ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಅಶೋಕ ನಗರ ನಿವಾಸಿ ರಮೇಶ್ ಪ್ರಭು(82) ಇಂದು ನಿಧನರಾಗಿದ್ದಾರೆ.
ವಯೋಸಹಜ ಅಸ್ವಸ್ಥತೆಯಿದ್ದರೂ, ಆರೋಗ್ಯದಿಂದಿದ್ದ ಅವರು ಇಂದು ಮಧ್ಯಾಹ್ನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಪುತ್ರ ಗಣೇಶ್ ಪ್ರಭು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ರಮೇಶ್ ಪ್ರಭು ಅವರ ನಿಧನಕ್ಕೆ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















