸಿ ಕ್ಯಾಮೆರಾ ಆಧರಿಸಿ ತನಿಖೆಗೆ ಒಳಪಡಿಸಬೇಕು. ಈಗಾಗಲೇ ಒಂದು ಕೋಮಿನ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎರಡನೇ ಮಹಡಿಯಿಂದ ಇನ್ನೊಂದು ಕೋಮಿನ ವಿದ್ಯಾರ್ಥಿಗಳ ಮೇಲೆ ಕಲ್ಲೆಸೆದಿರುವುದು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಆರೋಪಿಗಳು ಪತ್ತೆಯಾಗಿದ್ದಾರೆ. ಕಲ್ಲು ತೂರಾಟ ಮಾಡಿದ ಮತ್ತು ಪ್ರಚೋದನೆ ನೀಡಿದ ಆರೋಪಿಗಳನ್ನು ಬಂಧಿಸಬೇಕು. ಮತತ್ಉ ಪಿಎಫ್ಐ, ಸಿಎಫ್ಐ, ಎಸ್.ಡಿ.ಪಿ.ಐ. ಸಂಘಟನೆಗಳ ಮೇಲೆ ನಿಗಾವಹಿಸಬೇಕೆಂದು ಅವರು ಆಗ್ರಹಿಸಿದರು.

ರಾಷ್ಟ್ರದ್ರೋಹಿಗಳು ವಿವಾದದ ಕೇಂದ್ರವಾಗಿದ್ದು, ಪಾಕಿಸ್ತಾನದ ಪರ ಘೋಷಣೆ, ವಾಯ್ಡ್ ರೆಕಾರ್ಡ್ ಮತ್ತು ಪಾಕಿಸ್ತಾನ ಧ್ವಜ ಹಿಡಿದುಕೊಂಡು ವಾಟ್ಸಾಪ್ ಗ್ರೂಪ್ ಗಳಲ್ಲಿ ಕೋಮು ಭಾವನೆ ಹರಿದಾಡಿಸಿ ಪ್ರಚೋದನೆ ನೀಡುತ್ತಿರುವ ವಾಟ್ಸಾಪ್ ಗ್ರೂಪ್ ಗಳ ದಾಖಲೆಗಳನ್ನು ಅವರು ಪ್ರದರ್ಶಿಸಿದರು.

ಹಿಂದೂ ಸಂಘಟನೆಗಳ ಹೆಸರಿನಲ್ಲಿ ನಕಲಿ ವಾಟ್ಸಾಪ್ ಗ್ರೂಪ ಸೃಷ್ಠಿಸಿ ಒಂದು ಧರ್ಮದ ವಿರುದ್ಧ ಅವಾಚ್ಯ ನಿಂದನೆ ಪದಗಳನ್ನು ಬಳಸಿ ಧರ್ಮದ ವಿರುದ್ಧ ಸಂಗತಿಗಳನ್ನು ಪ್ರಕಟಿಸಿ ಹರಿಬಿಡುತ್ತಿದ್ದಾರೆ. ಇದು ಕೂಡ ಒಂದು ಷಡ್ಯಂತ್ರವಾಗಿದೆ. ಇದನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ. ಯಾವುದೇ ಕಾರಣಕ್ಕೂ ಕಾಲೇಜಿನ ವಾತಾವರಣ ರಾಜಕಾರಣಕ್ಕೆ ಬಳಸಲು ಬಿಡುವುದಿಲ್ಲ. ಈಗಾಗಲೇ ಲಷ್ಕರ್ ಮೊಹಲ್ಲಾದಲ್ಲಿ ಪೊಲೀಸರು ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲಿ ಗಣೇಶ್ ಮತ್ತು ಪ್ರಜ್ವಲ್ ಎನ್ನುವ ಸಹೋದರರ ಮೇಲೆ ಹಲ್ಲೆ ನಡೆದಿದೆ. ಬಾಪೂಜಿ ನಗರ ಕಾಲೇಜಿನಲ್ಲಿ ಅರ್ಜುನ್, ಮಂಜು ಮತ್ತು ಸಂಕೇತ್ ಎನ್ನುವವರ ಮೇಲೆ ಹಲ್ಲೆ ನಡೆದಿದ್ದು, ಸಾಗರದ ಕಾಲೇಜೊಂದರಲ್ಲಿ 9 ಜನರ ಮೇಲೆ ಹಲ್ಲೆ ಮಾಡಲಾಗಿದ್ದು, ಇವರೆಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆ ಮಾಡಿದವರ ಮೇಲೆ ದೂರು ದಾಖಲಿಸಿ ಬಂಧಿಸಬೇಕು. ಗಲಭೆ ನಿಯಂತ್ರಿಸಲು ಬ್ಯಾಲೆನ್ಸ್ ಗಾಗಿ ಹಿಂದೂಗಳ ಮೇಲೆ ಕೇಸ್ ಹಾಕಿದರೆ ಸಹಿಸುವುದಿಲ್ಲ. ವಿಚಿಧ್ರಕಾರಿ ಶಕ್ತಿಗಳಿಂದ ಅಶಾಂತಿ ಹರಡಿಸಿ ಸಿದ್ಧತೆ ಮಾಡಿಕೊಂಡವರ ಮುಖವಾಡ ಸಾಕ್ಷಿ ಸಮೇತ ಕಳಚಿ ಬಿದ್ದಿದ್ದು, ಮಾರಕಾಸ್ತ್ರಗಳು ಎಲ್ಲಿತ್ತು, ಯಾಕೆ ಸಂಗ್ರಹಿಸಿದ್ದರು ಎನ್ನುವುದರ ಬಗ್ಗೆ ಪೂರ್ಣ ತನಿಖೆಯಾಗಬೇಕು. ಈ ಬಗ್ಗೆ ದೊಡ್ಡಪೇಟೆ ಠಾಣೆಯಲ್ಲಿ ಜಿಲ್ಲಾ ಬಿಜೆಪಿ ದೂರು ದಾಖಲಿಸಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಡಿ.ಎಸ್. ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ಪ್ರಮುಖರಾದ ಎಸ್. ದತ್ತಾತ್ರಿ, ಎಸ್.ಎನ್. ಚನ್ನಬಸಪ್ಪ, ಜಗದೀಶ್, ಶ್ರೀನಾಥ್, ಶಿವರಾಜ್, ಹೃಷಿಕೇಶ್ ಪೈ, ಬಿ.ಆರ್. ಮಧುಸೂದನ್, ಕೆ.ವಿ. ಅಣ್ಣಪ್ಪ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ದಾವಣಗೆರೆ: ಹಿಂಸಾರೂಪಕ್ಕೆ ತಿರುಗಿದ ಹಿಜಾಬ್ ಕಿಚ್ಚು, ಹರಿಹರದಲ್ಲಿ ಅಶ್ರುವಾಯು ಪ್ರಯೋಗ

Next Post

ರಾಜ್ಯದಾದ್ಯಂತ ಮೂರು ದಿನ ಶಾಲಾ ಕಾಲೇಜಿಗೆ ರಜೆ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಧುನಿಕ ತಂತ್ರಜ್ಞಾನಗಳೊಂದಿಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ವಿವಿ ಸ್ಥಾಪನೆ: ಸಚಿವ ಅಶ್ವತ್ಥನಾರಾಯಣ

ರಾಜ್ಯದಾದ್ಯಂತ ಮೂರು ದಿನ ಶಾಲಾ ಕಾಲೇಜಿಗೆ ರಜೆ ಘೋಷಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

April 28, 2026
ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

April 28, 2026
ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

April 28, 2026
‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ

‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ

April 28, 2026
ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

April 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL