ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಮಾರುತಿ ನಗರದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸೇತುವೆ ಬಳಿ ಕಾಗದ ನಗರದ ಉಮೇಶ್ ರವರು ಅಪಘಾತವಾಗಿ ಮೃತಪಟ್ಟಿದ್ದು, ಅವರ ಕುಟುಂಬದವರಿಗೆ ಅವರ ಗುತ್ತಿಗೆದಾರರಿಂದ 4,00,000 ರೂ. ಹಾಗೂ ವೈಯಕ್ತಿಕವಾಗಿ 1, 00, 000 ರೂ. ಪರಿಹಾರದ ಚೆಕ್ ಅನ್ನು ಶಾಸಕ ಬಿ.ಕೆ. ಸಂಗಮೇಶ್ವರ್ ವಿತರಿಸಿದರು.

ಇಲ್ಲದೆ ಮೃತ ಉಮೇಶ್ ಇವರ ಪತ್ನಿಗೆ ಅಂಗನವಾಡಿಯಲ್ಲಿ ಸೂಕ್ತ ಉದ್ಯೋಗ ಕೊಡಿಸುವುದಾಗಿ ಶಾಸಕರು ಭರವಸೆ ನೀಡಿದರು. ಕಾಗದ ನಗರಕಟ್ಟೆ ಬಾಯ್ಸ್ ನ ಮುಖಂಡರು ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















