ಕಲ್ಪ ಮೀಡಿಯಾ ಹೌಸ್ | ಮುಂಬೈ |
ಹನುಮಾನ್ ಚಾಲೀಸಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಸಂಸದೆ ನವನೀತ್ ರಾಣಾ Actress, MP Navaneth Raana ಅವರಿಗೆ ಕೊಲೆ ಬೆದರಿಕೆ ಬಂದಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸ ಮಾತ್ರೋಶ್ರೀ ಹೊರಗೆ ಹನುಮಾನ್ ಚಾಲೀಸಾ ಪಠಣ ಮಾಡಿರುವುದಕ್ಕೆ ಸಂಬಂಧಿಸಿ ದೇಶದ್ರೋಹದ ಆರೋಪದ ಮೇಲೆ ಶಿಕ್ಷೆಗೆ ಒಳಗಾಗಿರುವ ಸಂಸದೆಗೆ ಇದೀಗ ಬೆದರಿಕೆ ಕರೆಗಳು ಬಂದಿವೆ ಎಂದು ವರದಿಯಾಗಿದೆ.
Also read: ಸಾಗರ-ಹೊಸನಗರ ಎಪಿಎಂಸಿ ವಿಲೀನ: ಶಾಸಕ ಹಾಲಪ್ಪ ಕೊಟ್ಟ ಸ್ಪಷ್ಟನೆಯೇನು?

ತಜಗೆ ಈವರೆಗೂ 11 ಜೀವ ಬೆದರಿಕೆ ಕರೆಗಳು ಬಂದಿದ್ದು, ಕರೆ ಮಾಡಿದ ವ್ಯಕ್ತಿ ಅವಹೇಳನಕಾರಿಯಾಗಿ ನಿಂದಿಸಿದ್ದಾನೆ. ಒಂದು ವೇಳೆ ಮಹಾರಾಷ್ಟ್ರಕ್ಕೆ ಬಂದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















