No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜಧಾನಿಗೆ ಮತ್ತೊಂದು ಗರಿ `ಭಾಗವತ ಕೀರ್ತಿಧಾಮ’: ಭಂಡಾರಕೇರಿ ಶ್ರೀ ವಿದ್ಯೇಶತೀರ್ಥರ ಸಾರಥ್ಯದಲ್ಲಿ ಸೇವೆಗೆ ಸಜ್ಜು

ನಾಡಿನ ಪ್ರತಿಷ್ಠಿತ ಮಠಾಧೀಶರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಚಟುವಟಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 5, 2022
in ಬೆಂಗಳೂರು ನಗರ
0
ರಾಜಧಾನಿಗೆ ಮತ್ತೊಂದು ಗರಿ `ಭಾಗವತ ಕೀರ್ತಿಧಾಮ’: ಭಂಡಾರಕೇರಿ ಶ್ರೀ ವಿದ್ಯೇಶತೀರ್ಥರ ಸಾರಥ್ಯದಲ್ಲಿ ಸೇವೆಗೆ ಸಜ್ಜು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜಧಾನಿ ಬೆಂಗಳೂರು ಈಗ ಮತ್ತೊಂದು ಸುಸಜ್ಜಿತ ಧಾರ್ಮಿಕ ಕ್ಷೇತ್ರವನ್ನು ತನ್ನ ಮಡಿಲಿಗೆ ಸೇರಿಸಿಕೊಳ್ಳಲು ಸನ್ನದ್ಧವಾಗಿದೆ. ಅದುವೇ ಗಿರಿನಗರದ `ಭಾಗವತ ಕೀರ್ತಿಧಾಮ’. ಹೌದು. ಗಿರಿನಗರ ಎಂದರೆ ಅದೊಂದು ಧಾರ್ಮಿಕ ಕ್ಷೇತ್ರ ಇದ್ದಹಾಗೆ. ಈ ಕ್ಷೇತ್ರಕ್ಕೆ ಮತ್ತೊಂದು ಗರಿ ಮೂಡಲು ಈಗ ಸರ್ವ ಸಿದ್ಧತೆಗಳು ನಡೆದಿವೆ. ಉಡುಪಿ ಭಂಡಾರಕೇರಿ ಮಠ ಗಿರಿನಗರ 2ನೇ ಹಂತದ ಶಾಂತಿನಿಕೇತನ ಶಾಲೆ ಸಮೀಪ ನಿರ್ಮಿಸಿರುವ ನೂತನ ಕಟ್ಟಡ `ಭಾಗವತ ಕೀರ್ತಿಧಾಮ’ Bhagawatha Kirthidhama ದ ಉದ್ಘಾಟನೆ, ಸುಧಾಮಂಗಳ ಮತ್ತು ಶ್ರೀ ಮಾಧ್ವ ರಾದ್ಧಾಂತ ಸಂವರ್ಧಕ ಸಭಾ ನಿಮಿತ್ತ ಏ. 6ರಿಂದ 11ರ ವರೆಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಂಡಾರಕೇರಿ ಶ್ರೀ ವಿದ್ಯೇಶತೀರ್ಥರ ಸಾರಥ್ಯದಲ್ಲಿ 6 ದಿನಗಳ ಕಾಲ ವಿವಿಧ ಮಠಾಧೀಶರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.


ಉದ್ದೇಶ ಏನಿದೆ ? :

ದ್ವೈತ ಮತ ಸಿದ್ಧಾಂತ ಪ್ರತಿಷ್ಠಾಪನಾಚಾರ್ಯರಾದ ಶ್ರೀಮನ್ ಮಧ್ವಾಚಾರ್ಯರ ಪ್ರಣೀತವಾದ ಮಧ್ವ ಮತದ ಅನುಸರಣೆ, ಗ್ರಂಥಗಳ ಅಧ್ಯಯನ, ಅಧ್ಯಾಪನ, ಪ್ರಸಾರ, ಪ್ರಚಾರ, ಟೀಕೆ, ಟಿಪ್ಪಣಿಗಣ ರಚನೆ, ಮಧ್ವಮತದ ಮಹತ್ವ ಕುರಿತು ಪ್ರವಚನ, ಜ್ಞಾನ ಪ್ರಸಾರ, ಯುವಕರಲ್ಲಿ ಧರ್ಮಪ್ರಜ್ಞೆ ಮೂಡಿಸುವ ಕೆಲಸಗಳು ಇಂದು ಹೆಚ್ಚಾಗಬೇಕು. ಮಧ್ವಶಾಸ್ತ್ರ ಕುರಿತ ಸಂಶೋಧನೆಗಳು ನಡೆಯಬೇಕು. ಅದಕ್ಕಾಗಿ ಒಂದು ವಾರಗಳ ಕಾಲ `ಶ್ರೀ ಮಾಧ್ವ ರಾದ್ಧಾಂತ ಸಂವರ್ಧಕ ಸಭಾ’- ವಿಶೇಷ ಕಾರ್ಯಕ್ರಮ ಏರ್ಪಡಿಸಿವೆ. ಈ ಸಂದರ್ಭ ನೂತನ ಭವನ ಸೇವೆಗೆ ಸಮರ್ಪಣೆಯಾಗಲಿದೆ ಎನ್ನುತ್ತಾರೆ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥರು.

ನಮ್ಮ ಗುರುಗಳಾದ ಶ್ರೀ ವಿದ್ಯಾಮಾನ್ಯತೀರ್ಥರ ಅಪೇಕ್ಷೆಯಂತೆ ಸುಧಾಗ್ರಂಥ (ಶ್ರೀ ಜಯತೀರ್ಥರಿಂದ ರಚನೆ) ಓದುವ ವರ್ಗವನ್ನು ಬೆಳೆಸಬೇಕು. ನಂತರ ಅದನ್ನು ಸಮಗ್ರವಾಗಿ ಅಧ್ಯಯನ ಮಾಡುವ ವಿದ್ಯಾರ್ಥಿಗಳನ್ನು ಪೋಷಿಸಬೇಕು. ಇವರು ನಮ್ಮ ಸಮುದಾಯದ ದೊಡ್ಡ ಆಸ್ತಿ. ಹಾಗಾಗಿ ಮಠದ ನೂತನ ಕಟ್ಟಡ `ಭಾಗವತ ಕೀರ್ತಿ ಧಾಮ’ ದ ಲೋಕಾರ್ಪಣೆ ಸಂದರ್ಭ ವೈವಿಧ್ಯಮಯ ಕಾರ್ಯಕ್ರಮ ಸರಣಿ ಸಂಪನ್ನಗೊಳ್ಳುತ್ತಿದೆ ಎಂದು ಅವರು ಹೆಮ್ಮೆಯಿಂದ ನುಡಿಯುತ್ತಾರೆ.

ಕಾರ್ಯಕ್ರಮದಲ್ಲಿ ಎಂದು- ಏನು ?
ಏ. 6ರಂದು ಬೆಳಗ್ಗೆ 8.30ಕ್ಕೆ ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥರು ನೂತನ ಕಟ್ಟಡವನ್ನು ಸೇವೆಗೆ ಸಮರ್ಪಣೆ ಮಾಡಲಿದ್ದಾರೆ. ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥರು, ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ. ಅಂದು ಸಂಜೆ ೪ಲ್ಲೆ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರು ನೂತನ ಕಟ್ಟಡದ ಸಭಾ ಭವನ ಉದ್ಘಾಟಿಸಲಿದ್ದಾರೆ. ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥರು, ಶ್ರೀಪಾದರಾಜರ ಮಠದ ಶ್ರೀ ಸುಜಯನಿಥಿ ತೀರ್ಥರು ಉಪಸ್ಥಿತರಿರುತ್ತಾರೆ. ನಂತರ ಪಂಡಿತ ಮಾಹುಲಿ ವಿದ್ಯಾಸಿಂಹಾಚಾರ್ಯರಿಂದ ವಾಕ್ಯಾರ್ಥಗೋಷ್ಠಿ ನಡೆಯಲಿದೆ.
೭ರಂದು ಬೆಳಗ್ಗೆ 7ಕ್ಕೆ ಶ್ರೀ ವಿದ್ಯೇಶತೀರ್ಥರಿಂದ ಸಂಸ್ಥಾನ ಪೂಜೆ, 9.30ಕ್ಕೆ ಆಶ್ಲೇಷಾ ಬಲಿ ಪೂಜೆ ಸಂಪನ್ನಗೊಳ್ಳಲಿದೆ. ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನತೀರ್ಥರ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿಗಳಿಂದ ಸುಧಾ ಅನುವಾದ ಆಯೋಜನೆಗೊಂಡಿದೆ.

ಅಂದು ಸಂಜೆ 4ಕ್ಕೆ ಸಭಾ ಕಾರ್ಯಕ್ರಮದಲ್ಲಿ ತಂಬಿಹಳ್ಳಿ ಮಾಧವತೀರ್ಥ ಸಂಸ್ಥಾನದ ಶ್ರೀ ವಿದ್ಯಾಸಾಗರ ಮಾಧವತೀರ್ಥರು, , ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮಠದ ಶ್ರೀ ಸುಬುಧೇಂದ್ರ ತೀರ್ಥರು, ವ್ಯಾಸರಾಜರ ಮಠದ ಶ್ರೀ ವಿದ್ಯಾಶ್ರೀಶ ತೀರ್ಥರು ಸಾನ್ನಿಧ್ಯ ವಹಿಸಲಿದ್ದು, ವಿದ್ವಾನ್ ರಾಜಾ ಎಸ್. ಗಿರಿ ಆಚಾರ್ಯರ ಅಧ್ಯಕ್ಷತೆಯಲ್ಲಿ ವಾಕ್ಯಾರ್ಥ ಗೋಷ್ಠಿ ನಡೆಯಲಿದೆ.

ಸುಧಾ ಗ್ರಂಥ ಅನುವಾದಕರು:
ಏ. 8ರ ಬೆಳಗ್ಗೆ 10ಕ್ಕೆ ` ಸುಧಾ ಮಂಗಳ ಮಹೋತ್ಸವ’ ಸಂಪನ್ನಗೊಳ್ಳಲಿದೆ. ವಿದ್ಯಾರ್ಥಿಗಳಾದ ಎಸ್. ವ್ಯಾಸರಾಜ, ಎಸ್. ವಿಜಯನಂದನ, ಶ್ರೀ ಕೇಶವದಾಸರು, ಕೆ. ಶ್ರೀನಿಧಿ, ಎನ್.ಕೆ. ಸುಧೀಂದ್ರ ಮೂರ್ತಿ, ವೇದಗರ್ಭ ಶೇಷಗಿರಿಯಾಚಾರ್ಯ, ಕಂಬಾಲೂರು ವಿಜಯ ವಿಠಲಾಚಾರ್ಯ ಮತ್ತು ರಘೂತ್ತಮ ಗುತ್ತಲಾಚಾರ್ಯ ಸುಧಾ ಅನುವಾದ ಮಾಡಲಿದ್ದಾರೆ. ಶ್ರೀ ವಿದ್ಯೇಶತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ. ನಂತರ ಪಂಡಿತರಿಗೆ ಸನ್ಮಾನ ಮತ್ತು ಶ್ರೀ ವಿದ್ಯೇಶತೀರ್ಥರಿಂದ ಅನುಗ್ರಹ ಸಂದೇಶವಿದೆ. 9ರಂದು ಬೆಳಗ್ಗೆ 7ಕ್ಕೆ ಭಂಡಾರಕೇರಿ ಶ್ರೀ ವಿದ್ಯೇಶತೀರ್ಥರಿಂದ ಸಂಸ್ಥಾನ ಪೂಜೆ, 9.30ಕ್ಕೆ ವಿದ್ಯಾರ್ಥಿಗಳಿಂದ ಸುಧಾ ಅನುವಾದ, ಸಂಜೆ 4ಕ್ಕೆ ಸಭಾ ಕಾರ್ಯಕ್ರಮ ಆಯೋಜನೆಗೊಂಡಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅತಿಥಿಗಳಾಗಿ ಆಗಮಿಸಲಿದ್ದು. ಸುಧಾ ಅಧ್ಯಯನ ವಿದ್ಯಾರ್ಥಿಗಳಿಗೆ ವಿದ್ವತ್ ಸನ್ಮಾನ, ದಾನಿಗಳಿಗೆ ಗೌರವಾರ್ಪಣೆ ಮಾಡಲಾಗುವುದು.

ಶ್ರೀ ರಾಮನವಮಿ ಉತ್ಸವ:
ಏ. 10ರ ಬೆಳಗ್ಗೆ 7.30ಕ್ಕೆ ಶ್ರೀ ರಾಮನವಮಿ ಉತ್ಸವ ಪ್ರಯುಕ್ತ ಶ್ರೀ ಕೋದಂಡರಾಮ ದೇವರಿಗೆ ಪಂಚಾಮೃತ ಅಭಿಷೇಕ, ವಿದುಷಿ ಶುಭಾ ಸಂತೋಷ್ ಅವರಿಂದ ವೀಣಾವಾದನ, ಶ್ರೀ ವಿದ್ಯೇಶತೀರ್ಥರಿಂದ ಸಂಸ್ಥಾನಪೂಜೆ ಆಯೋಜನೆಗೊಂಡಿದೆ.

ಸಂಜೆ 4ಕ್ಕೆ ಸಭಾ ಕಾರ್ಯಕ್ರಮವಿದ್ದು, ಗಣ್ಯರಿಗೆ ಮತ್ತು ದಾನಿಗಳಿಗೆ ಸನ್ಮಾನಿಸಲಾಗುತ್ತದೆ. ನಂತರ ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥರಿಂದ ಅನುಗ್ರಹ ಸಂದೇಶ, ಶ್ರೀ ಕೋದಂಡ ರಾಮದೇವರ ರಥೋತ್ಸವ, ದೀಪೋತ್ಸವ, ತೊಟ್ಟಿಲು ಪೂಜೆ ಮತ್ತು ರಂಗ ಪೂಜೆ ನಡೆಯಲಿದೆ.

ಸಮಾರೋಪದಲ್ಲಿ ಮುಖ್ಯಮಂತ್ರಿ:
ಏ. 11ರ ಬೆಳಗ್ಗೆ 7.30ಕ್ಕೆ ಶ್ರೀ ರಾಮತಾರಕ ಹೋಮ, 11ಕ್ಕೆ ಶ್ರೀ ವಿದ್ಯೇಶ ತೀರ್ಥರಿಂದ ಸಂಸ್ಥಾನ ಪೂಜೆ, ಸಂಜೆ 4ಕ್ಕೆ ಶ್ರೀ ವಿದ್ಯೇಶ ತೀರ್ಥ ಸಾನ್ನಿಧ್ಯದಲ್ಲಿ ಉತ್ಸವದ ಸಮಾರೋಪ ಸಮಾರಂಭ ಆಯೋಜನೆಗೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಸಮಾರೋಪ ಭಾಷಣ ಮಾಡಲಿದ್ದಾರೆ. ಸಚಿವ ಸುನೀಲ್ ಕುಮಾರ್, ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಹ್ಮಣ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿವಿಧ ರಂಗದ ಗಣ್ಯರಿಗೆ ಗೌರವಾರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ರೂಪಿಸಲಾಗಿದೆ. ವಿವರಗಳಿಗೆ ಗೋಪಾಲ ಕೃಷ್ಣ (9945525399) ಮತ್ತು ಜಯರಾಂ (80954 93958) ಸಂಪರ್ಕಿಸಬಹುದು ಎಂದು ಶ್ರೀ ಭಂಡಾರಕೇರಿ ಮಠದ ಪ್ರಕಟಣೆ ತಿಳಿಸಿದೆ.

108 ವಿದ್ವಾಂಸರಿಗೆ ಗೌರವಾರ್ಪಣೆ:
ಸುಧಾಮಂಗಳ ಮತ್ತು ಶ್ರೀ ಮಾಧ್ವ ರಾದ್ಧಾಂತ ಸಂವರ್ಧಕ ಸಭಾ ನಿಮಿತ್ತ ವಿದ್ವಾಂಸರಿಗೆ, ಶಾಸ್ತ್ರ ಅಧ್ಯಯನ ಮಾಡಿ ಶ್ರೀ ಮಾಧ್ವ ಸಿದ್ಧಾಂತ ಪ್ರಚಾರ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಂಡಿರುವ ಪಂಡಿತರಿಗೆ ಮತ್ತು ಸುಧಾ ಗ್ರಂಥ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳು ಸೇರಿ ಒಟ್ಟು 108ಜನರಿಗೆ ಶ್ರೀ ಭಂಡಾರಕೇರಿ ಮಠದ ವತಿಯಿಂದ ಗೌರವಪೂರ್ವಕ ವಿದ್ವತ್ ಸನ್ಮಾನ ನಡೆಯುತ್ತಿರುವುದು ಬಹಳ ವಿಶೇಷ.


ಭಾಗವತ ಕೀರ್ತಿ ಧಾಮದಲ್ಲಿ ಏನೆಲ್ಲಾ ಇದೆ?

ಗಿರಿನಗರ 2ನೇ ಹಂತದ ಶಾಂತಿನಿಕೇತನ ಶಾಲೆ ಸಮೀಪ ಭಂಡಾರಕೇರಿ ಮಠ ನಿರ್ಮಿಸಿರುವ ನೂತನ ಕಟ್ಟಡ `ಭಾಗವತ ಕೀರ್ತಿಧಾಮ’ ಯೋಜನಾ ಬದ್ಧವಾಗಿ ನಿರ್ಮಿತಿಗೊಂಡಿದೆ. ನೆಲ ಮಾಳಿಗೆಯಲ್ಲಿ ಹೋಮ, ಹವನ ವೇದಿಕೆ, ಪಾಕಲಶಾಲೆ, ಭೋಜನಶಾಲೆ ಇದೆ. ಮೊದಲ ಹಂತದಲ್ಲಿ ಪೂಜಾ ಮಂದಿರ, ಗರ್ಭಗುಡಿ, ಸಂಕೀರ್ತನೆ ಮತ್ತು ಪ್ರಾರ್ಥನಾ ಸಭಾಂಗಣ, ಧ್ಯಾನ ಮಂದಿರವಿದೆ. ನೂರಾರು ಮಂದಿ ಭಕ್ತರು ಕುಳಿತು ಸಂಸ್ಥಾನ ಪೂಜೆ ನೋಡಲು ಇಲ್ಲಿ ಅವಕಾಶವಿದೆ. ಎರಡನೇ ಮಹಡಿಯಲ್ಲಿ ಶ್ರೀ ಸತ್ಯತೀರ್ಥ ಸಭಾ ಭವನ’ (ಸಂಪೂರ್ಣ ಹವಾ ನಿಯಂತ್ರಿತ, ಸೌಂಡ್ ಪ್ರೂಫ್) ನಿರ್ಮಾಣಗೊಂಡಿದೆ. ಹೊರಗಿನ ಯಾವುದೇ ಗದ್ದಲ, ಗಲಾಟೆಗಳ ತೊಂದರೆ ಇಲ್ಲದೆ ಇಲ್ಲಿ ಪ್ರವಚನ, ವಾಕ್ಯಾರ್ಥ ಮತ್ತು ಪ್ರಬಂಧ ಮಂಡನೆಗೆ ಅವಕಾಶವಿದೆ. 400 ಜನ ಕುಳಿತು ಕಾರ್ಯಕ್ರಮ ವೀಕ್ಷಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಮೂರನೇ ಮಹಡಿಯಲ್ಲಿ ಸಂಶೋಧನಾ ಮಂದಿರ, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ಕೊಠಡಿ, ಜ್ಞಾನಾಲಯ ನಿರ್ಮಿತಿಗೊಂಡಿದೆ. ಮಧ್ವಶಾಸ್ತ್ರ ಆಸಕ್ತರು ಇಲ್ಲಿ ಬಂದು ಉನ್ನತಾಧ್ಯಯನ ನಡೆಸಬಹುದು. ಒಟ್ಟಾರೆ ಭಾಗವತ ಕೀರ್ತಿ ಧಾಮ’ ಬೆಂಗಳೂರಿನ ಧಾರ್ಮಿಕ ಚಟುವಟಿಕೆ ಮತ್ತು ಅಧ್ಯಾತ್ಮದ ಕೇಂದ್ರ ಸ್ಥಾನವಾಗಲಿರುವುದು ಬಹಳ ವಿಶೇಷ.

– ವಾರುಣಿ ರಾಮ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: `ಭಾಗವತ ಕೀರ್ತಿಧಾಮ'BangaloreBhagawatha KirthidhamaCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Previous Post

ನೋಡುಗರ ಮೈನವಿರೇಳಿಸಿದ ರಾಜ್ಯ ಮಟ್ಟದ ಹೋರಿ ಬೆದರಿಸುವ ಹಬ್ಬ…

Next Post

ಕೆರೆ ನೀರು ಸಮಸ್ಯೆ ಬಗೆಹರಿಸಲು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಪವಿತ್ರಾ ರಾಮಯ್ಯ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆರೆ ನೀರು ಸಮಸ್ಯೆ ಬಗೆಹರಿಸಲು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಪವಿತ್ರಾ ರಾಮಯ್ಯ ಸೂಚನೆ

ಕೆರೆ ನೀರು ಸಮಸ್ಯೆ ಬಗೆಹರಿಸಲು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಪವಿತ್ರಾ ರಾಮಯ್ಯ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

March 24, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

March 24, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL