No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಾರತೀಯ ಪತ್ರಿಕೋದ್ಯಮ ಸಂಕಷ್ಟದಲ್ಲಿದೆ: ಪತ್ರಕರ್ತ ಸಾಯಿನಾಥ್

ಕುವೆಂಪು ವಿವಿಯಲ್ಲಿ 200 ವರ್ಷಗಳ ಭಾರತೀಯ ಪತ್ರಿಕೋದ್ಯಮದ ಪ್ರಸಕ್ತ ಸ್ಥಿತಿಗತಿಯ ಬಗ್ಗೆ ಉಪನ್ಯಾಸ

kalpa News by kalpa News
April 1, 2022
in ಶಿವಮೊಗ್ಗ
0
ಭಾರತೀಯ ಪತ್ರಿಕೋದ್ಯಮ ಸಂಕಷ್ಟದಲ್ಲಿದೆ: ಪತ್ರಕರ್ತ ಸಾಯಿನಾಥ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಭಾರತೀಯ ಪತ್ರಿಕೋದ್ಯಮ ಇಂದು ಸಂಕಷ್ಟದಲ್ಲಿದೆ. ಪತ್ರಿಕಾ ಸ್ವಾತಂತ್ರ‍್ಯ ಸಂಕಷ್ಟದಲ್ಲಿದೆ. ಪತ್ರಕರ್ತರ ಮೇಲೆ ವಿವಿಧ ಕ್ಷುಲ್ಲಕ ಕಾರಣಗಳಿಗೆ ಮೊಕದ್ದಮೆಗಳನ್ನು ದಾಖಲು ಮಾಡಲಾಗುತ್ತಿದೆ. ಅಲ್ಲದೆ ನೋಟೀಸ್ ನೀಡದೆ ಬಂಧಿಸಲಾಗುತ್ತಿದೆ ಹಾಗೂ ಬೆದರಿಸಲಾಗುತ್ತಿದೆ ಎಂದು ರೇಮನ್ ಮಾಗ್ಸಸೆ ಪ್ರಶಸ್ತಿ ವಿಜೇತ ಅಭಿವೃದ್ಧಿ ಪತ್ರಕರ್ತ ಪಿ. ಸಾಯಿನಾಥ್ ಆತಂಕ ವ್ಯಕ್ತಪಡಸಿದರು.

ಕುವೆಂಪು ವಿಶ್ವವಿದ್ಯಾಲಯದ Kuvempu University ಸ್ನಾತಕೋತ್ತರ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಏರ್ಪಡಿಸಿದ್ದ ಡಾ. ಶಾಂತಿನಾಥ ದೇಸಾಯಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು, 200 ವರ್ಷಗಳ ಭಾರತೀಯ ಪತ್ರಿಕೋದ್ಯಮದ ಪ್ರಸಕ್ತ ಸ್ಥಿತಿಗತಿಯ ಬಗ್ಗೆ ಉಪನ್ಯಾಸ ನೀಡಿದರು.

ಭಾರತದಲ್ಲಿ ಮಾಧ್ಯಮಗಳನ್ನು ನಿಯಂತ್ರಿಸಲು 52 ಕಾಯ್ದೆಗಳು ಈಗಾಗಲೇ ಅಸ್ತಿತ್ವದಲ್ಲಿತ್ತು. ಇತ್ತೀಚೆಗೆ ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆ ಮತ್ತು ವಿಪತ್ತು ನಿರ್ವಹಣೆ ಕುರಿತ ಕಾಯಿದೆಗಳನ್ನು ಪತ್ರಕರ್ತರ ಮೇಲೆ ದಾಖಲಿಸಿದ್ದು, ಪ್ರಸ್ತುತ ಅವುಗಳ ಸಂಖ್ಯೆ 62ರಷ್ಟಿದೆ. ಕೋವಿಡ್ ಕಾಲದಲ್ಲಿ ಉತ್ತರಪ್ರದೇಶದ ಗಂಗಾ ನದಿಯಲ್ಲಿ ಹೆಣಗಳು ತೇಲಿದ ವರದಿ ನೀಡಿದ ಮಾಧ್ಯಮಗಳಿಗೆ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳು ಜಾಹೀರಾತು ನೀಡುವುದನ್ನು ನಿಲ್ಲಿಸಿದವು. ಆ ಮೂಲಕ ಅವುಗಳಿಗೆ ಮೂಗುದಾರ ಹಾಕಲಾಯಿತು.

ಕೋವಿಡ್‌ನ ಮೊದಲ 12 ತಿಂಗಳುಗಳಲ್ಲಿ ಭಾರತದ ಜಿ.ಡಿ.ಪಿ. ಶೇ. 7ರಷ್ಟು ಇಳಿಕೆಯಾಗಿದೆ ಎಂದು ಸರ್ಕಾರ ಹೇಳಿತು. ಆದರೆ ಇದೇ ಸಮಯದಲ್ಲಿ ಭಾರತೀಯ ಬಿಲಿಯನೇರ್‌ಗಳ ಸಂಪತ್ತಿನಲ್ಲಿ ಶೇ. 22ರಷ್ಟು ಏರಿಕೆಯಾಯಿತು. ಇವುಗಳ ತುಲನಾತ್ಮಕ ವರದಿಗಳು, ವಿಶ್ಲೇಷಣಗಳನ್ನು ಮುಖ್ಯವಾಹಿನಿ ಮಾಧ್ಯಮ ನೀಡುವುದೇ ಇಲ್ಲ ಎಂದು ಟೀಕಿಸಿದರು.

ಜಾಗತಿಕ ಪತ್ರಿಕಾ ಸ್ವಾತಂತ್ರ‍್ಯ ಸೂಚಿಯಲ್ಲಿ ಒಟ್ಟು 188 ದೇಶಗಳಲ್ಲಿ ಭಾರತ 142ನೇ ಸ್ಥಾನದಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ‍್ಯ ಅಪಾಯದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕ ಸೂಚಿಯಲ್ಲಿ 132 ಸೇರಿದಂತೆ ವಿವಿಧ ಮಾನದಂಡಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ. ಆದರೆ ಬಿಲಿಯನೇರ್‌ಗಳ ಒಟ್ಟು ಸಂಖ್ಯೆಯಲ್ಲಿ ವಿಶ್ವದಲ್ಲಿಯೇ 3ನೇ ಸ್ಥಾನದಲ್ಲಿದೆ. ಸಮಕಾಲೀನ ಕಾಲಘಟ್ಟದ ತಲ್ಲಣಗಳು ಮತ್ತು ಸಂಕಷ್ಟಗಳ ಪ್ರಕ್ರಿಯೆಗಳ ವರದಿಗಾರಿಕೆಯೇ ನಿಜವಾದ ಪತ್ರಿಕೋದ್ಯಮ. ಬೃಹತ್ ಪ್ರಮಾಣದಲ್ಲಿರುವ ಬೆಳೆದಿರುವ ಇಂದಿನ ಮಾಧ್ಯಮ ಆ ಕಾರ್ಯನಿರ್ವಹಿಸುತ್ತಿಲ್ಲ ಎಂದು ವಿಶಾದಿಸಿದರು.
Also read: ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡು ಸಾಗಬೇಕು: ರಾಹುಲ್ ಗಾಂಧಿ

ಭಾರತದ ಸ್ವಾತಂತ್ರ ಸಂಗ್ರಾಮದಲ್ಲಿ ಹೋರಾಡಿದ ಮಹಾತ್ಮ ಗಾಂಧಿ, ಅಂಬೇಡ್ಕರ್, ಭಗತ್ ಸಿಂಗ್, ಬಾಲ ಗಂಗಾಧರ್ ತಿಲಕ್ ಸೇರಿದಂತೆ ಅನೇಕರು ಮಹಾನ್ ಪತ್ರಕರ್ತರಾಗಿದ್ದರು. ಪ್ರತಿದಿನವೂ ಸ್ವಾತಂತ್ರ ಹೋರಾಟ, ರಾಜಕೀಯ, ಸಾಮಾಜಿಕ ಸುಧಾರಣೆಗಳ ಕುರಿತು ಯತೇಚ್ಛವಾದ ಬರಹಗಳನ್ನು ಪ್ರಕಟಿಸುತ್ತಿದ್ದರು. ಅಂದು ಮಾಧ್ಯಮ ಬಹಳ ಸಣ್ಣ ಪ್ರಮಾಣದಲ್ಲಿತ್ತು ಆದರೆ ಅದು ಅಶಿಕ್ಷಿತರನ್ನೂ ಸೇರಿ ಎಲ್ಲರನ್ನು ತಲುಪುವ ಮೂಲಕ ಹೋರಾಟ, ಸುಧಾರಣೆಗಳಲ್ಲಿ ಭಾಗವಹಿಸಲು ಪ್ರೇರೇಪಿಸುತ್ತಿತ್ತು. ಆದರೆ ಇಂದು ಬೃಹತ್ ಅಗಿ ಬೆಳೆದಿರುವ ಮಾಧ್ಯಮ ತುಂಬಾ ಸಣ್ಣ ಪ್ರಮಾಣದಲ್ಲಿ ಸಮಾಜ ಸುಧಾರಣೆ ತರಲು ಆಗದೇ ಒದ್ದಾಡುತ್ತಿದೆ. ಸರ್ಕಾರಗಳ ತುತ್ತೂರಿಯಾಗಿದೆ. ಮಾಧ್ಯಮಗಳ ಕಾರ್ಪೋರೇಟ್ ಒಡೆತನ ಮತ್ತು ಸಂಪಾದಕ ಸ್ಥಾನಗಳಲ್ಲಿ ಕೇವಲ ಉನ್ನತ ಜಾತಿಯ ಜನರ ಏಕಸ್ವಾಮ್ಯತೆಯಿಂದಾಗಿ ಸಮಾಜದ ಜ್ವಲಂತ ಸಮಸ್ಯೆಗಳು ವರದಿಯಾಗುವುದಿಲ್ಲ. ಕೇವಲ ಶ್ರೀಮಂತರ, ಉಳ್ಳವರ ಸಂಬಂಧಿ ವಿಷಯಗಳು, ಅವರ ಅಗತ್ಯಗಳನ್ನು ಪೂರೈಸುವ ವರದಿಗಳನ್ನು ನೀಡುತ್ತಿರುವ ಮಾಧ್ಯಮಗಳು ಮ್ಯಾಕ್‌ಡೊನಾಲ್ಡೈಸೇಶನ್ ಪ್ರಕ್ರಿಯೆಗೆ ಒಳಗಾಗಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಯ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಡಾ. ನವೀನ್ ಕುಮಾರ್, ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಡಾ. ನಾಗ್ಯಾನಾಯ್ಕ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಜಿ. ಎನ್. ಮೋಹನ್, ವಿಭಾಗದ ಡಾ. ರೇಚಲ್ ಬಾರಿ, ಡಾ. ರಾಮ್ ಪ್ರಸಾದ್, ಡಾ. ಪೂರ್ಣಾನಂದ, ಡಾ. ವೀಣಾ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಾಪಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡು ಸಾಗಬೇಕು: ರಾಹುಲ್ ಗಾಂಧಿ

Next Post

ಡಾ. ಶಿವಕುಮಾರ ಸ್ವಾಮಿಗಳ 115ನೇ ಜನ್ಮದಿನಾಚರಣೆ: ಬಸವ ಭಾರತ ಕಾರ್ಯಕ್ರಮಕ್ಕೆ ಚಾಲನೆ

kalpa News

kalpa News

Next Post
ಡಾ. ಶಿವಕುಮಾರ ಸ್ವಾಮಿಗಳ 115ನೇ ಜನ್ಮದಿನಾಚರಣೆ: ಬಸವ ಭಾರತ ಕಾರ್ಯಕ್ರಮಕ್ಕೆ ಚಾಲನೆ

ಡಾ. ಶಿವಕುಮಾರ ಸ್ವಾಮಿಗಳ 115ನೇ ಜನ್ಮದಿನಾಚರಣೆ: ಬಸವ ಭಾರತ ಕಾರ್ಯಕ್ರಮಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL