No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸೋಲಿನ ಭಯ ಬಿಟ್ಟು, ಗೆಲ್ಲಲೇಬೇಕು ಎಂಬ ಛಲದೊಂದಿಗೆ ಆಟ ಆಡಿ: ಮುಖ್ಯಮಂತ್ರಿ ಬೊಮ್ಮಾಯಿ ಕರೆ

kalpa News by kalpa News
April 25, 2022
in ಬೆಂಗಳೂರು ನಗರ
0
ಸೋಲಿನ ಭಯ ಬಿಟ್ಟು, ಗೆಲ್ಲಲೇಬೇಕು ಎಂಬ ಛಲದೊಂದಿಗೆ ಆಟ ಆಡಿ: ಮುಖ್ಯಮಂತ್ರಿ ಬೊಮ್ಮಾಯಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಗೆಲ್ಲಲೇಬೇಕೆಂಬ ಛಲದೊಂದಿಗೆ ಆಟ ಆಡಿ. ಸೋಲಲೇಬಾರದು ಎಂದು ಆಡಿ. ಸೋಲಿನ ಭಯ ಇಲ್ಲದಿದ್ದರೆ ಗೆಲುವು ನಿಮ್ಮದಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಕ್ರೀಡಾಪಟುಗಳಿಗೆ ಕರೆ ನೀಡಿದರು

ಇಂದು ಕಂಠೀರವ ಕ್ರೀಡಾಂಗಣದಲ್ಲಿ ಇಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು Vice President Venkaiah Naidu ಅವರು ಉದ್ಘಾಟಿಸಿದ ಖೇಲೋ ಇಂಡಿಯಾ ಯೂನಿವರ್ಸಿಟಿ ಕ್ರೀಡಾಕೂಟದ Khelo India University Game ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ರಾಷ್ಟಮಟ್ಟದಲ್ಲಿ ಯಾವುದೇ ಕ್ರೀಡಾಕೂಟ ಇದ್ದರೂ ಪ್ರಥಮ ಆದ್ಯತೆಯನ್ನು ಬೆಂಗಳೂರಿಗೆ ನೀಡಬೇಕು. ಈ ಬಾರಿ ಖೇಲೋ ಇಂಡಿಯಾ ಯೂನಿವರ್ಸಿಟಿ ಕ್ರೀಡಾಕೂಟ ಆಯೋಜಿಸಲು ನಮ್ಮ ಮೂಲಭೂತ ಸೌಕರ್ಯಗಳನ್ನು ಹಾಗೂ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದ್ದೇವೆ. ಕ್ರೀಡಾಕೂಟ ಆಯೋಜಿಸಲು ಜೈನ್ ಯೂನಿವರ್ಸಿಟಿ ಬಹಳ ದೊಡ್ಡ ಬೆಂಬಲವನ್ನು ನೀಡಿದೆ. ಕ್ರೀಡಾಕೂಟದ ನಂತರ ಮೌಲ್ಯ ಮಾಪನವನ್ನು ಮಾಡಿ ಕ್ರೀಡಾಕೂಟಗಳನ್ನು ಆಯೋಜಿಸಲು ಬೆಂಗಳೂರಿಗೆ ಆದ್ಯತೆ ನೀಡಬೇಕು ಎಂದರು.

ಗೆಲ್ಲಲೇಬೇಕೆಂದು ಆಟವಾಡಿ:
ಕ್ರೀಡಾ ಪಟುಗಳು ಕ್ರೀಡೆಗಳನ್ನು ಪ್ರಾಮಾಣಿಕವಾಗಿ ಆಡಬೇಕು. ಸೋಲು, ಗೆಲುವು ಆಟದ ಭಾಗ. ಎರಡನ್ನೂ ಸಮನಾಗಿ ತೆಗೆದುಕೊಂಡು ಕ್ರೀಡಾ ಸ್ಪೂರ್ತಿಯಿಂದ ಮುಂದೆಹೋಗೋಣ. ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಆದರೆ ಭಾಗವಹಿಸಲು ಅವಕಾಶ ಸಿಕ್ಕಿದೆ. ಸೋತವರಿಗೆ ಗೆಲ್ಲಲು ಮತ್ತೊಂದು ಅವಕಾಶ ದೊರೆಯುತ್ತದೆ. ಗೆಲ್ಲಲೆಂದೇ ಆಡಿ, ಸೋಲಬಾರದು ಎಂದು ಆಡಿ. ಸೋಲಿನ ಭಯ ಇಲ್ಲದಿದ್ದರೆ ಗೆಲುವು ನಿಮ್ಮದಾಗುತ್ತದೆ ಎಂದು ಕರೆ ನೀಡಿದರು.

ಖೇಲೋ ಇಂಡಿಯಾ ಕಾರ್ಯಕ್ರಮ ವನ್ನು ಬೆಂಗಳೂರಿನಲ್ಲಿ ಆಯೋಜಿಸಿರುವುದು ನಮಗೆ ಅತ್ಯಂತ ಹೆಮ್ಮೆಯ ಸಂಗತಿ.
ಬೆಂಗಳೂರು ಇಡೀ ಭಾರದ ದೇಶದಲ್ಲಿಯೇ ಅತ್ಯಂತ ಪ್ರಗತಿಪರವಾಗಿರುವ ರಾಜಧಾನಿ. ಅಂತರರಾಷ್ಟ್ರೀಯ ನಗರ. ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಬೆಂಗಳೂರಿನಲ್ಲಿ ಯೂನಿವರ್ಸಿಟಿ ಕ್ರೀಡಾಕೂಟ ಜರುಗುತ್ತಿದೆ. ಸುಮಾರು 3800 ಕ್ರೀಡಾಪಟುಗಳು 20 ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.

Also read: ‘ವಿಜಯ ಪತಾಕೆ’ ಚಲನಚಿತ್ರದ ಮುಹೂರ್ತ ಸಮಾರಂಭ

ಜೈನ್ ಕ್ರೀಡಾ ವಿಶ್ವವಿದ್ಯಾಲಯದ ಅವರ ಸಹಯೋಗದಲ್ಲಿ ಕ್ರೀಡಾಕೂಟ ಆಯೋಜಿಸಿರುವುದು ಹೆಮ್ಮೆಯ ಸಂಗತಿ. ಕ್ರೀಡೆಗೆ ಮೀಸಲಾಗಿರುವ ರಾಷ್ಟ್ರ ಮಟ್ಟದ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ ಇರುವುದು ನಮ್ಮ ಹೆಮ್ಮೆ ಎಂದರು.

ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮ ಆಯೋಜಿಸಲು ಹಗಲಿರುಳು ಶ್ರಮಿಸಿ, ಯಶಸ್ವಿಗೊಳಿಸಲು ಪಣ ತೊಟ್ಟಿದ್ದಾರೆ. ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಆತಿಥ್ಯ ಒದಗಿಸಲು ಅವಕಾಶ :
ಬೆಂಗಳೂರಿನಲ್ಲಿ ಕ್ರೀಡಾಕೂಟ ಅಯೋಜಿಸುವ ಮೂಲಕ ಕರ್ನಾಟಕದ ಆತಿಥ್ಯ, ಕ್ರೀಡೆಗಳ ಕುರಿತಾದ ಪ್ರೀತಿ ಮತ್ತು ರಾಷ್ಟ್ರದ ಒಗ್ಗಟ್ಟಿಗೆ ಕೊಡುಗೆ ನೀಡುವ ಅವಕಾಶ ಒದಗಿದೆ. ಕ್ರೀಡೆಗಳ ಹಾಗೂ ಸಂಸ್ಕೃತಿಗಳ ಸಮನ್ವಯಕ್ಕೂ ಇದೊಂದು ಅವಕಾಶ ಕಲ್ಪಿಸಿದಂತಾಗಿದೆ ಎಂದರು.

ಕ್ರೀಡೆಗಳಲ್ಲಿ ತೊಡಗಿರುವವರು ಉತ್ತಮ ಗುಣವುಳ್ಳವರು :
ಕ್ರೀಡೆಗಳು ಮಾನವನ ಅವಿಭಾಜ್ಯ ಅಂಗ. ಸ್ವಾಭಾವಿಕವಾಗಿ ಮಾನವ ಸಾಹಸಿ. ಕ್ರೀಡೆ ಹಾಗಾಗಿ ಸ್ವಾಭಾವಿಕ ಚಟುವಟಿಕೆ. ಕ್ರೀಡೆಗಳು ಛಲ, ಶಿಸ್ತು ಮತ್ತು ಚಾರಿತ್ರ್ಯವನ್ನು ಬೆಳೆಸುತ್ತದೆ. ಛಲ, ಪರಿಶ್ರಮ, ಕ್ರೀಡೆಗಳು ಚಾರಿತ್ರ್ಯವನ್ನು ಕಟ್ಟುವ ಚಟುವಟಿಕೆಯ ಭಾಗವಾಗಿದೆ. ಈ ಗುಣಗಳು ಇರುವುದರಿಂದ ಕ್ರೀಡೆಗಳಲ್ಲಿ ತೊಡಗಿರುವವರು ಉತ್ತಮ ಗುಣವುಳ್ಳ ವ್ಯಕ್ತಿಗಳಾಗಿರುತ್ತಾರೆ. ಅವರು ಸಾಧಕರು ಎಂದರು.

ಪ್ರಧಾನಿಗಳ ಬೆಂಬಲ
ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕ್ರೀಡಾ ಜಗತ್ತಿಗೆ ಹೊಸ ಆಯಾಮವನ್ನು ನೀಡಿದ್ದಾರೆ. ಕ್ರೀಡಾಪಟುಗಳ
ಮನಸ್ಥಿತಿಯನ್ನು ಬದಲಾಯಿಸಿದ್ದಾರೆ. ಒಲಂಪಿಕ್ಸ್ ನಲ್ಲಿ ನಾವು ಭಾಗವಹಿಸಿದರೂ ಪದಕ ಗೆಲ್ಲಲಾಗುವುದಿಲ್ಲ ಎಂಬ ಮಾತಿತ್ತು. ಆದರೆ ಪ್ರಧಾನಿಗಳು ‘ಖೇಲೋ ಇಂಡಿಯಾ’ , ಫಿಟ್ ಇಂಡಿಯಾ, ಜೀತೋ ಇಂಡಿಯಾ ಘೋಷವಾಕ್ಯಗಳನ್ನು ನೀಡಿದರು. ಅದರ ಫಲಿತಾಂಶವಾಗಿ ಭಾರತ ಅತಿ ಹೆಚ್ಚು ಪದಕಗಳನ್ನು ಟೋಕಿಯೋ ಒಲಂಪಿಕ್ಸ್ ನಲ್ಲಿ ಗೆದ್ದಿತು. ನರೇಂದ್ರ ಮೋದಿಯವರ ಸ್ಫೂರ್ತಿ ಹಾಗೂ ಬೆಂಬಲದಿಂದ ಕ್ರೀಡಾಪಟುಗಳ ಸಾಹಸಗಾಥೆ, ಪರಿಶ್ರಮ ಮತ್ತು ಸಾಧನೆ ಮುಂದುವರಿಯಬೇಕು. ಆದ್ದರಿಂದ ವಿಶ್ವವಿದ್ಯಾಲಯ ಕ್ರೀಡಾಕೂಟಗಳು ಖೇಲೋ ಇಂಡಿಯಾದ ಪ್ರಮುಖ ಭಾಗ ಎಂದರು.

ಅಸಾಧ್ಯವಾದುದನ್ನು ಸಾಧಿಸಬಹುದು:
ವಿಶ್ವವಿದ್ಯಾಲಯಗಳು ನಿಮ್ಮೊಳಗಿನ ಅತ್ಯುತ್ತಮವಾದುದನ್ನು ಹೊರಕ್ಕೆ ತೆಗೆದು ಅವಕಾಶಗಳನ್ನು ಒದಗಿಸುವ ಸ್ಥಳ. ಶಿಕ್ಷಣ, ಕ್ರೀಡೆ ಹಾಗೂ ವ್ಯಕ್ತಿತ್ವಗಳನ್ನು ರೂಪಿಸುತ್ತದೆ. ನಿಮ್ಮ ರೆಕ್ಕೆಗಳನ್ನು ತೆರೆದು ಅಸಾಧ್ಯವಾದುದನ್ನು ಸಾಧಿಸಬಹುದು. ಬೆಂಗಳೂರಿನಲ್ಲಿ ಅತ್ಯುತ್ತಮ ಸ್ಥಳಗಳು, ಸಂಸ್ಕೃತಿ, ಹವಾಮಾನವನ್ನು ಆಸ್ವಾದಿಸಲು ಕ್ರೀಡಾ ಜಗತ್ತಿಗೆ ಆಹ್ವಾನ ನೀಡಿದ ಮುಖ್ಯಮಂತ್ರಿಗಳು ಇಲ್ಲಿನ ವ್ಯವಸ್ಥೆ ಮಾತ್ರವಲ್ಲ, ಆತಿಥ್ಯ, ಸ್ನೇಹ, ಮಾರ್ಗದರ್ಶನವನ್ನು ಇತರೆ ರಾಜ್ಯ ಗಳಿಂದ ಆಗಮಿಸಿರುವವರಿಗೆ ನೀಡುತ್ತೇವೆ. ಈ ಕಾರ್ಯಕ್ರಮವನ್ನು ನೆನಪಿಟ್ಟುಕೊಳ್ಳುವ ರೀತಿಯಲ್ಲಿ ನಮ್ಮ ಆತಿಥ್ಯವಿರುತ್ತದೆ. ಕರ್ನಾಟಕಕ್ಕೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ಭಾರತ ಸರ್ಕಾರ ಹಾಗೂ ಕ್ರೀಡಾ ಮಂತ್ರಾಲಯಕ್ಕೆ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteKhelo India University GameLatest News KannadaNewsinKannadaNewsKannadaVice president Venkaiah Naiduಉಪರಾಷ್ಟ್ರಪತಿ ವೆಂಕಯ್ಯನಾಯ್ಡುಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

‘ವಿಜಯ ಪತಾಕೆ’ ಚಲನಚಿತ್ರದ ಮುಹೂರ್ತ ಸಮಾರಂಭ

Next Post

ಚಳ್ಳಕೆರೆ: ಏ.27ರಂದು ಹೊನ್ನಾರು ಹೂಡುವ ಕಾರ್ಯಕ್ರಮ

kalpa News

kalpa News

Next Post
ಚಳ್ಳಕೆರೆ:  ಏ.27ರಂದು ಹೊನ್ನಾರು ಹೂಡುವ ಕಾರ್ಯಕ್ರಮ

ಚಳ್ಳಕೆರೆ: ಏ.27ರಂದು ಹೊನ್ನಾರು ಹೂಡುವ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL