No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದುಡಿಯುವ ವರ್ಗದಿಂದ ದೇಶದ ಆರ್ಥಿಕತೆ ಮುನ್ನಡೆ: ಮುಖ್ಯಮಂತ್ರಿ ಬೊಮ್ಮಾಯಿ

kalpa News by kalpa News
May 13, 2022
in ಬೆಂಗಳೂರು ನಗರ
0
ದುಡಿಯುವ ವರ್ಗದಿಂದ ದೇಶದ ಆರ್ಥಿಕತೆ ಮುನ್ನಡೆ: ಮುಖ್ಯಮಂತ್ರಿ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಈ ದೇಶದ ಆರ್ಥಿಕತೆಯನ್ನು ಬಂಡವಾಳಶಾಹಿಗಳು ಮುನ್ನಡೆಸುತ್ತಿಲ್ಲ. ದುಡಿಯುವ ವರ್ಗ ದೇಶದ ಆರ್ಥಿಕತೆಯನ್ನು ಮುನ್ನಡೆಸುತ್ತಿದೆ. ಪಿರಾಮಿಡ್ ನ ತಳಹಂತದಲ್ಲಿರುವವರು ದೇಶವನ್ನು ನೈಜವಾಗಿ ಮುನ್ನಡೆಸುವವರು. ಅದಕ್ಕಾಗಿ ದುಡಿಯುವ ವರ್ಗಕ್ಕೆ ಅತಿ ಹೆಚ್ವಿನ ಕಾರ್ಯಕ್ರಮ ಹಾಗೂ ಅನುದಾನವನ್ನು ನನ್ನ ಸರ್ಕಾರ ಒದಗಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದರು.

ಅವರು ಇಂದು Intellectual Forum – MAC, Karnataka, and National Intellectual Forum , MAC, ವಿಶಾಖಪಟ್ಟಣಂ, ಇವರ ವತಿಯಿಂದ ಆಯೋಜಿಸಿದ್ದ 4 ನೇ ವಿಶ್ವ ಮಾದಿಗ ದಿನಾಚರಣೆ ಹಾಗೂ ಮಾದಿಗ ಸಮುದಾಯದ ಚಿಂತಕರ ಮತ್ತು ಬುದ್ದಿಜೀವಿಗಳ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಷ್ಟಪಡುವ ಸಮುದಾಯಗಳಲ್ಲಿ ಬೆಳವಣಿಗೆ ತರುವ ಕೆಲಸ ಮಾಡುತ್ತಿದ್ದೇವೆ. ಶಿಕ್ಷಣ, ಉದ್ಯೋಗ, ಮತ್ತು ಸಬಲೀಕರಣದ ಮೂಲಕ ಅವರಲ್ಲಿ ಬದಲಾವಣೆ ತರಲು ಸಾಧ್ಯ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಸೈದ್ಧಾಂತಿಕವಾಗಿ ಕಾರ್ಯಕ್ರಮ ಗಳನ್ನು ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.

Also read: ಬಿಜೆಪಿ ಸರ್ಕಾರದಿಂದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಮಂಜೂರು

ಸಾಮಾಜಿಕ ವ್ಯವಸ್ಥೆ ಯಾವಾಗಲೂ ಯಥಾಸ್ಥಿತಿ ಕಾಪಾಡುವ ಪ್ರಯತ್ನ ಮಾಡುತ್ತದೆ. ಯಾವುದೇ ಬದಲಾವಣೆ ಆಗದಂತೆ ನೋಡಿಕೊಳ್ಳುವ ಹಿತಾಸಕ್ತಿ ವ್ಯವಸ್ಥೆ ಇದೆ. ಸ್ವಾತಂತ್ರ್ಯ ಪೂರ್ವದಲ್ಲಿ ಇದು ಪ್ರಬಲವಾಗಿತ್ತು. ಈ ವರ್ಗೀಕರಣದ ವ್ಯವಸ್ಥೆಯಲ್ಲಿ ಎಣಿ ಇರಲಿಲ್ಲ. ಕೆಳಗಿದ್ದವರಿಗೆ ಮೇಲಿರುವ ಅವಕಾಶಗಳಿರಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಸಂವಿಧಾನಕಾರರು ಇದನ್ನು ಗಮನಿಸಿ ಇದಕ್ಕೆ ಚಲನಾ ಶಕ್ತಿಯನ್ನು ನೀಡಲು ಸಂವಿಧಾನದಲ್ಲಿ ಹಲವಾರು ಅವಕಾಶಗಳನ್ನು ಕಲ್ಪಿಸಿದರು. ಈ ವರ್ಗಗಳೂ ಸಹ ಮಾನವನ ಸಹಜ ಗುಣವಾದ ಅಭಿವೃದ್ಧಿ ಹೊಂದಬೇಕು ಎಂದು ಸಂವಿಧಾನದ ಹಕ್ಕನ್ನು ನೀಡಲಾಗಿದೆ. ಸಂವಿಧಾನದ ಸದುದ್ದೇಶಗಳು ಎಷ್ಟರಮಟ್ಟಿಗೆ ಸಾಕಾರಗೊಳ್ಳುತ್ತದೆ ಎನ್ನುವುದು ಸಂವಿಧಾನವನ್ನು ಅನುಷ್ಠಾನ ಗೊಳಿಸುವವರ ಮೇಲೆ ಅವಲಂಬಿಸಿದೆ ಎಂದರು.

ಶ್ರೇಷ್ಠ ಸಂವಿಧಾನ:
ಭಾರತದ ಸಂವಿಧಾನ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ, ಎಲ್ಲಾ ರಂಗಗಳ ಆಗುಹೋಗುಗಳ ತಕ್ಕ ಹಾಗೆ ನಾವು ಅದನ್ನು ಬದಲಾವಣೆ ಮಾಡುವ ಕ್ರಿಯಾಶೀಲತೆ ಸಂವಿಧಾನದಲ್ಲಿದೆ ಎಂದರು.

ದುಡಿಯುವ ವರ್ಗದ ಭವಿಷ್ಯ ರೂಪಿಸಲು ವೇದಿಕೆ ಚಿಂತಿಸಬೇಕು:
ಜಾಗತೀಕರಣ,ಉದಾರೀಕರಣ, ಖಾಸಗೀಕರಣವಾದಾಗ ಮಾರುಕಟ್ಟೆ ನಿಯಂತ್ರಣದ ನೀತಿಗಳು ಅಸ್ತಿತ್ವಕ್ಕೆ ಬಂದಿತು. ಮಾರುಕಟ್ಟೆಯ ವ್ಯವಸ್ಥೆಯಲ್ಲಿ ಸಮಾನತೆ ಪಡೆಯಲು ಸಾಧ್ಯವಿಲ್ಲ. ಬಲಿಷ್ಠರು ಮಾತ್ರ ಅದರ ಲಾಭವನ್ನು ಪಡೆಯುತ್ತಾರೆ. ದಿನನಿತ್ಯ ದುಡಿಯುವ ದೊಡ್ಡ ವರ್ಗಕ್ಕೆ ಮಾರ್ಗದರ್ಶನ ಅಗತ್ಯವಿದೆ. ದುಡಿಯುವ ವರ್ಗದ ಭವಿಷ್ಯವನ್ನು ಯಾವ ರೀತಿ ರೂಪಿಸಬೇಕೆಂಬ ಚಿಂತನೆ ಮಾಡುವ ವೇದಿಕೆ ಅಗತ್ಯವಿತ್ತು . ಬದಲಾಗುತ್ತಿರುವ ಸಾಮಾಜಿಕ ವ್ಯವಸ್ಥೆಗೆ ತಕ್ಕ ಹಾಗೆ ಸಮಾಜವನ್ನು ಸಿದ್ಧಪಡಿಸುವ ಕೆಲಸಕ್ಕೆ ಈ ವೇದಿಕೆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮುಖ್ಯವಾಹಿನಿಗೆ ಬರಬೇಕು:
ಶಿಕ್ಷಣ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತಳ ಸಮುದಾಯ ಬರಬೇಕಾಗಿದೆ. ಅದರಿಂದ ನಿಮ್ಮ ಹಕ್ಕುಗಳ ಬಗ್ಗೆ ತಿಳಿಯುತ್ತದೆ, ಅವಕಾಶಗಳು ಸಿಗುತ್ತದೆ, ಉದ್ಯೋಗ ದೊರೆತು, ಸ್ವಾವಲಂಬನೆಯ , ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ. ಡಾ: ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರು ನಮಗೆಅ ದನ್ನು ತಿಳಿಸಿಕೊಟ್ಟಿರುವುದು. ಸಂವಿಧಾನದ ಮೂಲಕ ಸಮಾನ ಹಕ್ಕುಗಳನ್ನು ನೀಡಿದ ಮಹಾ ಚೇತನ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತೊಂದೆಡೆ ದೇಶದಲ್ಲಿ ಅನ್ನಕ್ಕೆ ಕೊರತೆ ಉಂಟಾದ ಸಂದರ್ಭದಲ್ಲಿ ಹಸಿರು ಕ್ರಾಂತಿಯ ಮೂಲಕ ಅನ್ನ ಕೊಟ್ಟು ದೇಶವನ್ನು ಸ್ವಾವಲಂಬಿ, ಸ್ವಾಭಿಮಾನಿ ದೇಶವನ್ನಾಗಿಸಿದ ಬಾಬು ಜಗಜೀವನ್ ರಾಮ್. ಇವರಿಗಿಂತ ದೊಡ್ಡ ಪ್ರೇರಣೆಯನ್ನು ಪಡೆಯಲು ಸಾಧ್ಯವಿಲ್ಲ ಎಂದರು. ಇವರಿಂದ ಪ್ರೇರಣೆಯನ್ನು ಪಡೆದಿದ್ದೇನೆ. ಅಂಥ ಒಂದು ಸಮುದಾಯಕ್ಕೆ ಸೇರಿರುವುದಕ್ಕೆ ಅಭಿಮಾನ ಪಡಬೇಕು ಎಂದರು.

ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಬೇಕು:
ಮಾಕ್ಯ್ -ಕರ್ನಾಟಕ ಶಾಖೆಯು ಮೆದುಳು, ಸಮಾಜದ ಗುರುಗಳು ಹೃದಯ ಉಳಿದವರು ಶಕ್ತಿ ಕೊಡುವ ಕೈಗಳು. ಇವೆಲ್ಲಾ ಒಂದಾಗಿ ಸಮಾಜದ ಪ್ರಮುಖ ಸಮಸ್ಯೆಗಳನ್ನು ಬಗೆಹರಿಸಬೇಕು. ಹಲವಾರು ವರ್ಷಗಳ ಆಂತರಿಕ ಮೀಸಲಾತಿಯ ಬೇಡಿಕೆ ಇದೆ. ಈ ಈ ವೇದಿಕೆ ಸಮಾಜಕ್ಕೆ ಮೀಸಲಾತಿಯೂ ಸೇರಿದಂತೆ ಮುಂದಿನ ದಾರಿಯನ್ನು ತೋರಬೇಕು. ಯಾರಿಗೂ ಅನ್ಯಾಯವಾಗದಂತೆ ಯಾವ ರೀತಿ ಮಾಡಬಹುದು ಎನ್ನುವುದರ ಬಗ್ಗೆ ಮಾರ್ಗದರ್ಶನ ಮಾಡಿದರೆ ಸಾಮಾಜಿಕ ಸಾಮರಸ್ಯದಿಂದ ನ್ಯಾಯ ಕೊಡುವ ಕೆಲಸವನ್ನು ಮಾಡುತ್ತೇವೆ ಎಂದರು.

ಸರ್ಕಾರ ನಿಮ್ಮೊಂದಿಗಿದೆ:
ಶೈಕ್ಷಣಿಕವಾಗಿ ಔದ್ಯಮಿಕವಾಗಿ ಅವಕಾಶ ನೀಡಬೇಕೆನ್ನುವುದು ನನ್ನ ಗಮನದಲ್ಲಿದೆ. ಸರ್ಕಾರದ ಕಾರ್ಯಕ್ರಮಗಳಲ್ಲದೆ ಏನು ಮಾಡಬೇಕೆಂದು ಸಲಹೆ ನೀಡಿದರೆ ಅನುಷ್ಠಾನಕ್ಕೆ ಸಿದ್ದ. ಇದಕ್ಕೆ ನಮ್ಮ ಮನೆ ಮತ್ತು ಹೃದಯದ ಬಾಗಿಲುಗಳು ತೆರೆದಿದೆ. ಸರ್ಕಾರ ನಿಮ್ಮೊಂದಿಗಿದೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿ ಸರ್ಕಾರದಿಂದ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಮಂಜೂರು

Next Post

ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಕುವೆಂಪು ವಿವಿ ಪ್ರಾಧ್ಯಾಪಕ ಪ್ರೊ.‌ ತಿಪ್ಪೇಸ್ವಾಮಿಗೆ ಆಹ್ವಾನ

kalpa News

kalpa News

Next Post
ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಕುವೆಂಪು ವಿವಿ ಪ್ರಾಧ್ಯಾಪಕ ಪ್ರೊ.‌ ತಿಪ್ಪೇಸ್ವಾಮಿಗೆ ಆಹ್ವಾನ

ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಕುವೆಂಪು ವಿವಿ ಪ್ರಾಧ್ಯಾಪಕ ಪ್ರೊ.‌ ತಿಪ್ಪೇಸ್ವಾಮಿಗೆ ಆಹ್ವಾನ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL