ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಂಗಳವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿಗಳು, ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದಿದ್ದಾರೆ.
ಕೆಇಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಆಯ್ಕೆಯ ಪರೀಕ್ಷೆಗಳು ಮೊದಲೇ ನಿಗದಿಯಾದಂತೆ ಮೂರೂ ಕೇಂದ್ರಗಳಲ್ಲಿ (ಶಿವಮೊಗ್ಗದ ಎಚ್’ಎಸ್ಆರ್ ಪದವಿ ಪೂರ್ವ ಕಾಲೇಜು, ಸರಕಾರಿ ಪಪೂ ಕಾಲೇಜು, ಸರಕಾರಿ ಬಾಲಿಕಾ ಪಪೂ ಕಾಲೇಜು,) ಮಂಗಳವಾರ ನಡೆಯಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post