ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ಜಿಲ್ಲಾಸ್ಪತ್ರೆ ಬ್ರಿಮ್ಸ್ ಸೇರಿದಂತೆ ದಕ್ಷಿಣ ಕ್ಷೇತ್ರದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು ಸಾಕಷ್ಟು ಅವ್ಯವಸ್ಥೆಯ ಆಗರಗಳಾಗಿವೆ. ಅವುಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸಚಿವರು, ಬೀದರ ಲೋಕಸಭಾ ಸಂಸದರು, ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿರುವ ಭಗವಂತ ಖೂಬಾರವರ ಅಧ್ಯಕ್ಷತೆಯಲ್ಲಿ ಬೀದರ್ ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿನ ನ್ಯೂನತೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಬೀದರ್ ನಲ್ಲಿರುವ ಬ್ರಿಮ್ಸ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಅನೇಕರು ತಮ್ಮ ಬಳಿಗೆ ಬಂದು ಅಳಲು ತೋಡಿಕೊಂಡಿದ್ದಾರೆ. ಇಲ್ಲಿ ಯಾವುದೇ ರೀತಿ ಸೂಪರ್ ಸ್ಪೇಷಾಲಿಟಿ ವ್ಯವಸ್ಥೆ ಇಲ್ಲ. ಜಿಲ್ಲೆಯ ಜನರು ಪಕ್ಕದ ಮಹಾರಾಷ್ಟ್ರ, ತೆಲಂಗಾಣ ರಾಜ್ಯಕ್ಕೆ ಹೋಗಿ ಚಿಕಿತ್ಸೆ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲಾ ಕಾರಣ ಯಾರು. ಸಮಸ್ಯೆಗಳಿಗೆ ಪರಿಹಾರವೇನು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಪ್ರಶ್ನಿಸಿದರು.
ಬೀದರ್ ದಕ್ಷಿಣ ಕ್ಷೇತ್ರದ ಮನ್ನಾಎಖೇಳ್ಳಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ನಾನು ಎರಡು ಕೋಟಿ ರೂ. ಅನುದಾನ ಒದಗಿಸಿದ್ದೇನೆ. ಅಲ್ಲಿ ಡಯಾಲಿಸಿಸ್ ಸೆಂಟರ್ ನೀಡಬೇಕು. ಜಿಲ್ಲೆಯಲ್ಲಿನ ಆಸ್ಪತ್ರೆಗಳಲ್ಲಿ ಅನೇಕ ಸಮಸ್ಯೆಗಳಿವೆ ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಆರೋಗ್ಯ ಚೀಟಿ ಇದ್ದು ಇಲ್ಲದಂತಾಗಿವೆ. ಆರೋಗ್ಯ ಚೀಟಿ ಹೊಂದಿರುವ ಬಡವರಿಗೆ ಅನ್ಯಾಯವಾಗುತ್ತಿದೆ. ಅದನ್ನು ಸರಿಪಡಿಸಬೇಕು ಎಂದರು.
ತಮ್ಮ ಕ್ಷೇತ್ರದ ಮೀನಕೇರಾ ಗ್ರಾಮದ ವ್ಯಕ್ತಿಯೊಬ್ಬರಿಗೆ ಹುಚ್ಚು ನಾಯಿ ಕಚ್ಚಿದೆ. ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಹೋದಾಗ ಅಲ್ಲಿ ಇಂಜೆಕ್ಷನ್ ಸಿಕ್ಕಿಲ್ಲ. ಸಮುದಾಯ ಆರೋಗ್ಯ ಕೇಂದ್ರದಲ್ಲೂ ಸಿಕ್ಕಿಲ್ಲ. ಇನ್ನೂ ಜಿಲ್ಲಾಸ್ಪತ್ರೆಗೆ ಹೋದಾಗಲೂ ಅವರಿಗೆ ಇಂಜೆಕ್ಷನ್ ನೀಡಿಲ್ಲ. ಎರಡು ಮೂರು ದಿನಗಳಾದರು ಅವರು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿದ್ದಾರೆ. ನಾನು ಮಾತಾಡಿ ಹೇಳಿದರು ಕೂಡ ಇಂಜೆಕ್ಷನ್ ಕೊಟ್ಟಿಲ್ಲ. ಆಸ್ಪತ್ರೆಗಳಲ್ಲಿ ಏನು ಚಿಕಿತ್ಸೆ ನೀಡುತ್ತಿದ್ದಿರಿ, ಸರ್ಕಾರಿ ಆಸ್ಪತ್ರೆಗಳು ಯಾರ ಸೇವೆ ಮಾಡಲು ಇದ್ದಾವೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಪ್ರಶ್ನಿಸಿದರು.
Also read: ಕಳ್ಳತನ ಆರೋಪಿಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ
ಬೀದರ್ ಜಿಲ್ಲೆಯಲ್ಲಿನ ಆಸ್ಪತ್ರೆಗಳ ಅವ್ಯವಸ್ಥೆ, ವಿವಿಧ ಇಲಾಖೆಗಳಲ್ಲಿನ ಲೋಪದೋ?ಗಳು, ಅಧಿಕಾರಿಗಳ ಕರ್ತವ್ಯ ಲೋಪ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಧ್ವನಿ ಎತ್ತುವ ಮೂಲಕ ಬಡವರ, ಶ್ರಮಿಕರ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವಂತೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು. ವಿಧಾನ ಪರಿ?ತ್ ಸದಸ್ಯರಾದ ಅರವಿಂದಕುಮಾರ್ ಅರಳಿ, ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post