No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ಧೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 21, 2022
in ಬೆಂಗಳೂರು ನಗರ
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಶಿವಮೊಗ್ಗದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ #Shivamogga Bajarangadal Harsha murder ಪ್ರಕರಣದ ಆಪರಾಧಿಗಳು ಯಾವುದೇ ಸಂಘಟನೆಗೆ ಸೇರಿದ್ದರೂ ಅವರನ್ನು ಸರ್ಕಾರ ಬಂಧಿಸಿ ಗಲ್ಲು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ #Siddaramaiah ಅವರು ಹೇಳಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಘಟನೆಯನ್ನು ಗಮನಿಸಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಸ್ಪಷ್ಟವಾಗುತ್ತದೆ. ಗೃಹ ಸಚಿವರ ಸ್ವಂತ ಜಿಲ್ಲೆಯಲ್ಲಿಯೇ ಕೊಲೆ ನಡೆದಿದೆ. ಹೀಗಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ #Home Minister Araga Gnanendra ಅವರು ಕೂಡಲೇ ರಾಜಿನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.


ಮಾಧ್ಯಮ ಪ್ರತಿನಿಧಿಗಳಿಗೆ ಸಿದ್ದರಾಮಯ್ಯ ಅವರು ಹೇಳಿದ್ದು :

ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ಯಾರದ್ದೇ ಕೊಲೆಯಾದರೂ ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯಾಗಬೇಕು. ಹರ್ಷ ಅವರ ಕೊಲೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು.

ಆರೋಪಿಗಳು ಯಾವುದೇ ಸಮುದಾಯ, ಸಂಘಟನೆಗೆ ಸೇರಿದ್ದರೂ ಸರ್ಕಾರ ಕಠಿಣವಾದ ಕ್ರಮ ಕೈಗೊಳ್ಳಬೇಕು. ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈಶ್ವರಪ್ಪ, ಯುಡಿಯೂರಪ್ಪ #Yadiyurappa ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಿಲ್ಲೆ ಇದು. ಇದು ಏನನ್ನು ಸೂಚಿಸುತ್ತದೆ. ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಹಾಳಾಗಿರುವುದಕ್ಕೆ ಇದು ಉದಾಹರಣೆ. ಈಶ್ವರಪ್ಪ, #Eshwarappa ಆರಗ ಜ್ಞಾನೇಂದ್ರ #Araga Gnanendra ಇದಕ್ಕೆ ಜವಾಬ್ದಾರರು.

ಪೊಲೀಸರು ಅಪರಾಧಿಗಳನ್ನು ಮೊದಲು ಬಂಧಿಸಿ ಕಠಿಣವಾದ ತನಿಖೆ ಮಾಡಲಿ. ಬೆಂಗಳೂರಿನಲ್ಲಿ ಕುಳಿತು ಕಾಂಗ್ರೆಸ್ ಅಥವಾ ಯಾರ ಮೇಲೋ ಆರೋಪ ಮಾಡುವುದಲ್ಲ.

ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಿ ಶಿಕ್ಷೆಗೆ ಒಳಪಡಿಸಲಿ: 
ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರೇ ಆಗಿರುವುದರಿಂದ ಘಟನೆ ಹಿನ್ನೆಲೆಯಲಿ ಅವರು ರಾಜಿನಾಮೆ ಕೊಡಬೇಕು. ಆದರೆ, ಅವರು ಭಂಡರು. ರಾಜಿನಾಮೆ ಕೊಡುವುದಿಲ್ಲ. ನಮ್ಮ ಸರ್ಕಾರ ಇದ್ದಾಗ ಕೆ.ಜೆ. ಜಾರ್ಜ್ ಅವರು ರಾಜಿನಾಮೆ ಕೊಟ್ಟಿದ್ದರು. ರಾಜಿನಾಮೆ ಕೊಡುವುದೇ ಇಲ್ಲ ಎಂದು ಹೇಳಿದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ.

Also Read: ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆಯೇನು?

ಸದನ ನಡೆಸಲು ಕಾಂಗ್ರೆಸ್‍ನವರಿಗೆ ಆಸಕ್ತಿ ಇಲ್ಲ ಎಂಬ ಸಚಿವ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ರಾಷ್ಟ್ರಧ್ವಜಕ್ಕೆ ಅವಮಾನ ಆಗುವಂಥ ಹೇಳಿಕೆ ನೀಡಿದಾಗ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುತ್ತಾರೆ ಎಂದು ಬಿಜೆಪಿಯವರಿಗೆ ಗೊತ್ತು.

40 ಪರ್ಸೆಂಟ್ ಕಮಿಷನ್, ಬಿಟ್ ಕಾಯಿನ್ ಹಗರಣದ ಬಗ್ಗೆ ನಾವು ಪ್ರಸ್ತಾಪ ಮಾಡುತ್ತೇವೆ ಎಂಬ ಕಾರಣಕ್ಕೆ ಸದನ ನಡೆಯುವುದು ಅವರಿಗೂ ಇಷ್ಟವಿಲ್ಲ. ಹೀಗಾಗಿಯೇ ಈಶ್ವರಪ್ಪ ಅವರಿಂದ ರಾಜಿನಾಮೆ ಕೊಡಿಸುತ್ತಿಲ್ಲ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, #CM Basavaraja Bommai ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಅಶೋಕ್ ಅವರು ಸಂಧಾನಕ್ಕೆ ಬಂದಾಗ ಈಶ್ವರಪ್ಪ ಅವರಿಂದ ರಾಜಿನಾಮೆ ಕೊಡಿಸಿ, ನಾವು ಸದನಕ್ಕೆ ಹಾಜರಾಗುತ್ತೇವೆ ಎಂದು ಹೇಳಿದ್ದೆವು.

ದೇಶದ ಗೌರವದ ಸಂಕೇತವಾದ ರಾಷ್ಟ್ರಧ್ವಜಕ್ಕೆ ಈಶ್ವರಪ್ಪ ಅವರು ಅವಮಾನ ಮಾಡಿದಾಗ ಸುಮ್ಮನೆ ಕೂರಲು ಆಗುವುದಿಲ್ಲ ಎಂದಿದ್ದೆವು. ಆದರೆ, ಅದಕ್ಕೆ ಅವರು ಒಪ್ಪಲು ತಯಾರಿಲ್ಲ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರಿಗೇ ಕಾಳಜಿ ಇಲ್ಲ.

Also Read: ಬಜರಂಗ ದಳ ಯುವಕನ ಹತ್ಯೆ ಹಿನ್ನೆಲೆ ಶಿವಮೊಗ್ಗದಲ್ಲಿ ಪೊಲೀಸ್ ಸರ್ಪಗಾವಲು


ಈಶ್ವರಪ್ಪ ಅವರು ರಾಜಿನಾಮೆ ಕೊಟ್ಟಿದ್ದರೆ ಅಥವಾ ಅವರನ್ನು ಸಂಪುಟದಿಂದ ವಜಾ ಮಾಡಿದ್ದರೆ ನಾವೇಕೆ ಧರಣಿ ಮಾಡುತ್ತಿದ್ದೆವು.

ಜೆಡಿಎಸ್ ಶಾಸಕರು ನಮ್ಮ ವಿರುದ್ಧ ಪ್ರತಿಭಟನೆ ಮಾಡಲಿ, ಇದಕ್ಕೆ ನಮ್ಮ ತಕರಾರು ಇಲ್ಲ. ನಾವು ನಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದೇವೆ. ಅವರಿಗೆ ತೊಂದರೆ ಕೊಡುವುದು ನಮ್ಮ ಉದ್ದೇಶವಲ್ಲ.

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವಾಗ ಮೌನದಿಂದ ಇರಲು ಸಾಧ್ಯವೇ ? ಒಂದು ವೇಳೆ ಸದನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದರೆ ನಾವು ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Bajarangadal Harsha murderShivamogga NewsSiddaramaiahಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಬೆಂಗಳೂರುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯ
Share197Tweet123Send
Previous Post

ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆಯೇನು?

Next Post

ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸರನ್ನು ಲೆಕ್ಕಿಸದೆ ಕಲ್ಲು ತೂರಾಟ – ಸಿಕ್ಕಸಿಕ್ಕಲ್ಲಿ ಬೆಂಕಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸರನ್ನು ಲೆಕ್ಕಿಸದೆ ಕಲ್ಲು ತೂರಾಟ – ಸಿಕ್ಕಸಿಕ್ಕಲ್ಲಿ ಬೆಂಕಿ

ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಂಸಾಚಾರ: ಪೊಲೀಸರನ್ನು ಲೆಕ್ಕಿಸದೆ ಕಲ್ಲು ತೂರಾಟ - ಸಿಕ್ಕಸಿಕ್ಕಲ್ಲಿ ಬೆಂಕಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

May 7, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL