Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬಿಜೆಪಿ ಜಾಹೀರಾತುಗಳ ವಿರುದ್ಧ ಸಿದ್ಧರಾಮಯ್ಯ ಟೀಕೆ: ಏನು ಹೇಳಿದ್ದಾರೆ? ಇಲ್ಲಿದೆ ನೋಡಿ

June 2, 2022
in ಬೆಂಗಳೂರು ನಗರ, ರಾಜಕೀಯ
0 0
0
File Image

File Image

Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುಗೆ ನೀಡಿದೆ ಎಂದು ಬಿಜೆಪಿಯವರು ನೀಡುತ್ತಿರುವ ಜಾಹೀರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ Siddaramaiah ಅವರು ಟೀಕಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು, ಕೊಡುಗೆ ಎಂಬ ಪದ ಬಳಸಿ ಜಾಹೀರಾತು ನೀಡುತ್ತಿರುವುದು ಸರಿಯಲ್ಲ. ರಾಜ್ಯ ಮತ್ತು ಕೇಂದ್ರದ ಬಿಜೆಪಿಯವರು ನಮ್ಮ ರಾಜ್ಯದ ಜನರನ್ನೇನು ದಡ್ಡರು, ಯೋಚಿಸುವ ಶಕ್ತಿ ಇಲ್ಲದವರು ಎಂದುಕೊಂಡಿದ್ದಾರಾ? ಈ ಬಿಜೆಪಿಯವರ ತಲೆ ಸರಿ ಇದೆಯಾ? 2014 ರಿಂದ ಇದುವರೆಗೆ 8 ವರ್ಷಗಳಲ್ಲಿ ರಾಜ್ಯಕ್ಕೆ 1,29 ಲಕ್ಷ ಕೋಟಿ ರೂಗಳನ್ನು ನರೇಂದ್ರ ಮೋದಿಯವರು “ಕೊಡುಗೆ” ನೀಡಿದ್ದಾರೆ ಎಂದು ಪ್ರತಿ ನಿತ್ಯ ಜಾಹಿರಾತು ನೀಡಲಾಗುತ್ತಿದೆ. ಕೊಡುಗೆ ಎಂಬ ಪದ ಬಳಸಲು ಮೋದಿಯವರೊ ಇಲ್ಲ ಬಿಜೆಪಿಯವರೊ ಅವರ ಸ್ವಂತ ಮನೆಯಿಂದ ತೆಗೆದು ಖುಷಿಗೆ ಗಿಫ್ಟು ಕೊಡುವಂತೆ ಏನಾದರೂ ರಾಜ್ಯಕ್ಕೆ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಬಿಜೆಪಿ ಸರ್ಕಾರಕ್ಕೆ ಏನಾದರೂ ಬೆನ್ನು ಮೂಳೆ ಇದ್ದರೆ ಮೊದಲು ಈ ಜಾಹೀರಾತಿಗೆ ವಿರೋಧ ವ್ಯಕ್ತಪಡಿಸಬೇಕಾಗಿತ್ತು. ಯಾಕೆಂದರೆ ಕಳೆದ 8 ವರ್ಷಗಳಲ್ಲಿ ಮೋದಿಯವರ ರಾಜ್ಯ ವಿರೋಧಿ ಧೋರಣೆಯಿಂದ ನಾವು ಬಹಳಷ್ಟನ್ನು ಕಳೆದುಕೊಂಡಿದ್ದೇವೆ. ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಈ 8 ವರ್ಷಗಳಲ್ಲಿ ನಮ್ಮ ರಾಜ್ಯದಿಂದ ಕನಿಷ್ಟ ಎಂದರೂ 19000000000000 [19 ಲಕ್ಷ ಕೋಟಿ] ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. ಒಂದರ್ಥದಲ್ಲಿ ದೋಚಿಕೊಂಡಿದೆ ಎಂದರೂ ಸರಿಯೆ. ಇಷ್ಟು ದೊಡ್ಡ ಮೊತ್ತವನ್ನು ಸಂಗ್ರಹಿಸಿ ಟಿಪ್ಸು ಕೊಟ್ಟಂತೆ ಕೆಲವು ಯೋಜನೆಗಳಿಗೆ ಕೊಟ್ಟಿರುವ 1.29 ಲಕ್ಷ ಕೋಟಿ ಅನುದಾನಗಳನ್ನು ಕೊಡುಗೆ ಎಂದು ಹೇಳಿ ರಾಜ್ಯದ ಸ್ವಾಭಿಮಾನವನ್ನು ದೆಲ್ಲಿಯ ಕಾಲ ಕೆಳಗೆ ಹಾಕಿರುವ ರಾಜ್ಯ ಬಿಜೆಪಿಗರಿಗೆ ಸ್ವಾಭಿಮಾನ ಎಂಬುದು ಏನಾದರೂ ಇದೆಯೆ? ಎಂಬ ಪ್ರಶ್ನೆಯನ್ನು ಈ ನಾಡಿನ ಪ್ರಜ್ಞಾವಂತರು ಕೇಳುತ್ತಿದ್ದಾರೆ. ಇದರಲ್ಲಿ ನರೇಗ ಯೋಜನೆಯಲ್ಲಿ ಜನರು ಕೂಲಿ ಮಾಡಿದ ಹಣ 27418 ಕೋಟಿಗಳಷ್ಟಿದೆ. ಹಾಗೆಯೇ ಜನರ ವಿಮೆ ಹಣ ಮುಂತಾದವುಗಳೆಲ್ಲ ಈ ಕೊಡುಗೆಯಲ್ಲಿ ಸೇರಿವೆ. ನರೇಗಾ ಮುಂತಾದ ಯೋಜನೆಗಳಲ್ಲಿ ಜನರ ಬೆವರಿಗೆ ಕೊಡುವ ಪ್ರತಿಫಲವನ್ನು ಈ ಬಿಜೆಪಿಯವರು ಕೊಡುಗೆ ಎನ್ನುತ್ತಾರಲ್ಲ, ಇವರು ಮನುಷ್ಯರಾ ಎಂಬುದು ನನ್ನ ಅನುಮಾನ ಎಂದು ಹೇಳಿದ್ದಾರೆ.

ಕರ್ನಾಟಕವು ದೇಶದ ಆರ್ಥಿಕತೆಗೆ ಅತಿದೊಡ್ಡ ಕೊಡುಗೆ ನೀಡುತ್ತಿರುವ ಎರಡನೆ ರಾಜ್ಯ. ಮಹಾರಾಷ್ಟ್ರದ ನಂತರ ಅತಿ ಹೆಚ್ಚು ಜಿಎಸ್‍ಟಿ ಪಾವತಿಸುತ್ತಿರುವ ರಾಜ್ಯ ನಮ್ಮದು. ಆದಾಯ ತೆರಿಗೆ, ಕಾರ್ಪೊರೇಟ್ ತೆರಿಗೆಯ ಪಾವತಿಯಲ್ಲೂ ಸಹ ನಮ್ಮ ರಾಜ್ಯವು ನಿರಂತರವಾಗಿ ಎರಡು ಅಥವಾ ಮೂರನೆ ಸ್ಥಾನದಲ್ಲಿದೆ. ನನ್ನ ಬಳಿ ಆದಾಯ ತೆರಿಗೆ ಇಲಾಖೆಯ 2018-19 ರ ಅಧಿಕೃತ ದಾಖಲೆ ಇದೆ. ಅದರ ಪ್ರಕಾರ ಮಹಾರಾಷ್ಟ್ರ ರಾಜ್ಯವು 4.25 ಲಕ್ಷ ಕೋಟಿ ರೂಗಳಷ್ಟನ್ನು ನೇರ ತೆರಿಗೆಯ ರೂಪದಲ್ಲಿ ಪಾವತಿಸುತ್ತಿದೆ. ದೆಹಲಿಯು 1.66 ಲಕ್ಷ ಕೋಟಿಗಳನ್ನು ಪಾವತಿಸಿತ್ತು. ನಮ್ಮ ರಾಜ್ಯದಿಂದ 1.20 ಲಕ್ಷ ಕೋಟಿಗಳನ್ನು ಕೇಂದ್ರವು ನೇರ ತೆರಿಗೆಯ ಮೂಲಕ ಸಂಗ್ರಹಿಸಿತ್ತು. ಪ್ರಸ್ತುತ ಕರ್ನಾಟಕವು 1.40 ಲಕ್ಷ ಕೋಟಿಗಳಷ್ಟು ನೇರ ತೆರಿಗೆಯನ್ನು [ಆದಾಯ ಮತ್ತು ಕಾರ್ಪೊರೇಟ್ ತೆರಿಗೆ] ಯನ್ನು ಪಾವತಿಸುತ್ತಿದೆ. ಉಳಿದಂತೆ ಗುಜರಾತ್ ಮಾಡೆಲ್ ಎಂದು ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿಯವರ ರಾಜ್ಯವಾದ ಗುಜರಾತು 2018-19 ರಲ್ಲಿ ಪಾವತಿಸಿದ್ದು ಕೇವಲ 49 ಸಾವಿರ ಕೋಟಿ ಮಾತ್ರ. ಆಂಧ್ರ ಪ್ರದೇಶ 46 ಸಾವಿರ ಕೋಟಿ, ಮಧ್ಯಪ್ರದೇಶ 19.7 ಸಾವಿರ ಕೋಟಿ, ಬಿಹಾರ 6.2 ಸಾವಿರ ಕೋಟಿ, ರಾಜಸ್ತಾನ 21 ಸಾವಿರ ಕೋಟಿ, ಉತ್ತರ ಪ್ರದೇಶ 27 ಸಾವಿರ ಕೋಟಿ ಮಾತ್ರ. ತಮಿಳುನಾಡು 74.3 ಸಾವಿರ ಕೋಟಿ ಪಾವತಿಸಿತ್ತು.

2018-19 ರ ಮಾಹಿತಿಯ ಪ್ರಕಾರ ದೇಶದ ಬೊಕ್ಕಸಕ್ಕೆ ನೇರ ತೆರಿಗೆಯ ಮೂಲಕ 11.37 ಲಕ್ಷ ಕೋಟಿ ರೂ ತೆರಿಗೆ ಸಂದಾಯವಾಗಿದ್ದರೆ ಮಹಾರಾಷ್ಟ್ರವೂ ಸೇರಿದಂತೆ ದಕ್ಷಿಣದ 6 ರಾಜ್ಯಗಳು ದೇಶದ ಬೊಕ್ಕಸಕ್ಕೆ 6.96 ಲಕ್ಷ ಕೋಟಿ ರೂಗಳನ್ನು ಪಾವತಿಸಿದ್ದವು. ಇದು ಒಟ್ಟು ನೇರ ತೆರಿಗೆಯಲ್ಲಿ ಶೇ.62 ರಷ್ಟಾಗುತ್ತದೆ. ಜಿ.ಎಸ್.ಟಿ ಯಲ್ಲಿ 2022 ರ ಏಪ್ರಿಲ್ ತಿಂಗಳ ಉದಾಹರಣೆಯೊಂದನ್ನೆ ತೆಗೆದುಕೊಂಡರೆ ಮಹಾರಾಷ್ಟ್ರ ರೂ.27.5 ಸಾವಿರ ಕೋಟಿ, ಕರ್ನಾಟಕ ರೂ.11.82 ಸಾವಿರ ಕೋಟಿ, ಉತ್ತರ ಪ್ರದೇಶ ರೂ.8.5 ಸಾವಿರ ಕೋಟಿ, ರಾಜಸ್ತಾನ ರೂ.4.5 ಸಾವಿರ ಕೋಟಿ, ಮಧ್ಯಪ್ರದೇಶ ರೂ.3.3 ಸಾವಿರ ಕೋಟಿ, ಬಿಹಾರ ರೂ.1.4 ಸಾವಿರ ಕೋಟಿ, ಆಂಧ್ರ ಮತ್ತು ತೆಲಂಗಾಣ ಗಳೆರಡು ರೂ.9.00 ಸಾವಿರ ಕೋಟಿ ಮಾತ್ರ ಪಾವತಿಸಿವೆ. ಈ ವಿಚಾರದಲ್ಲೂ ಸರಿಸುಮಾರು ಶೇ.50 ರಷ್ಟು ತೆರಿಗೆಯನ್ನು ದಕ್ಷಿಣದ ರಾಜ್ಯಗಳು 6 ರಾಜ್ಯಗಳು ಪಾವತಿಸುತ್ತಿವೆ.

ಕಳೆದ 8 ವರ್ಷಗಳಿಂದ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರವು ಕರ್ನಾಟಕ ರಾಜ್ಯವೊಂದರಿಂದಲೆ ಸುಮಾರು ರೂ.19 ಲಕ್ಷ ಕೋಟಿಗಳನ್ನು ನೇರ ಮತ್ತು ಪರೋಕ್ಷ ತೆರಿಗೆಗಳ ರೂಪದಲ್ಲಿ ಕೇಂದ್ರ ಸರ್ಕಾರವು ಸಂಗ್ರಹಿಸಿದೆ. ಕಳೆದ ವರ್ಷ ಕೋವಿಡ್ ಸಂದರ್ಭದಲ್ಲೂ ಕೂಡಾ ಸುಮಾರು ರೂ.3 ಲಕ್ಷ ಕೋಟಿಗಳನ್ನು ಕೇಂದ್ರ ಸರ್ಕಾರ ನಮ್ಮ ರಾಜ್ಯದಿಂದ ಸಂಗ್ರಹಿಸಿದೆ. ಮನಮೋಹನಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ನಮ್ಮ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯಿಂದ 2012 ಮತ್ತು 2013 ರ ಸಾಲಿನಲ್ಲಿ ಮೂರೂವರೆ ಸಾವಿರ ಕೋಟಿಗಳನ್ನು ಮಾತ್ರ ಸಂಗ್ರಹಿಸಿದ್ದರು. ಮೋದಿಯವರು ಪ್ರಧಾನಿಗಳಾದ ಮೇಲೆ ನಮ್ಮ ರಾಜ್ಯದಿಂದ ವರ್ಷಕ್ಕೆ 35000 ಗಳಿಂದ 40000 ಕೋಟಿಗಳನ್ನು ಸಂಗ್ರಹಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬಾಬತ್ತಿನಿಂದಲೆ ಮೋದಿಯವರ ಸರ್ಕಾರ ಕರ್ನಾಟಕ ರಾಜ್ಯದಿಂದ ಕನಿಷ್ಟ ಎಂದರೂ 150000 ಕೋಟಿ ರೂಗಳನ್ನು ದೋಚಿಕೊಂಡಿದೆ.

Also read: ಸಚಿವ ಬಿ.ಸಿ. ನಾಗೇಶ್ ಮನೆಗೆ ಎನ್‌ಎಸ್‌ಯುಐ ಕಾರ್ಯಕರ್ತರ ಮುತ್ತಿಗೆ: ಡಿ.ಎಸ್. ಅರುಣ್ ಖಂಡನೆ

ಇಷ್ಟಾದರೂ ರಾಜ್ಯ , ಕೇಂದ್ರ ಬಿಜೆಪಿ ಸರ್ಕಾರಗಳು ಬಿಡುಗಡೆ ಮಾಡಿರುವ ಜಾಹಿರಾತಿನಲ್ಲಿ 2014 ರಿಂದ 2022 ರವರೆಗೆ ರೂ.1,29,776/- ಕೋಟಿ ರೂಗಳನ್ನು ಕೇಂದ್ರದ ವಿವಿಧ ಯೋಜನೆಗಳಿಗಾಗಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದು ರಾಜ್ಯವು ಪಾವತಿಸಿದ ಒಟ್ಟು ತೆರಿಗೆಯಲ್ಲಿ ಶೇ.6.8 ರಷ್ಟು ಮಾತ್ರ ನಮ್ಮ ರಾಜ್ಯದಲ್ಲಿ ಖರ್ಚು ಮಾಡಿದ್ದಾರೆ ಎಂದು ಅರ್ಥ. ಇದರ ನಂತರ ರೂ.2,14,603/- ಕೋಟಿಗಳನ್ನು ತೆರಿಗೆ ಪಾಲಿನ ರೂಪದಲ್ಲಿ ಹಂಚಿಕೆ ಮಾಡಿದ್ದಾರೆ. ಇದು ರಾಜ್ಯದಿಂದ ಸಂಗ್ರಹಿಸಿದ ತೆರಿಗೆಯಲ್ಲಿ ಶೇ.11.29 ರಷ್ಟು ಮಾತ್ರ. ಈ ರೂ.19 ಲಕ್ಷ ಕೋಟಿಗಳಲ್ಲಿ ತೆರಿಗೆ ಹಂಚಿಕೆ, ಕೇಂದ್ರ ಪುರಸ್ಕøತ ಯೋಜನೆಗಳ ಅನುದಾನ ಹಾಗೂ ಇತರೆ ಯೋಜನಾ ಆಯೋಗದ ಅನುದಾನಗಳ ರೂಪದಲ್ಲಿ (ಕೇಂದ್ರ ಇಲಾಖೆಗಳು ತೆಗೆದುಕೊಳ್ಳುವ ಕಾಮಗಾರಿಗಳು, ಕಾರ್ಯಕ್ರಮಗಳನ್ನು ಹೊರತುಪಡಿಸಿ) ನಮಗೆ ಬರಬೇಕಾಗಿದ್ದ ಅನುದಾನ ಶೇ.42 ರ ಅನುಪಾತದಲ್ಲಿ ರೂ.8 ಲಕ್ಷ ಕÉೂೀಟಿ ರೂಗಳಷ್ಟಾಗಬೇಕು.

ಇದಲ್ಲದೆ ರಾಜ್ಯಗಳಿಗೆ ಹಂಚಿಕೆ ಮಾಡಿದ ನಂತರ ಕೇಂದ್ರವೆ ತನ್ನ ಬಳಿ ಉಳಿಸಿಕೊಳ್ಳುವ ಶೇ. 58 ಕ್ಕೂ ಹೆಚ್ಚಿನ ಅನುದಾನವಿದೆಯಲ್ಲ, ಅದರಲ್ಲಿ ಅದರ ಇಲಾಖೆಗಳ ಮೂಲಕ ರಾಜ್ಯಕ್ಕೆ ಬೇರೆ ಬೇರೆ ಯೋಜನೆಗಳಿಗಳಿಗಾಗಿ ಬಿಡುಗಡೆ ಮಾಡಿದ್ದೆ ಈ 1.29 ಲಕ್ಷ ಕೋಟಿ. ಇದನ್ನೆ ಅವರು ಜಾಹಿರಾತಿನಲ್ಲಿ ಹೇಳಿಕೊಳ್ಳುತ್ತಿರುವುದು. ರಾಜ್ಯದ ಮೇಲಿನ ಬಿಜೆಪಿಯವರ ಕ್ರೌರ್ಯವನ್ನು ಯಾವ ಮಾತುಗಳಲ್ಲಿ ವಿವರಿಸಬೇಕು ಹೇಳಿ.

ಜಿಎಸ್‍ಟಿಯಂಥ ಅಪಕ್ವ ಯೋಜನೆಯನ್ನು ಅನುಷ್ಠಾನ ಮಾಡುವುದಕ್ಕೆ ಮೊದಲು ನಮ್ಮ ರಾಜ್ಯದ ತೆರಿಗೆ ಸಂಗ್ರಹದ ಪ್ರಮಾಣ ಶೇ.14 ರಿಂದ ಶೇ.15 ರಷ್ಟಿತ್ತು.  2015-16 ರಲ್ಲಿ ನಮ್ಮ ಒಟ್ಟು ತೆರಿಗೆ ಸಂಗ್ರಹ ರೂ.1,18,817 ಕೋಟಿಗಳಷ್ಟಿತ್ತು. ಇದು ಶೇ.14 ರ ಪ್ರಮಾಣದಲ್ಲಿ ಬೆಳವಣಿಗೆಯಾಗಿದ್ದರೆ ಈ ವರ್ಷ ನಮ್ಮ ತೆರಿಗೆ ಸಂಗ್ರಹದ ಪ್ರಮಾಣ ರೂ.297,315 ಕೋಟಿಗಳಷ್ಟಿರಬೇಕಿತ್ತು. ಆದರೆ ಈ ವರ್ಷ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ರೂ.1,89,887 ಕೋಟಿಗಳಷ್ಟು ತೆರಿಗೆ ಸಂಗ್ರಹವಾಗಬಹುದು ಎಂದು ಅಂದಾಜಿಸಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರದ ಅಡ್ಡ ಕಸುಬಿ ಆರ್ಥಿಕ ನೀತಿಗಳಿಂದಾಗಿ ರಾಜ್ಯವು ಈ 8 ವರ್ಷಗಳಲ್ಲಿ ಕಳೆದುಕೊಂಡದ್ದು ರೂ.2,96,000/- ಕೋಟಿಗಳಷ್ಟು. ಕಳೆದ 8 ವರ್ಷಗಳ ಸರಾಸರಿ ತೆರಿಗೆ ಸಂಗ್ರಹ ಪ್ರಮಾಣ ಶೇ.6 ರಷ್ಟು ಮಾತ್ರ ಇದೆ. ಇದರಿಂದಾಗಿ ರಾಜ್ಯದ ಆರ್ಥಿಕತೆ ಸಂಕಷ್ಟದ ಸುಳಿಗೆ ಸಿಲುಕಿ ಸಾಲಗಾರ ರಾಜ್ಯವಾಗುತ್ತಿದೆ. ಇದರ ಜೊತೆಗೆ ಬಿಜೆಪಿಯವರ 40 ಪರ್ಸೆಂಟ್ ಕಮಿಷನ್‍ನಿಂದಾಗಿ ರಾಜ್ಯ ದಿವಾಳಿಯಾಗುತ್ತಿದೆ ಎಂದಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPolitical NewsSiddaramaiahಬೆಂಗಳೂರುಸಿದ್ದರಾಮಯ್ಯ
Previous Post

ಸಚಿವ ಬಿ.ಸಿ. ನಾಗೇಶ್ ಮನೆಗೆ ಎನ್‌ಎಸ್‌ಯುಐ ಕಾರ್ಯಕರ್ತರ ಮುತ್ತಿಗೆ: ಡಿ.ಎಸ್. ಅರುಣ್ ಖಂಡನೆ

Next Post

ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!