No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿಶ್ವ ಬ್ರೈನ್‌ ಟ್ಯೂಮರ್‌ ದಿನ: ರೋಗಿಯಿಂದ ಯುನೈಟೆಡ್‌ ಆಸ್ಪತ್ರೆ ವೈದ್ಯರಿಗೆ ಅಭಿನಂದನೆ

kalpa News by kalpa News
June 7, 2022
in ಬೆಂಗಳೂರು ನಗರ
0
ವಿಶ್ವ ಬ್ರೈನ್‌ ಟ್ಯೂಮರ್‌ ದಿನ: ರೋಗಿಯಿಂದ ಯುನೈಟೆಡ್‌ ಆಸ್ಪತ್ರೆ ವೈದ್ಯರಿಗೆ ಅಭಿನಂದನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯ ಮೂಲಕ ಬ್ರೈನ್‌ ಟ್ಯೂಮರ್‌ ತಗೆದು ಪ್ರಾಣ ಉಳಿಸಿದ ವೈದ್ಯರುಗಳಿಗೆ 70 ವರ್ಷದ ರೋಗಿಯೊಬ್ಬರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ ಘಟನೆಗೆ ಇಂದು ಜಯನಗರದ ಯುನೈಟೆಡ್‌ ಆಸ್ಪತ್ರೆ United Hospital ಸಾಕ್ಷಿಯಾಯಿತು. ಜೂನ್‌ 8 ವಿಶ್ವ ಬ್ರೈನ್‌ ಟ್ಯೂಮರ್‌ ದಿನಾಚರಣೆಯ ಹಿಂದಿನ ದಿನ ಇಂತಹದ್ದೊಂದು ಕಾರ್ಯಕ್ರಮ ನಡೆದಿದ್ದು ವಿಶೇಷ.

ವಿಶ್ವ ಬ್ರೈನ್‌ ಟ್ಯೂಮರ್‌ ದಿನಾಚರಣೆಯ World Brain Tumor Day ಅಂಗವಾಗಿ ಮಾಹಿತಿಯನ್ನು ನೀಡುವ ಕಾರ್ಯಕ್ರಮದಲ್ಲಿ ಆಕಸ್ಮಿಕವಾಗಿ ಬಂದ ರೋಗಿಗಳು ವೈದ್ಯರನ್ನ ಅಭಿನಂದಿಸಿದರು.

ಒಂದು ವರ್ಷದ ಹಿಂದೆ ಪ್ರಾರಂಭವಾಗಿರುವ ಜಯನಗರದ ಯುನೈಟೆಡ್‌ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಬ್ರೈನ್‌ ಟ್ಯೂಮರ್‌ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಅಳವಡಿಸಿಕೊಳ್ಳಲಾಗಿದೆ. ಸರ್ಜಿಕಲ್‌ ಇನ್ಪೇಕ್ಷನ್‌ ಕಡಿಮೆ ಮಾಡುವಂತಹ ಹಾಗೂ ದಕ್ಷತೆಯನ್ನು ಹೆಚ್ಚಿಸುವಂತಹ ಹೈ ಎಂಡ್‌ ಮಾಡ್ಯೂಲರ್‌ ಆಪರೇಷನ್‌ ಥಿಯೇಟರ್‌ಗಳು, ವಿದೇಶದಿಂದ ತರಿಸಲಾದ ಡೆಡಿಕೇಟೆಡ್‌ ಆಪರೇಟಿಂಗ್‌ ನ್ಯೂರೋ ಮೈಕ್ರೋಸ್ಕೋಪಿ, ಲ್ಯಾಪ್ರೋಸ್ಕೋಪಿ ಟವರ್‌ಗಳನ್ನು ಹೊಂದಿದೆ. ಈ ಸೌಲಭ್ಯಗಳನ್ನು ಬಳಸಿಕೊಂಡು ಕೆಲವು ದಿನಗಳ ಹಿಂದೆ ಜಯನಗರದ ಯುನೈಟೆಡ್‌ ಆಸ್ಪತ್ರೆಯ ನುರಿತ ನ್ಯೂರೋ ಸರ್ಜನ್‌ಗಳು ಅತ್ಯಂತ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯ ಮೂಲಕ ಬ್ರೈನ್‌ ಟ್ಯೂಮರ್‌ನ್ನು ತಗೆದು ಹಾಕಿ 70 ವರ್ಷದ ರೋಗಿಯ ಜೀವವನ್ನು ಉಳಿಸಿದ್ದಾರೆ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ನಡೆದ ಮರುದಿನವೇ ರೋಗಿ ಯಾರ ಸಹಾಯವೂ ಇಲ್ಲದೇ ತನ್ನ ಸ್ವಂತ ಬಲದಿಂದ ನಡೆದಿದ್ದಾರೆ. ಅದರಲ್ಲೂ ಆ ರೋಗಿ ಪ್ರಾಣ ಉಳಿಸಿದ ವೈದ್ಯರಿಗೆ ಆಭಿನಂದನೆ ಸಲ್ಲಿಸಲು ಮುಂದಾಗಿದ್ದು ಯಾವುದೇ ವೈದ್ಯರಿಗೂ ಸಿಗುವ ಅತ್ಯಂತ ಸಂತಸದ ವಿಷಯ ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ವಿಕ್ರಮ ಸಿದ್ದಾರೆಡ್ಡಿ ತಿಳಿಸಿದರು.

Also read: ಮುಂಗಾರು ಸುರಿದು, ಬೆಳೆ ಸಮೃದ್ಧಿಯಾಗಿ ರೈತನ ಬದುಕು ಹಸನಾಗಲಿ: ಸಾಲುಮರದ ತಿಮ್ಮಕ್ಕ ಆಶಯ

ಬ್ರೈನ್‌ ಟ್ಯೂಮರ್‌ ಎಂದಾಕ್ಷಣ ಪ್ರತಿಯೊಬ್ಬರಲ್ಲೂ ಭಯದ ಛಾಯೆ ಆವರಿಸಿಕೊಳ್ಳುತ್ತದೆ. ಬ್ರೈನ್‌ ಟ್ಯೂಮರ್‌ ಬಂತೆಂದರೆ ಜೀವನವೇ ಮುಗಿದು ಹೋಯಿತು ಎನ್ನುವ ಭಾಗವನೆ ಕೆಲವರಲ್ಲಿ ಮೂಡುತ್ತದೆ. ಆದರೆ, ಭಯ ಹೊಂದದೇ ಸಾಕಷ್ಟು ನೂತನ ಚಿಕಿತ್ಸಾ ಪದ್ದತಿಗಳ ಆವಿಷ್ಕಾರ ಹೊಂದಿರುವ ಚಿಕಿತ್ಸೆ ಪಡೆದುಕೊಂಡಲ್ಲಿ ಭಯಪಡುವ ಅಗತ್ಯವಿಲ್ಲ. 70 ವರ್ಷದ ಈ ರೋಗಿಯ ಮೆದುಳಿನ ಪೋಸ್ಟೀರಿಯರ್‌ ಪೋಸಾದ ಆಳದಲ್ಲಿ (Deep seated Tumor in the posterior fossa of the brain) ಅಪಾಯಕಾರಿಯಾದ ಗೆಡ್ಡೆಯೊಂದು ಬೆಳೆದುಕೊಂಡಿತ್ತು. ಇದನ್ನು ತಗೆಯಲು ಬಹಳ ಕಷ್ಟವಾಗುವಂತ ಜಾಗದಲ್ಲಿ ಇದ್ದು ಅಕ್ಕಪಕ್ಕದ ಯಾವುದೇ ಮೆದುಳಿನ ಭಾಗಕ್ಕೆ ಹಾನಿಯಾದರೆ ವ್ಯಕ್ತಿಯ ಜೀವಕ್ಕೂ ಅಪಾಯವಾಗುವ ಸಂಭವವಿತ್ತು. ನಮ್ಮ ನುರಿತ ನ್ಯೂರೋ ಸರ್ಜರಿ ವೈದ್ಯರ ತಂಡ 4 ಗಂಟೆಗಳ ಕ್ಲಿಷ್ಟಕರ ಶಸ್ತ್ರಚಿಕಿತ್ಸೆಯನ್ನು ನಡೆಸಿ ಗೆಡ್ಡೆಯನ್ನು ಹೊರತೆಗೆಯುವಲ್ಲಿ ಯಶಸ್ವಿಯಾಯಿತು. ಆ ರೋಗಿ ಶಸ್ತ್ರಚಿಕಿತ್ಸೆಯ ನಂತರ ಚೆನ್ನಾಗಿ ಚೇತರಿಸಿಕೊಂಡರು. ಅವರು ಇಂದು ನಮ್ಮ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು ಬಹಳ ಸಂತಸ ತಂದಿತು ಎಂದು ತಿಳಿಸಿದರು.


ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಶಾಂತಕುಮಾರ್‌ ಮುರುಡಾ ಮಾತನಾಡಿ, ಇಂತಹ ಘಟನೆಗಳು ವೈದ್ಯರಾದ ನಮಗೆ ಬಹಳ ಖುಷಿ ತರುವಂತಹದ್ದಾಗಿವೆ. ಒಂದು ವರ್ಷದ ಅವಧಿಯಲ್ಲೇ ಎನ್‌ಎಬಿಎಲ್‌ ಮತ್ತು ಎನ್‌ಎಬಿಹೆಚ್‌ ಸರ್ಟಿಫಿಕೇಟನ್ನು ಪಡೆದುಕೊಂಡಿದ್ದೇವೆ. ಈ ಶಸ್ತ್ರಚಿಕಿತ್ಸೆಯನ್ನ ಭಾನುವಾರದಂದೇ ಮಾಡಬೇಕಾದಂತಹ ತುರ್ತು ಇತ್ತು. ಪ್ರಿ ಸರ್ಜಿಕಲ್‌ ಡಯಾಗ್ನೋಸ್ಟಿಕ್‌ನಲ್ಲಿ ಮಾಲಿಗ್ನಾಂಟ್‌ ಟ್ಯೂಮರ್‌ ಎಂಬುದು ಕಂಡುಬಂದಿತು. ಭಾನುವಾರದ ರಜಾದಿನದಲ್ಲೂ ನಮ್ಮ ಆಸ್ಪತ್ರೆಯ ಪ್ಯಾಥಾಲಜಿ ವಿಭಾಗ ಶಸ್ತ್ರಚಿಕಿತ್ಸೆ ಮಧ್ಯದಲ್ಲೇ ಇಂಟ್ರಾ ಆಪರೇಟಿವ್‌ ಡಯಾಗ್ನೋಸಿಸ್‌ ಮಾಡಿ ಸಹಕಾರ ನೀಡಿತು. ಅನಿವಾರ್ಯ ಸಂಧರ್ಭಗಳಲ್ಲಿ ಮಾತ್ರ ನಮ್ಮ ಆಸ್ಪತ್ರೆ ಶಸ್ತ್ರಚಿಕಿತ್ಸೆಗೆ ಸಲಹೆ ನೀಡುತ್ತದೆ. ಇನ್ನು ಕೆಲವು ಸಂಧರ್ಭಗಳಲ್ಲಿ ಮಲ್ಟಿಡಿಸಪ್ಲೀನರೀ ಅಪ್ರೋಚ್‌ ಮೂಲಕ ಮಲ್ಟಿಡಿಸಿಪ್ಲೀನರೀ ಚಿಕಿತ್ಸೆಯ ಮೂಲಕ ಟ್ಯೂಮರ್‌ನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲಾಗುತ್ತಿದೆ. ಇಂತಹ ಶಸ್ತ್ರಚಿಕಿತ್ಸೆ ನಡೆಸದೇ ಇರುವ ರೋಗಿಯೂ ಇಂದು ಬಂದಿರುವುದು ಸಂತಸ ಇಮ್ಮಡಿಯಾಗಿದೆ ಎಂದು ಹೇಳಿದರು.

ಯಾವುದೇ ಕಾಯಿಲೆಯನ್ನು ಪ್ರಾಥಮಿಕ ಹಂತದಲ್ಲಿ ಗುರುತಿಸುವಿಕೆಯಿಂದ ದೊಡ್ಡ ಹಾನಿಯನ್ನು ತಪ್ಪಿಸಬಹುದಾಗಿದೆ. ಕಾಯಿಲೆಯ ಲಕ್ಷಣಗಳನ್ನು ಕಡೆಗಣಿಸದೇ ಚಿಕಿತ್ಸೆ ಪಡೆಯುವುದರಿಂದ ಶಸ್ತ್ರಚಿಕಿತ್ಸೆಗೆ ಒಳಗಾಗುವುದನ್ನು ತಪ್ಪಿಸಬಹುದಾಗಿದೆ.

ಈ ಸಂದರ್ಭದಲ್ಲಿ ಜಯನಗರದ ಯುನೈಟೆಡ್‌ ಆಸ್ಪತ್ರೆಯ ನ್ಯೂರೋಸರ್ಜರಿ ವಿಭಾಗದ ವೈದ್ಯರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaUnited HospitalWorld Brain Tumor Dayಬೆಂಗಳೂರುಯುನೈಟೆಡ್‌ ಆಸ್ಪತ್ರೆವಿಶ್ವ ಬ್ರೈನ್‌ ಟ್ಯೂಮರ್‌ ದಿನಾಚರಣೆ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಗಾರು ಸುರಿದು, ಬೆಳೆ ಸಮೃದ್ಧಿಯಾಗಿ ರೈತನ ಬದುಕು ಹಸನಾಗಲಿ: ಸಾಲುಮರದ ತಿಮ್ಮಕ್ಕ ಆಶಯ

Next Post

World Brain Tumour Day: Patient honours his doctors

kalpa News

kalpa News

Next Post
World Brain Tumour Day: Patient honours his doctors

World Brain Tumour Day: Patient honours his doctors

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL