No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Friday, February 13, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ದಿಟ್ಟ ನಿರ್ಧಾರಗಳ ದೂರದೃಷ್ಟಿಯ ಪ್ರತೀಕ ಪ್ರಧಾನಿ ಮೋದಿ: ಸಿಎಂ ಬೊಮ್ಮಾಯಿ

ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 2, 2022
in ಉಡುಪಿ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಉಡುಪಿ  |

ಪ್ರಧಾನಿ ನರೇಂದ್ರ ಮೋದಿಯವರು ಭಾರತವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ದೇಶದ ಜನರ ಆಶಾಕಿರಣ. ಕಳೆದ 8 ವರ್ಷದಲ್ಲಿ ನರೇಂದ್ರ ಮೋದಿಯವರು ಸಮರ್ಥ, ಭರವಸೆಯ ನಾಯಕರಾಗಿ ಭಾರತದ ಅಭಿವೃದ್ಧಿಯ ಪರ್ವಕ್ಕೆ ನಾಂದಿ ಹಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ತಿಳಿಸಿದರು.

ಅವರು ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು.

ದೇಶದ ಪ್ರಗತಿಗೆ ರಾಜಕೀಯ ಸ್ಥಿರತೆಯನ್ನು ತಂದ ಮುತ್ಸದ್ದಿ ನಾಯಕ. ರಾಜಕೀಯ ಸ್ಥಿರತೆಯ ಜೊತೆಗೆ ಭಾರತ ದೇಶದ ಸಮಗ್ರ ಅಭಿವೃದ್ಧಿಯ ಯಶೋಗಾಥೆಯ ನೇತೃತ್ವವನ್ನು ಮೋದಿಯವರು ಅತ್ಯಂತ ಸಮರ್ಥವಾಗಿ ವಹಿಸಿದ್ದಾರೆ. ದಿಟ್ಟ ನಿರ್ಧಾರಗಳ ದೂರದೃಷ್ಟಿಯ ಪ್ರತೀಕವಾದ ಪ್ರಧಾನಿ ಮೋದಿಯವರು ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸ್ವಾವಲಂಬನೆಯ ಸ್ವಾಭಿಮಾನದ ಬದುಕು ನಡೆಸಲು ದಾರಿ ತೋರಿದ ಧೀಮಂತ ಜನನಾಯಕರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪ್ರಧಾನಿ ಮೋದಿಯವರಿಂದ ಹೊಸ ಮನ್ವಂತರದ ಸೃಷ್ಠಿ:
ಜನರಿಗೆ ಮೂಲಭೂತಸೌಕರ್ಯ, ಉತ್ತಮ ಶಿಕ್ಷಣ, ಆತ್ಮನಿರ್ಭರತೆ ಮೂಲಕ ಹೊಸ ಮನ್ವಂತರವನ್ನು ನರೇಂದ್ರ ಮೋದಿಯವರು ಸೃಷ್ಟಿಮಾಡಿದ್ದಾರೆ. ದೇಶಕ್ಕೆ ಹೊಸ ದಿಕ್ಸೂಚಿಯನ್ನು ನೀಡಿದ್ದಾರೆ. ಅವರನಾಯಕತ್ವ ನಿಸ್ವಾರ್ಥ, ಜನರನ್ನು ಸಶಕ್ತ ಮಾಡುವ ಮೂಲಕ ದೇಶವನ್ನು ಸಶಕ್ತ ಮಾಡುತ್ತಿದ್ದಾರೆ. ಮೋದಿಯವರ ಮೇಲೆ, ಅವರ ಕಾರ್ಯಕ್ರಮಗಳ ಮೇಲೆ ಜನರಿಗೆ ಅಚಲವಾದ ವಿಶ್ವಾಸವಿರಿಸಿದ್ದಾರೆ ಎಂದರು.

Also read: ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದ್ದೇನು? ಇಲ್ಲಿದೆ ಮಾಹಿತಿ

ಜನರನ್ನು ಫಲಾನುಭವಿಗಳಾಗದೇ ಪಾಲುದಾರರನ್ನಾಗಿ ಮಾಡುವ ಗುರಿ:
ಕೋವಿಡ್ ಲಸಿಕೆ, ದುಡಿಯುವ ವರ್ಗದ ಜೀವನಕ್ಕೆ ಆರ್ಥಿಕ ಭದ್ರತೆ, ಆಹಾರ ಭದ್ರತೆ ಸೇರಿದಂತೆ ಅನೇಕ ಗರೀಬ್ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದರು. ಸಬ್ ಕಾಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ಎನ್ನುವ ಮೂಲಕ ಭಾರತದ ಅಭಿವೃದ್ಧಿಯಲ್ಲಿ ಜನರೂ ಭಾಗಿದಾರರಾಗಬೇಕು. ಜನರನ್ನು ಫಲಾನುಭವಿಗಳಾಗದೇ ಪಾಲುದಾರರನ್ನಾಗಿ ಮಾಡಬೇಕೆನ್ನುವ ಗುರಿ ಹೊಂದಿದ್ದಾರೆ. ಜನರ ಏಳಿಗೆಯಿಂದಲೇ ದೇಶದ ಏಳಿಗೆ ಎಂಬುದನ್ನು ಆಡಳಿತ ವರ್ಗಕ್ಕೆ ಮನದಟ್ಟು ಮಾಡಿಸಿದರು. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭಾರತದ ನವನಿರ್ಮಾಣ ಕಾರ್ಯವನ್ನು ಸಾಧಿಸಲಾಗುತ್ತಿದೆ ಎಂದರು.

ಸೆಮಿಕಂಡಕ್ಟರ್ ವಲಯದ ಅಭಿವೃದ್ಧಿಗೆ ಒತ್ತು :
ಪ್ರಧಾನಿ ಮೋದಿಯವರು ಭಾರತದಲ್ಲಿ ಸೆಮಿಕಂಡಕ್ಟರ್ ವಲಯದ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದು, ದೇಶದಲ್ಲಿಯೇ ಮೊದಲ ಸೆಮಿಕಂಡಕ್ಟರ್ ಉತ್ಪಾದನೆ ಕೈಗೊಳ್ಳಲು ಒಪ್ಪಂದ ಸಹಿ ಮಾಡಿರುವುದು ಕರ್ನಾಟಕ ರಾಜ್ಯ .ಹೊಸ ಇಂಧನ ಬಳಿಸಿ, ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರತೆಯನ್ನು ಸಾಧಿಸಲು, ಸೌರಶಕ್ತಿ ಮತ್ತು ಪವನ ವಿದ್ಯುತ್ ನ ಸಂಗ್ರಹಣೆ ಯೋಜನೆ.ಎಥನಾಲ್ ಬಳಕೆ ಮಾಡುವುದು ನರೇಂದ್ರ ಮೋದಿಯವರ ಚಿಂತನೆಯಾಗಿದೆ. ದೇಶದಲ್ಲಿಯೇ ಕರ್ನಾಟಕ ಅತಿ ಹೆಚ್ಚು ಎಥನಾಲ್ ನ್ನು ಉತ್ಪಾದಿಸುವ ರಾಜ್ಯ ಗಿದೆ.ನವೀಕರೀಸಬಹುದಾದ ಇಂಧನ, ಹಸಿರು ಇಂಧನ ಅತಿ ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ಕರ್ನಾಟಕಲ್ಲಿಯೂ ಸೌರಶಕ್ತಿ ಸಂಗ್ರಹಣಾ ಯೋಜನೆಗಳನ್ನು ಶರಾವತಿಯಲ್ಲಿ 5000 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಹೈಡ್ರೋಜನ್ ಇಂಧನ ನೀತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬಳಕೆ ಮಿತಿಗೊಳಿಸಿ ಹಸಿರು ಇಂಧನಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಅಮೋನಿಯಂ ಉತ್ಪಾದನೆಗೆ ಪರಿಶೀಲನೆ ನಡೆಯುತ್ತಿದ್ದು, ಇದು ಸಫಲವಾದರೆ ಭಾರತದ ಕರಾವಳಿ ಭಾಗದಲ್ಲಿ ಹಸಿರು ಇಂಧನವನ್ನುಬಳಸುವ ಚಿಂತನೆ ಕೇಂದ್ರಸರ್ಕಾರಕ್ಕಿದೆ ಎಂದರು.


2014 ರಿಂದ ಅಭಿವೃದ್ಧಿಯನ್ನೇ ಕೇಂದ್ರಬಿಂದುವಾಗಿಸಿದ ಪ್ರಧಾನಿ ಮೋದಿ :
31 ನೇ ಮೇ ಗೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಕ್ಕೆ 8 ವರ್ಷ ಪೂರ್ಣವಾಗಿದೆ. 8 ವರ್ಷದಲ್ಲಿ ಮೋದಿಯವರು ಕೊಟ್ಟಿರುವ ಕಾರ್ಯಕ್ರಮಗಳಿಂದ ಕೋಟ್ಯಾಂತ ಜನರಿಗೆ ಆಗಿರುವ ಲಾಭ, ಕರ್ನಾಟಕಕ್ಕೆ ಆಗಿರುವ ಲಾಭದ ವರದಿಯನ್ನು ಜನ ಮುಂದಿಡುವ ಅವಕಾಶ. 75 ನೇ ಸ್ವಾತಂತ್ರ್ಯೋತ್ಸವದ ‘ಆಜಾದಿ ಕಾ ಅಮೃತ ಮಹೋತ್ಸವ’ ಸಂದರ್ಭ. ಇದು ಆತ್ಮಾವಲೋಕನ ಮತ್ತು ಸಿಂಹಾವಲೋಕನ ಮಾಡುವ ಕಾಲ. ಮುಂದಿನ 25 ವರ್ಷದಲ್ಲಿ ಭಾರತವನ್ನು ಬಲಿಷ್ಠವಾಗಿಸಿ ವಿಶ್ವಮಾನ್ಯ ರಾಷ್ಟ್ರವಾಗಿಸಲು ಸಂಕಲ್ಪ ಮಾಡುವ ಪ್ರಯತ್ನ. 2014ರಲ್ಲಿ ನರೇಂದ್ರಮೋದಿಯವರು ಪ್ರಧಾನಿಯಾದಾಗ ಅಭಿವೃದ್ಧಿಯನ್ನು ಕೇಂದ್ರಬಿಂದುವಾಗಿಸಿಕೊಂಡಿದ್ದು, ಅವರು ಅಧಿಕಾರಕ್ಕೆ ಬಂದಾಗ ದೇಶದ ಸ್ಥಿತಿ, ಇದ್ದ ಸವಾಲುಗಳು, ಅದನ್ನು ಎದುರಿಸಿದ ಬಗೆಗಳು, ಸದೃಢ ದೇಶ ಕಟ್ಟಲು ಸರ್ಮಥ ನಾಯಕತ್ವದ ಬಗ್ಗೆ ಚರ್ಚೆಯಾಗಬೇಕಿದೆ. ಸರ್ಕಾರದ ಕಾರ್ಯವರದಿಯನ್ನು ಜನರ ಮುಂದಿಡುವ ಪದ್ಧತಿಯನ್ನು ಮೋದಿಯವರು ಗುಜರಾತ್ಮುಖ್ಯಮಂತ್ರಿಯಾದಾಗಿನಿಂದ ಪ್ರಾರಂಭಿಸಿದ್ದು, ಈಗಲೂ ಈ ಪದ್ಧತಿಯನ್ನು ಮುಂದುವರೆಸಿದ್ದಾರೆ ಎಂದರು.

ಆತ್ಮನಿರ್ಭರ ಭಾರತ :
ಕೋವಿಡ್ ನ ಸವಾಲನ್ನು ಎದುರಿಸುವ ಸಂದರ್ಭದಲ್ಲಿ ಆತ್ಮನಿರ್ಭರ ಭಾರತ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ಸ್ವಾವಲಂಬನೆಯ ಸ್ವಾಭಿಮಾನಿ ದೇಶ ನಿರ್ಮಾಣದ ಧ್ಯೇಯವನ್ನು ಮೋದಿಯವರು ಹೊಂದಿದ್ದರು. ಕೃಷಿ ಸ್ವಾವಲಂಬನೆ, ಮೇಕ್ ಇನ್ ಇಂಡಿಯಾ, ಮುದ್ರಾಯೋಜನೆಯ ಮೂಲಕ ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ, ಸ್ಟಾರ್ಟ್ ಅಪ್, ರಕ್ಷಣಾ ಕ್ಷೇತ್ರದ ಸ್ವಾವಲಂಬನೆ ಸಾಧಿಸಲಾಗುತ್ತಿದೆ. ಉತ್ಪಾದನೆ ಮತ್ತು ಆದಾಯದಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಿದ್ದಾರೆ.

ದೇಶದ ಪ್ರತಿ ಮನೆಗೆ ನೀರು ತಲುಪಿಸಿ ಯಶೋಗಾಥೆ :
ದೇಶದ ಪ್ರತಿ ಮನೆಗೆ ನೀರು ತಲುಪಿಸುವ ಸಾಹಸವನ್ನು ಈ ಹಿಂದೆ ಯಾವುದೇ ಪ್ರಧಾನಮಂತ್ರಿಗಳು ಮಾಡಿರಲಿಲ್ಲ. ಮನೆಮನೆಗೆ ಗಂಗೆಯಂತಹ ಕಷ್ಟಸಾಧ್ಯವಾದ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಈ ದಿಟ್ಟ ನಿರ್ಧಾರ ಹಾಗೂ ಸಾಹಸದ ಯಶೋಗಾಥೆ ಈಗ ಪ್ರಾರಂಭವಾಗಿದೆ. ಕರ್ನಾಟಕದಲ್ಲಿ ಕಳೆದ ವರ್ಷ ಮೊದಲ ಬಾರಿಗೆ ಜಲಜೀವನಮಿಷನ್ ಯೋಜನೆಯಡಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ತಲುಪಿಸುವ ಕಾರ್ಯ ಮಾಡಲಾಗಿದೆ. ಈ ಯಶಸ್ಸಿಗೆ ಪ್ರೇರಣೆ ಮೋದಿಯವರು. 2024 ರಲ್ಲಿ ದೇಶದ ಪ್ರತಿಯೊಂದು ಮನೆಗೂ ನೀರು ತಲುಪಿಸುವ ಈ ಸವಾಲಿನ ಯೋಜನೆಯನ್ನು ಕೇವಲ ಘೋಷಣೆಯಾಗಿರಿಸದೇ, ಅನುದಾನ ನೀಡಿ, ಯಶಸ್ವಿಗೊಳಿಸಲಾಗಿದೆ ಎಂದರು.

ಜನಸಾಮಾನ್ಯರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿರುವುದಕ್ಕೆ ಅವರ ಕಾರ್ಯಕ್ರಮಗಳೇ ಸಾಕ್ಷಿ. ಜನರು ಸಮಸ್ಯೆಯ ಜೊತೆಗೆ ಜೀವಿಸುತ್ತಾರೆ. ಜನರಿಗೆ ವಿದ್ಯುಚ್ಛಕ್ತಿ ಯೋಜನೆ, ಹೆಣ್ಣುಮಕ್ಕಳಿಗೆ ಉಚಿತ ಗ್ಯಾಸ್ ಸಿಲಿಂಡರ್ ನೀಡುವ ಮುಖಾಂತರ ಅವರಿಗೆ ಆರೋಗ್ಯ ಕರುಣಿಸಿದಂತಾಗಿದೆ. ಸ್ವಚ್ಛಭಾರತ ಅಭಿಯಾನದ ಮೂಲಕ ಬಯಲುಶೌಚಾಲಯ ನಿವಾರಣೆ, ಹೆಣ್ಣುಮಕ್ಕಳ ಆರೋಗ್ಯ, ನೈರ್ಮಲ್ಯೀಕರಣಕ್ಕೆ ಒತ್ತು ನೀಡಿಲಾಯಿತು. ಹೆಣ್ಣುಮಕ್ಕಳಿಗಾಗಿ ಶೌಚಾಲಯ ನಿರ್ಮಿಸುವ ಮೂಲಕ ಹೆಣ್ಣುಮಕ್ಕಳಿಗೆ ಗೌರವ ತಂದುಕೊಡಲಾಯಿತು.

ರೈತರ ಆತ್ಮಗೌರವ ಹೆಚ್ಚಿಸಿದ ಪ್ರಧಾನಿ ಮೋದಿ:
ಆರ್ಥಿಕತೆಗೆ ಪೂರಕವಾಗಿ ಕೃಷಿ , ಉತ್ಪಾದನಾ ಹಾಗೂ ಸೇವಾ ವಲಯ ಅಭಿವೃದ್ಧಿಯಾಗಬೇಕು. ಕೃಷಿ ವಲಯದಲ್ಲಿ 1 % ಅಭಿವೃದ್ಧಿಯಾದರೆ, ಉತ್ಪಾದನಾ ವಲಯದಲ್ಲಿ 4 % ಹಾಗೂ ಸೇವಾ ವಲಯದಲ್ಲಿ 10% ಅಭಿವೃದ್ಧಿಯಾಗುತ್ತದೆ. ಕೃಷಿ ಆರ್ಥಿಕತೆ ಭದ್ರಬುನಾದಿ. ರೈತ ಕಲ್ಯಾಣ ಹಾಗೂ ಕೃಷಿ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅಟಲ್ ಭೂಜಲ ಯೋಜನೆ, ಬೇವುಲೇಪಿತ ಯೂರಿಯಾ ಪೂರೈಕೆ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ. ಕೃಷಿ ಸಮ್ಮಾನ ಯೋಜನೆಯಡಿ ಕೇಂದ್ರದ 6 ಸಾವಿರದ ಜೊತೆಗೆ ರಾಜ್ಯದ 4 ಸಾವಿರ ರೂ. ಸೇರಿಸಿ ಕೃಷಿಕರಿಗೆ ನೆರವು ನೀಡಲಾಗುತ್ತಿದೆ. ಕೃಷಿ ಚಟುವಟಿಕೆಗಳಲ್ಲಿ, ಬೀಜ ಖರೀದಿಯಲ್ಲಿ ಬಳಕೆಯಾಗುವ ಸರ್ಕಾರದ ಈ ನೆರವು ರೈತನ ಆತ್ಮಗೌರವನ್ನು ಉಳಿಸಿದೆ ಎಂದು ಓರ್ವ ರೈತನ ಅನಿಸಿಕೆಯನ್ನು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸ್ಮರಿಸಿದರು.

ಭಾರತದ ಅತಿ ಹೆಚ್ಚು ಸ್ಟಾರ್ಟ್ ಅಪ್ ಹೊಂದಿರುವ ರಾಜ್ಯಕರ್ನಾಟಕ:
ಉತ್ಪಾದನಾ ವಲಯದಲ್ಲಿ ಮೇಕ್ ಇನ್ ಇಂಡಿಯಾ ,ಮುದ್ರಾ ಯೋಜನೆಯ ಮೂಲಕ ಪ್ರತಿ ಜಿಲ್ಲೆಯಲ್ಲಿ 60 ಸಾವಿರದಿಂದ 1 ಲಕ್ಷ ಜನರಿಗೆ ಇದರ ಲಾಭ ದೊರೆತಿದೆ. ವಿಶ್ವದ ಅತಿಹೆಚ್ಚು ಸ್ಟಾರ್ಟ್ ಅಪ್ ಗಳು ಭಾರತದಲ್ಲಿದ್ದು, ಭಾರತದ ಅತಿ ಹೆಚ್ಚು ಸ್ಟಾರ್ಟ್ ಅಪ್ ಗಳು ರಾಜ್ಯದಲ್ಲಿದೆ. ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಫಾರ್ಮಾ, ಐಟಿಬಿಟಿ ಗಳಲ್ಲಿ ಸ್ಟಾರ್ಟ್ ಅಪ್ ಗಳು ಬಂದಿವೆ. ಅತಿ ಹೆಚ್ಚು ಯೂನಿಕಾರ್ನ್ ಗಳು ಕರ್ನಾಟಕದಲ್ಲಿವೆ. ಡೆಕಾಕಾರ್ನ್ ಗಳೂ ಕರ್ನಾಟಕದಲ್ಲಿವೆ. ಹೊಸ ಭಾರತದ ಚಿಂತನೆಯನ್ನು ಮೋದಿಯವರು ಹೊಂದಿದ್ದಾರೆ ಎಂದರು.

ಶಿಕ್ಷಣ ಕ್ರಾಂತಿ ತಂದ ರಾಷ್ಟ್ರೀಯ ಶಿಕ್ಷಣ ನೀತಿ:
ದುಡಿಯುವ ವರ್ಗದ ಸಬಲೀಕರಣಕ್ಕಾಗಿ, ರಸ್ತೆಬದಿ ವ್ಯಾಪಾರಿಗಳಿಗೆ ಸ್ವನಿಧಿ ಮೂಲಕ 50 ಸಾವಿರ ಆರ್ಥಿಕ ನೆರವು ಹಾಗೂ ಬಡಮಕ್ಕಳಿಗೆ ವಿದ್ಯಾನಿಧಿ ಯೋಜನೆಗಳ ಆರ್ಥಿಕ ನೆರವು ನೇರವಾಗಿ ಡಿಬಿಟಿ ಮೂಲಕ ಫಲಾನುಭವಿಗಳಿಗೆ ತಲುಪಿತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಶಿಕ್ಷಣವನ್ನು ತಳಹದಿಯಲ್ಲಿಯೇ ಅರ್ಥಪೂರ್ಣವಾಗಿಸುವ ಪ್ರಯತ್ನವಾಗಿದೆ. ಇದಕ್ಕೆ ಮೂಲಭೂತ ಸೌಕರ್ಯ, ಶಿಕ್ಷಕರ ತರಬೇತಿ. ಶಿಕ್ಷಣದ ಮುಖಾಂತರ ಹೊಸ ಶಿಕ್ಷಣ ಕ್ರಾಂತಿ ಕೈಗೊಳ್ಳಲಾಗಿದೆ ಎಂದರು.

ಅಮೃತ ಕಾಲದ ಅಭಿವೃದ್ದಿಗೆ ಹೊಸ ವೇಗ :
ಮುಂದಿನ ಜನಾಂಗದ ಏಳಿಗೆಯನ್ನು ಗುರಿಯಾಗಿಸಿಕೊಂಡಿರುವ ಮೋದಿಯವರು ಮುತ್ಸದ್ದಿ ನಾಯಕ. 2024ರಲ್ಲಿಯೂ ನರೇಂದ್ರ ಮೋದಿಯವರಿಗೆ ಸಂಪೂರ್ಣ ಜನಮನ್ನಣೆ ದೊರೆಯಲಿದೆ. ಮುಂದಿನ 25 ವರ್ಷಗಳ ಅಮೃತ ಕಾಲದ ಅಭಿವೃದ್ದಿಗೆ ಹೊಸ ವೇಗ , ಹೊಸ ಶಕ್ತಿ ಬರಲಿದೆ. ನರೇಂದ್ರ ಮೋದಿಯವರ ವಿಷನ್ ನಂತೆ ಕರ್ನಾಟಕ ಸರ್ಕಾರವೂ ಕೆಲಸ ಮಾಡುತ್ತಿದೆ. ನವಕರ್ನಾಟಕದಿಂದ ನವಭಾರತದ ನಿರ್ಮಾಣದ ಚಿಂತನೆಯನ್ನು ಕರ್ನಾಟಕ ಹೊಂದಿದ್ದು, ಮೋದಿಯವರ ಮಾರ್ಗದರ್ಶನದಲ್ಲಿ ಕೆಲಸ ಮಾಡಲಾಗುವುದು ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM Basavaraja Bommaicoastal newsDakshina KannadaKannada News WebsiteKannadaNewsKannadaNewsLiveKannadaNewsOnlineKannadaWebsiteKaravali newsLatest News KannadaMangaloreNewsinKannadaNewsKannadaPolitical NewsUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share196Tweet123Send
Previous Post

ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದ್ದೇನು? ಇಲ್ಲಿದೆ ಮಾಹಿತಿ

Next Post

ಸಚಿವ ಬಿ.ಸಿ. ನಾಗೇಶ್ ಮನೆಗೆ ಎನ್‌ಎಸ್‌ಯುಐ ಕಾರ್ಯಕರ್ತರ ಮುತ್ತಿಗೆ: ಡಿ.ಎಸ್. ಅರುಣ್ ಖಂಡನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿ.30ರಂದು ನೂತನ ಎಂಎಲ್‌ಸಿ ಡಿ.ಎಸ್. ಅರುಣ್‌ಗೆ ಅಭಿನಂದನಾ ಕಾರ್ಯಕ್ರಮ

ಸಚಿವ ಬಿ.ಸಿ. ನಾಗೇಶ್ ಮನೆಗೆ ಎನ್‌ಎಸ್‌ಯುಐ ಕಾರ್ಯಕರ್ತರ ಮುತ್ತಿಗೆ: ಡಿ.ಎಸ್. ಅರುಣ್ ಖಂಡನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

ಫಿಲ್ಮ್ ಚೇಂಬರ್’ನಲ್ಲೇ ಹೃದಯಾಘಾತ | ಚಿತ್ರ ನಿರ್ದೇಶಕ ಜೋಸೈಮನ್ ವಿಧಿವಶ

February 13, 2026
ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

ಕನ್ನಡಿಗ ರಾಷ್ಟ್ರಕವಿಗಳ ಸಾಹಿತ್ಯ ಕೊಡುಗೆಯನ್ನು ಯುವ ಸಮುದಾಯ ಅಧ್ಯಯನ ಮಾಡಬೇಕು: ಸುರೇಶ್ ಋಗ್ವೇದಿ

February 13, 2026
ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

ಮೆಗ್ಗಾನ್ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಆರೋಪ | ಕರವೇ ಜನಮನ ರಾಜ್ಯ ಸಂಘಟನೆ ಪ್ರತಿಭಟನೆ

February 13, 2026
ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

ಕಿರುಚಿತ್ರೋತ್ಸವದಲ್ಲಿ ಮಿಂಚಿದ ‘ನೀರೆಲ್ಲವೂ ತೀರ್ಥ’

February 13, 2026
ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

ರಾಷ್ಟ್ರಮಟ್ಟದ ಟಗರು ಕಾಳಗ | ಟ್ರೋಫಿ ಅನಾವರಣಗೊಳಿಸಿದ ಡಾಲಿ ಧನಂಜಯ್ 

February 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL