No Result
View All Result
“FZ Blue Flex Yamaha’s Ethanol-Ready Ride”
English Articles

FZ Blue Flex | Yamaha Brings Ethanol-Ready Innovation to Indian Roads

by kalpa News
July 13, 2026
0

Kalpa Media House  |  Bengaluru  | India Yamaha Motor (IYM) announced the launch of the FZ-Blue Flex, a significant step...

Read moreDetails
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸೃಷ್ಟಿಯ ಸತ್ಯ ತಿಳಿಯಲು ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಕೆ ಅಗತ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ

ಚರಣ್‌ ಬ್ಯಾಂಕಿನ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

kalpa News by kalpa News
March 22, 2022
in ಬೆಂಗಳೂರು ನಗರ
0
ಸೃಷ್ಟಿಯ ಸತ್ಯ ತಿಳಿಯಲು ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಕೆ ಅಗತ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟೀಷ್‌ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ Bhagavathgitha ಶ್ರೀಕೃಷ್ಣ Shri Krishna ಪರಮಾತ್ಮ ಭೋಧಿಸಿದ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ Vishweshwara Hegade Kageri ಅಭಿಪ್ರಾಯಪಟ್ಟರು.

ಇಂದು ಬೆಂಗಳೂರಿನ ಜಯನಗರದಲ್ಲಿರುವ ಚರಣ್ ಬ್ಯಾಂಕ್ ಶಾಖೆಯ ನ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಅಳವಡಿಸಬೇಕು ಎನ್ನುವಂತಹ ವಿಷಯದ ಬಗ್ಗೆ ಬಹಳಷ್ಟು ಚರ್ಚೆ ನಡೆಯುತ್ತಿದೆ. ಇಂದಿನ ಶಿಕ್ಷಣ ವ್ಯವಸ್ಥೆ ಹಣವನ್ನು ಗಳಿಸುವ ಉದ್ದೇಶದ ಬ್ರಿಟೀಷ್‌ ಪದ್ಧತಿಯಾಗಿದೆ. ನನ್ನದೊಂದು ನಂಬಿಕೆ ಇದೆ ಅದನ್ನು ಹೇಳಿದರೆ ತಪ್ಪಾಗಲಾರದು, ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಇದೆ ಎಂದು ಅನಿಸುತ್ತದೆ. ಏಕೆಂದರೆ ಅದರಲ್ಲಿ ಯಾವ ಜಾತಿ, ಉಪಜಾತಿ, ಆ ರಾಜ್ಯ, ಈ ಭಾಷೆ ಆ ಗಡಿ, ಈ ಗಡಿ ಎನ್ನುವ ತಾರತಮ್ಯ ಇರಲಿಲ್ಲ. ಯಾವ ಭೇದಬಾವ ಕೂಡ ಇಲ್ಲ. ಸೃಷ್ಟಿಯ ಸತ್ಯ ಏನಿದೆಯೋ ಅದು ಭಗವದ್ಗೀತೆಯಲ್ಲಿ ತಿಳಿಸಲಾಗಿದೆ. ಸೃಷ್ಟಿಯ ಸತ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕು, ಹಾಗಾಗಿ ಅದನ್ನು ತಿಳಿದುಕೊಳ್ಳುವ ಶಿಕ್ಷಣ ಭಗವದ್ಗೀತೆಯಲ್ಲಿದೆ. ಹಾಗಾಗಿ ಭಗವದ್ಗೀತೆಯ ಶಿಕ್ಷಣವನ್ನು ನಾವು ಕಲಿಸಿದರೆ ತಪ್ಪಾಗಲಾರದು ಎನ್ನುವುದು ನನ್ನ ನಂಬಿಕೆ. ಹಾಗೂ ಅದನ್ನು ಕಲಿಸಬೇಕೆಂಬ ಆಗ್ರಹ ನನ್ನದಾಗಿದೆ.

Also read: ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ತಮಿಳುನಾಡು ರಾಜಕಾರಣ: ಸಿಎಂ ಬೊಮ್ಮಾಯಿ

ಶಿಕ್ಷಣ ಮಂತ್ರಿಯಾಗಿದ್ದಾಗ ಭಗವದ್ಗೀತಾ ಅಭಿಯಾನ ನಡೆಯಿತು. ಸ್ವರ್ಣವಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದಂತಹ ಅಭಿಯಾನದಲ್ಲಿ ರಾಜ್ಯದ 20 ಲಕ್ಷ ವಿದ್ಯಾರ್ಥಿಗಳು ಭಗವದ್ಗೀತೆ ಕಲಿಯುವ ಅವಕಾಶವನ್ನು ನಾನು ಶಿಕ್ಷಣ ಮಂತ್ರಿಯಾಗಿ ಮಾಡಿಕೊಟ್ಟಿದ್ದೇನೆ. ಇಂದು ಅದು ಕಡ್ಡಾಯವಾಗಿ ಶಿಕ್ಷಣದಲ್ಲಿ ಅಳವಡಿಕೆ ಆಗಬೇಕು ಎನ್ನುವ ಚರ್ಚೆ ನಡೆಯುತ್ತಿದೆ. ಅದು ಬರಲಿ ಎಂದು ಆಶಿಸೋಣ ಭಗವದ್ಗೀತೆ ಶಿಕ್ಷಣದ ಭಾಗ ಆಗಬೇಕು, ಏಕೆಂದರೆ ಅದರಿಂದಾಗಿ ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುತ್ತದೆ. ಜೀವನದ ಸಾರ್ಥಕತೆಯನ್ನು ಅದು ನೀಡುತ್ತದೆ. ಹಣಗಳಿಸುವ ಶಿಕ್ಷಣ ವ್ಯವಸ್ಥೆಯಿಂದ, ನಮ್ಮ ಜೀವನ ಸಾರ್ಥಕಗೊಳಿಸುವ ಶಿಕ್ಷಣ ವ್ಯವಸ್ಥೆಯ ಕಡೆಗೆ ಹೋಗಲು ಭಗವದ್ಗೀತೆಯಂತಹ ಶಿಕ್ಷಣ ಬೇಕು. ನಾವು ಹಣಗಳಿಸುವ ವ್ಯವಸ್ಥೆಯಿಂದ ಪರಿವರ್ತನೆ ತರಬೇಕು ಎನ್ನುವುದಾದರೆ ಆಧ್ಯಾತ್ಮಿಕ ತಳಹದಿಯ ಶಿಕ್ಷಣ ನಮಗೆ ಅಗತ್ಯ ಇದೆ ಆಧ್ಯಾತ್ಮಿಕ ತಳಹದಿಯ ಶಿಕ್ಷಣ ಭಗವದ್ಗೀತೆಯಂತಹ ಶಿಕ್ಷಣದಲ್ಲಿ ಸಿಗುತ್ತದೆ ಎನ್ನುವುದು ನಮ್ಮ ನಂಬಿಕೆಯಾಗಿದೆ ಎಂದು ಹೇಳಿದರು.

ಹಣ ಮುಖ್ಯ ಆದರೆ ಹಣವನ್ನು ಹೇಗಾದರೂ ಗಳಿಸಲೇಬೇಕು ಎನ್ನುವಂತಹ ಹಪಾಹಪಿತನ ದುರಾಸೆಯನ್ನು ಸಮಾಜದಲ್ಲಿ ಕಾಣುತ್ತಿದ್ದೇವೆ. ಯಾವ ಮಾರ್ಗದಿಂದಲಾದರೂ ಹಣ ಗಳಿಸಬೇಕು ಎನ್ನುವ ದುರಾಸೆ ಹೆಚ್ಚಾಗಿದೆ. ಆಸೆ ಇರಬೇಕು ನಿಜ ಆದರೆ ದುರಾಸೆ ಶುರುವಾದರೆ ವ್ಯವಸ್ಥೆಯಲ್ಲಿನ ಶಿಥಿಲತೆ ಶುರುವಾಗುತ್ತದೆ. ನಮಗೆ ಬೇಕಾಗಿರುವುದು ಧರ್ಮಮಾರ್ಗದಿಂದ ಗಳಿಸಿದಂತ ಹಣ ಮಾತ್ರ. ಈ ಹಿನ್ನಲೆಯಲ್ಲಿ ನಾವು ಆಧ್ಯಾತಿಕ ತಳಹದಿಯ ಶಿಕ್ಷಣವನ್ನು ಅಳವಡಿಸಿಕೊಳ್ಳುವದತ್ತ ಹೆಚ್ಚಿನ ಗಮನ ನೀಡಬೇಕಾಗಿದೆ ಎಂದರು.


ಚರಣ್ ಬ್ಯಾಂಕ್ ಕಳೆದ 25 ವರ್ಷಗಳಲ್ಲಿ ಬಹಳಷ್ಟನ್ನು ಸಾಧಿಸಿದೆ. ಹಣಕಾಸಿನ ಸಂಸ್ಥೆ ವಿಶ್ವಾಸಾರ್ಹತೆಯನ್ನು ಗಳಿಸಿಕೊಳ್ಳುವುದು ಬಹಳ ಮುಖ್ಯವಾದ ವಿಷಯ. ಈ ನಿಟ್ಟಿನಲ್ಲಿ ಚರಣ್ ಬ್ಯಾಂಕ್ ಬಹಳಷ್ಟು ಸಾಧಿಸುವುದನ್ನು ನಾವು ಕಂಡಿದ್ದೇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಮಾರು ಐದು ದಶಕಗಳ ಅನುಭವವನ್ನು ಹೊಂದಿರುವಂತಹ ದ್ವಾರಕಾನಾಥ್ ನೇತೃತ್ವದ ಚರಣ್ ಬ್ಯಾಂಕ್ ಜನರಲ್ಲಿ ವಿಶ್ವಾರ್ಹತೆಯನ್ನು ಗಳಿಸಿಕೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಚರಣ್‌ ಸೌಹಾರ್ದ ಕೋ ಆಪರೇಟೀವ್‌ ಬ್ಯಾಂಕ್‌ ಲಿಮಿಟೆಡ್‌ನ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಬಿ.ವಿ ದ್ವಾರಕಾನಾಥ್‌, ಉಪಾಧ್ಯಕ್ಷರಾದ ಶುಭಪ್ರದ ಇಟಗಿ ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBhagavathgithaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShri KrishnaState NewsVishweshwara Hegade Kageriಬೆಂಗಳೂರುಭಗವದ್ಗೀತೆವಿಶ್ವೇಶ್ವರ ಹೆಗಡೆ ಕಾಗೇರಿಶ್ರೀಕೃಷ್ಣ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ತಮಿಳುನಾಡು ರಾಜಕಾರಣ: ಸಿಎಂ ಬೊಮ್ಮಾಯಿ

Next Post

ಅದ್ಧೂರಿ ಮಾರಿಕಾಂಬಾ ಜಾತ್ರೆ: ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ! ಯಾವುದಕ್ಕೆ ಎಷ್ಟು ದರ? ಇಲ್ಲಿದೆ ಮಾಹಿತಿ…

kalpa News

kalpa News

Next Post
ಅದ್ಧೂರಿ ಮಾರಿಕಾಂಬಾ ಜಾತ್ರೆ: ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ! ಯಾವುದಕ್ಕೆ ಎಷ್ಟು ದರ? ಇಲ್ಲಿದೆ ಮಾಹಿತಿ…

ಅದ್ಧೂರಿ ಮಾರಿಕಾಂಬಾ ಜಾತ್ರೆ: ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ! ಯಾವುದಕ್ಕೆ ಎಷ್ಟು ದರ? ಇಲ್ಲಿದೆ ಮಾಹಿತಿ...

Leave a Reply Cancel reply

Your email address will not be published. Required fields are marked *

No Result
View All Result
“FZ Blue Flex Yamaha’s Ethanol-Ready Ride”
English Articles

FZ Blue Flex | Yamaha Brings Ethanol-Ready Innovation to Indian Roads

by kalpa News
July 13, 2026
0

Kalpa Media House  |  Bengaluru  | India Yamaha Motor (IYM) announced the launch of the FZ-Blue Flex, a significant step...

Read moreDetails
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL