ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಗುಂಬೆ ಬಳಿಯ ಕಾಸರವಳ್ಳಿ ಗ್ರಾಮದ ಬಳಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಕೊಪ್ಪ ತಾಲೂಕಿನ ಬಂಡಿಗಡಿ ಗ್ರಾಮದ ಕೃಷ್ಣಮೂರ್ತಿ(31) ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯಲ್ಲಿ ಮದುವೆಯೊಂದರಲ್ಲಿ ಪಾಲ್ಗೊಂಡು ಹಿಂತಿರುಗುವಾಗ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿಸುವ ಮೂರ್ಗದಲ್ಲಿ ಮೃತಪಟ್ಟಿದ್ದಾರೆ.
Also read: ಜೈಲ್ ರಸ್ತೆಯಲ್ಲಿ ಅಪ್ರಾಪ್ತೆಯ ಅಪಹರಣ: ಪ್ರಕರಣ ದಾಖಲು

ಆಗುಂಬೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















