ಕಲ್ಪ ಮೀಡಿಯಾ ಹೌಸ್ | ರಾಮನಗರ |
ಒಂದೇ ಕುಟುಂಬದ ಮೂವರು ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿ ಒಬ್ಬರು ಮೃತಪಟ್ಟಿರುವ ಘಟನೆ ಮಾಗಡಿಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಅಜ್ಜಿ ಶಾಂತಾ ಬಾಯಿ (50) ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಮಹಿಳೆಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಗಡಿ ಟೌನ್ನ ನೇಯಿಗೆ ಬೀದಿ ನಿವಾಸಿಗಳಾಗಿದ್ದ ಇವರು ಕೌಟುಂಬಿಕ ಕಲಹದ ಹಿನ್ನೆಲೆ ಗೌರಮ್ಮನ ಹಾರಿದ್ದು, ಇದನ್ನು ಗಮನಿಸಿ ಸ್ಥಳೀಯರು ತಕ್ಷಣ ಉಷಾಬಾಯಿ ಹಾಗೂ ನಿರ್ಮಲಾಬಾಯಿಯನ್ನು ರಕ್ಷಣೆ ಮಾಡಿದ್ದಾರೆ. ಶಾಂತಾಬಾಯಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮುಂದುವರೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post