No Result
View All Result
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ
English Articles

Cancellation of Ashokapuram – KSR Bengaluru MEMU trains

by ಕಲ್ಪ ನ್ಯೂಸ್
April 16, 2026
0

Kalpa Media House  |  Bengaluru  | Due to Line Block and Power Block in connection with engineering works at Yeliyur...

Read moreDetails
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ: ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿ

ಕುವೆಂಪು ವಿವಿಯಲ್ಲಿ ಅಲಕ್ಷಿತ ಸಮುದಾಯಗಳು ಮತ್ತು ಸಾಮಾಜಿಕ ನ್ಯಾಯ ವಿಷಯದ ಮೇಲಿನ ವಿಚಾರ ಸಂಕಿರಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2022
in ಶಿವಮೊಗ್ಗ
0
ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ: ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  |

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖಿಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ Manjamma Jogathi ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ Kuvempu University ಪ್ರೊ. ಎಸ್. ಪಿ. ಹೀರೆಮಠ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ ೧೧೫ನೇ ಜನ್ಮದಿನಾಚರಣೆ ಹಾಗೂ ‘ಅಲಕ್ಷಿತ ಸಮುದಾಯಗಳು ಮತ್ತು ಸಾಮಾಜಿಕ ನ್ಯಾಯ’ ವಿಷಯ ಕುರಿತ ಎರಡು ದಿನದ ರಾಷ್ಟೀಯ ವಿಚಾರ ಸಂಕಿರಣವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಸಮಾನತೆಯನ್ನು ತರುವುದು ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಅವರ ಚಿಂತನೆಗಳಾಗಿದ್ದವು. ಅದರಂತೆ ನಡೆಯುವುದೇ ಸಂವಿಧಾನ ಮತ್ತು ಅವರುಗಳಿಗೆ ನಾವು ನೀಡಬಹುದಾದ ಗೌರವ. ದಲಿತರು, ದಮನಿತರು, ಅಂಚಿನಲ್ಲಿರುವ ಸಮುದಾಯಗಳಾದ ನಮಗೆ ಅನುಕಂಪ ಬೇಡ. ಶಿಕ್ಷಣ ಮತ್ತು ದುಡಿಯುವ ಅವಕಾಶಗಳನ್ನು ನೀಡಿ. ಉತ್ತಮವಾದ ಶಿಕ್ಷಣಕ್ಕೆ ಸಮಾಜದಲ್ಲಿ ಸಮಾನತೆ ತರುವ ಶಕ್ತಿಯಿದೆ. ಅಸಾಧ್ಯ ಎಂದು ಯಾರೂ ಹಿಂದುಳಿಯಬಾರದು; ಬದುಕುವ ಮಾರ್ಗಸರಿಯಿದ್ದರೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ತಿಳಿಸಿದರು.

Also read: ಏ.6ರಂದು ಸುರಭಿ ಗೋಶಾಲೆ ಆವರಣದಲ್ಲಿ ನಿರ್ಮಾಣವಾಗಿರುವ ವಸತಿ ಸಮುಚ್ಛಯ ಲೋಕಾರ್ಪಣೆ

ವಿಚಾರ ಸಂಕಿರಣದ ದಿಕ್ಸೂಚಿ ನುಡಿಗಳನ್ನಾಡಿದ ಕನ್ನಡ ವಿವಿ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಕೆ ಎಮ್ ಮೇತ್ರಿ, ಸಾಮಾಜಿಕ ನ್ಯಾಯದ ಮೂಲಕ ಬುಡಕಟ್ಟು ಸಮುದಾಯಗಳೂ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಜನರಿಗೆ ಧೀರ್ಘಕಾಲಿಕ ಯೋಜನೆಗಳನ್ನು ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು. ನಿರ್ಲಕ್ಷಿತರಿಗೆ ಶಿಕ್ಷಣ, ಉದ್ಯೋಗವನ್ನು ನೀಡಬೇಕು. ನಿರ್ಲಕ್ಷಿತರ ಮೇಲೆ ಅಧ್ಯಯನ ಮಾಡಿ ಸಮಾಜದ ಮುಂದೆ ಅವರ ಸಮಸ್ಯೆಗಳನ್ನು ಪ್ರಸ್ತುತಪಡಿಸುವಂತಹ ಕಾರ್ಯಕ್ರಮಗಳು ಜರುಗಬೇಕು. ಅಲಕ್ಷಿತ ಸಮಾಜದ ಜನರ ವಿಶಿಷ್ಟ ಜೀವನ ಶೈಲಿಗಳು, ಸಂಸ್ಕೃತಿಗಳನ್ನು ಅಧ್ಯಯನಿಸಿ ಅರಿಯಬೇಕು, ಗೌರವಿಸಬೇಕು ಆ ಮೂಲಕ ಸರ್ಕಾರದ ನೀತಿ ನಿರೂಪಣೆಗಳಲ್ಲಿ ಅವುಗಳು ಬಿಂಬಿತವಾಗುವಂತೆ ನೋಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಡಾ. ಬಾಬು ಜಗಜೀವನ್ ರಾಮ್ ಅವರು ಕೃಷಿ, ಕಾರ್ಮಿಕ, ವಿಮಾನಯಾನ, ರಕ್ಷಣೆ ಸೇರಿದಂತೆ ವಿವಿಧ ಸಚಿವಾಲಯಗಳಲ್ಲಿ ಸವಾಲುಗಳಿದ್ದಾಗ ವಹಿಸಿಕೊಂಡು ಯಶಸ್ವಿಯಾಗಿ ನಿರ್ವಹಿಸಿ ಮೇಲ್ಪಂಕ್ತಿ ಹಾಕಿಕೊಟ್ಟವರು. ಅಂತಹವರ ಆಲೋಚನೆಗಳು ಸಾಮಾನ್ಯ ಕೂಲಿ ಕಾರ್ಮಿಕನಿಂದಿಡಿದು ಎಲ್ಲ ವರ್ಗಗಳ ಅಭಿವೃದ್ಧಿ ಆಶಯಗಳಿಗೆ ಪೂರಕವಾಗಿರುವುದನ್ನು ಕಂಡಿದ್ದೇವೆ. ಆದಕಾರಣ ಅವರ ಅಧ್ಯಯನ ಪ್ರಸ್ತುತದ ಅಂಚಿನ ಸಮುದಾಯಗಳ ಅಭಿವೃದ್ಧಿಗೆ ದಾರಿದೀವಿಗೆಯಾಗಬಲ್ಲದು ಎಂದು ಆಶಿಸಿದರು.

ಮಂಗಳ ಮುಖಿಯರನ್ನು ಅನುಕಂಪದಿಂದ ನೋಡಬೇಡಿ; ಬದಲಿಗೆ ಅವಕಾಶ ನೀಡಿ ಸಮಾಜದ ಮುಖ್ಯವಾಹಿನಿಗೆ ತನ್ನಿ. ಹೆಣ್ಣಿನ ಆತ್ಮ, ಗಂಡಿನ ಶಕ್ತಿಯನ್ನು ಹೊಂದಿರುವ ನಾವು, ಎಲ್ಲ ಕೆಲಸವನ್ನು ಮಾಡಲು ತಯಾರಿದ್ದೇವೆ. ಮಂಗಳಮುಖಿ ಸಮುದಾಯವನ್ನು ರಕ್ಷಿಸುವುದರ ಜೊತೆಗೆ ಹೆಚ್ಚು ಮೀಸಲಾತಿ ನೀಡಿ ಎಂದು ಮಾತನಾಡುತ್ತ ಪದ್ಮಶ್ರೀ ಪುರಸ್ಕೃತೆ ಜೋಗತಿ ಮಂಜಮ್ಮ ಕೆಲಕ್ಷಣ ಭಾವುಕರಾದರು ಮತ್ತು ಈ ದೃಶ್ಯಕ್ಕೆ ಸಾಕ್ಷಿಯಾದ ಸಭಿಕರ ಕಣ್ಣಾಲಿಗಳು ತುಂಬಿಬಂದವು.
-ಬಿ. ಮಂಜಮ್ಮ ಜೋಗತಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು


ಕಾರ್ಯಕ್ರಮದಲ್ಲಿ ಖ್ಯಾತ ಜನಪದ ಗಾಯಕ ಜೋಗಿಲ ಸಿದ್ಧರಾಜು ಅವರು ಜನಪದ ಗೀತೆಯೊಂದನ್ನು ಹಾಡಿ ಸಭಿಕರನ್ನು ರಂಜಿಸಿದರು. ವಿವಿಯ ಕುಲಸಚಿವೆ ಅನುರಾಧ ಜಿ., ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್ ಕಮಾರ್ ಎಸ್. ಕೆ., ಈ ದಿನ ಡಾಟ್ ಕಾಂ ವೆಬ್‌ತಾಣದ ಸುದ್ದಿ ಸಂಪಾದಕ ಬಿ ವಿ ಶ್ರೀನಾಥ್ ಹಾಗೂ ಡಾ. ಬಾಬು ಜಗಜೀವನ್ ರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಚಾಲಕ ಡಾ. ಸತ್ಯಪ್ರಕಾಶ್ ಎಮ್. ಆರ್. ಮಾತನಾಡಿದರು. ಈ ಸಂದರ್ಭದಲ್ಲಿ ವಿವಿಧ ವಿವಿಗಳ ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಹಾಜರಿದ್ದರು.

ಡಾ. ಅರುಣ್ ಜೋಳದ ಕೂಡ್ಲಿಗಿ ಅವರು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಮಸ್ಯೆಗಳ ಕುರಿತು ಉಪನ್ಯಾಸ ನೀಡಿದರು. ನಂತರ ಸಂಶೋಧನಾರ್ಥಿಗಳು ಮತ್ತು ಉಪನ್ಯಾಸಕರು ಸಮಾವೇಶದ ವಿವಿಧ ಉಪವಿಷಯಗಳ ಮೇಲೆ ಪ್ರಬಂಧಗಳನ್ನು ಮಂಡಿಸಿದರು.

ಪುಸ್ತಕ ಬಿಡುಗಡೆ: 
ಕಾರ್ಯಕ್ರಮದಲ್ಲಿ ಹಾವೇರಿಯ ಕರ್ನಾಟಕ ಜಾನಪದ ವಿವಿಯ ಅಧ್ಯಾಪಕ ಡಾ. ಅರುಣ್ ಜೋಳದ ಕೂಡ್ಲಿಗಿ ಅವರು ‘ಸಂಸತ್ತಿನಲ್ಲಿ ಡಾ. ಬಾಬು ಜಗಜೀವನ್ ರಾಮ್ ಭಾಷಣಗಳು- ಸಂ ೧ ರಕ್ಷಣೆ’ ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು. ಪುಸ್ತಕದ ಪ್ರಸ್ತುತತೆ ಮತ್ತು ವಸ್ತುನಿಷ್ಠತೆ ಕುರಿತು ವಿಜಯ ಕರ್ನಾಟಕದ ಹಿರಿಯ ಪತ್ರಕರ್ತ ಬಿ ಎನ್ ಅನಿಲ್ ಕುಮಾರ್ ಮಾತನಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKuvempu UniversityLatest News KannadaLocal NewsMalnad NewsManjamma JogathiNewsinKannadaNewsKannadaShankaraghattaShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯಮಂಜಮ್ಮ ಜೋಗತಿಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share197Tweet123Send
Previous Post

ಏ.6ರಂದು ಸುರಭಿ ಗೋಶಾಲೆ ಆವರಣದಲ್ಲಿ ನಿರ್ಮಾಣವಾಗಿರುವ ವಸತಿ ಸಮುಚ್ಛಯ ಲೋಕಾರ್ಪಣೆ

Next Post

ಮಂಗಳಮುಖಿಯರ ಬದುಕು ಹಸನುಗೊಳಿಸಲು ಸರ್ಕಾರ ಕಾರ್ಯಕ್ರಮ ರೂಪಿಸುವಂತೆ ಎಂ. ಶ್ರೀಕಾಂತ್‌ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಂಗಳಮುಖಿಯರ ಬದುಕು ಹಸನುಗೊಳಿಸಲು ಸರ್ಕಾರ ಕಾರ್ಯಕ್ರಮ ರೂಪಿಸುವಂತೆ ಎಂ. ಶ್ರೀಕಾಂತ್‌ ಸಲಹೆ

ಮಂಗಳಮುಖಿಯರ ಬದುಕು ಹಸನುಗೊಳಿಸಲು ಸರ್ಕಾರ ಕಾರ್ಯಕ್ರಮ ರೂಪಿಸುವಂತೆ ಎಂ. ಶ್ರೀಕಾಂತ್‌ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು! ಆಗಿದ್ದೇನು?

April 15, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು ಸೇವೆ ಎರಡು ದಿನ ರದ್ದು

April 15, 2026
ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

April 15, 2026
ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL