Sunday, September 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕನಸಿನ ಬೆನ್ನೇರಿ ಸಾಧನೆಯ ಶಿಖರವೇರಿದ ಡಾ. ಧನಂಜಯ ಸರ್ಜಿ…

June 16, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಡವ, ಶ್ರೀಮಂತ ಎಂಬ ಬೇಧ ಭಾವವಿಲ್ಲದೇ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಉತ್ಕೃಷ್ಠ ಗುಣಮಟ್ಟದ ಸೇವೆಗೆ ಸರ್ಜಿ ಸೂಪರ್‌ ಸ್ಪೆಷಲಿಟಿ ಆಸ್ಪತ್ರೆ ಹೆಸರಾಗಿದ್ದು, ಮಲೆನಾಡಿನ ಮನೆ ಮಾತಾಗಿದೆ.

ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು 2014ರಲ್ಲಿ ಸಣ್ಣದಾಗಿ ಕ್ಲಿನಿಕ್‌ ಮಾದರಿಯಲ್ಲಿ ಶುಭಾರಂಭ ಮಾಡಲಾಗಿತು. ಆದರೆ ಇಂದು 256 ಬೆಡ್‌ಗಳವರೆಗೆ ತಲುಪಿದ್ದು ಪ್ರಸ್ತುತ ಆರೋಗ್ಯ ಕ್ಷೇತ್ರದ ಹೀರೋ ಆಗಿ ಬೆಳೆದು ನಿಂತಿದೆ.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರೂ ಆದ ಡಾ. ಧನಂಜಯ ಸರ್ಜಿ ಅವರು ಮೂಲತಃ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗೊಪ್ಪೇನಹಳ್ಳಿ ಗ್ರಾಮರಾದ ಅವರು ಸ್ವತಃ 62 ಬಾರಿ ರಕ್ತದಾನ ಮಾಡಿದ್ದಾರೆ. ಇವರ ಎಲ್ಲ ಸಾಧನೆಯ ಹಿಂದೆ ತಂದೆ ಸರ್ಜಿ ರುದ್ರಪ್ಪ, ತಾಯಿ ರೇಣುಕಾ, ಆಸ್ಪತ್ರೆಯ ನಿರ್ದೇಶಕರೂ ಆದ ಪತ್ನಿ ನಮಿತಾ ಅವರ ಎಲ್ಲ ರೀತಿಯ ಸಹಕಾರವಿದೆ.

ದಾವಣಗೆರೆ ಜೆಜೆಎಂ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಅತ್ಯುತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮಿದವರು. ಶಿಕ್ಷಣದ ಹಂತದಲ್ಲೇ ಜಿಲ್ಲೆಯ ಆರೋಗ್ಯ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಕನಸು ಕಂಡವರು. ಆ ಕನಸೀಗ ಸಾಕಾರಗೊಂಡಿದೆ. 2007ರ ಮಾರ್ಚ್‌ 18ರಂದು ಶಿವಮೊಗ್ಗದಲ್ಲಿ ಸರ್ಜಿ ಚೈಲ್ಡ್ ಕೇರ್‌ ಸೆಂಟರ್‌ ಮೂಲಕ ಸೇವೆ ಆರಂಭಿಸಲಾಯಿತು. 2014ರಂದು ಜೀರೋ ಹಾಸಿಗೆಯಿಂದ ಶುಭಾರಂಭಗೊಂಡ ಆಸ್ಪತ್ರೆ ಕೇವಲ 9 ವರ್ಷದಲ್ಲಿ 256 ಬೆಡ್‌ವರೆಗೂ ತಲುಪಿರುವುದು ಸಾಧನೆ ಹಾಗೂ ಉತ್ತಮ ಗುಣಮಟ್ಟದ ಸೇವೆಗೆ ನಿದರ್ಶನವಾಗಿದೆ.

ರಾಜ್ಯದ ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಶಿರಸಿ, ಚಿಕ್ಕಮಗಳೂರು, ಹಾಸನ, ಅರಸೀಕೆರೆ ಹಾಗೂ ತುಮಕೂರು, ಬೆಂಗಳೂರು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆ ಪಡೆಯಲು ನಿತ್ಯವೂ ನೂರಾರು ರೋಗಿಗಳು ಬರುತ್ತಿದ್ದಾರೆ. ಒಟ್ಟು 75 ಐಸಿಯು ಬೆಡ್‌ಗಳು, 9 ಆಪರೇಷನ್‌ ಥಿಯೇಟರ್‌ಗಳ ಸೌಲಭ್ಯ ಇದೆ. ಎರಡೂ ಸರ್ಜಿ ಆಸ್ಪತ್ರೆ ಸೇರಿ ವರ್ಷಕ್ಕೆ ಎರಡು ಲಕ್ಷ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರತಿದಿನಕ್ಕೆ ಸರಾಸರಿ 500ರಿಂದ 750 ರೋಗಿಗಳನ್ನು ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ವರ್ಷದಲ್ಲಿ1800ರಿಂದ 2000 ವರೆಗೆ ಹೆರಿಗೆ ಆಗುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸಾಮಾಜಿಕ ಕಳಕಳಿ ಹೊಂದಿರುವ ಸರ್ಜಿ ಆಸ್ಪತ್ರೆಯ ನಿರ್ದೇಶಕ ಧನಂಜಯ ಸರ್ಜಿ ಅವರು ವೈದ್ಯಕೀಯ ವೃತ್ತಿ ಜೊತೆಗೆ ನಿರ್ವಹಿಸುತ್ತಿರುವ ಮಾನವೀಯ ಕಾರ್ಯಗಳು ಹೀಗಿವೆ.

  • ರೌಂಡ್‌ ಟೇಬಲ್‌ ಸಂಸ್ಥೆ ಜತೆಗೂಡಿ ಶಿವಮೊಗ್ಗದಲ್ಲಿ 2019 ರಲ್ಲಿ ಮಹಾಮಳೆ ಸಂದರ್ಭ 1200 ಮಂದಿಗೆ ಟೈಪಾಯಿಡ್‌ ಲಸಿಕೆ,
  • ಸ್ವತಃ ಡಾ.ಧನಂಜಯ ಸರ್ಜಿ ಅವರು 62 ಬಾರಿ ರಕ್ತದಾನ ಮಾಡಿದ್ದಾರೆ.
  • ಪ್ರತಿ ತಿಂಗಳು 1.50 ಲಕ್ಷ ರೂ.ವೆಚ್ಚದಲ್ಲಿ 160 ವಿಶೇಷಚೇತನ ಮಕ್ಕಳ ಆರೈಕೆ,
  • ಶಿವಮೊಗ್ಗದಲ್ಲಿ ಮೊಟ್ಟ ಮೊದಲ ಬಾರಿಗೆ ನವಜಾತ ಶಿಶುಗಳ ಐಸಿಯು ಘಟಕ ಸ್ಥಾಪನೆ.
  • ಖಾಸಗಿ ಕ್ಷೇತ್ರದಲ್ಲಿ ಕೋವಿಡ್‌ ಸಂದರ್ಭ ಮಂದಿಗೆ ಕೊರೊನಾ ಲಸಿಕೆ,
  • ಆಯುಷ್ಮಾನ್‌ ಭಾರತ್‌ ಯೋಜನೆ ಅಡಿ 1400 ಮಕ್ಕಳಿಗೆ ಚಿಕಿತ್ಸೆ.

ಬಂಜೆತನ ನಿವಾರಣಾ ಕೇಂದ್ರ
ಬಂಜೆತನ ನಿವಾರಣೆಯಿಂದ ಹಿಡಿದು ಭ್ರೂಣ ಹಂತದಲ್ಲಿರುವ ಶಿಶುವಿನಿಂದ ಹಿಡಿದು ಹಿರಿಯ ವಯಸ್ಕರವರೆಗೂ ಸರ್ವ ರೀತಿಯ ಆರೋಗ್ಯ ಸೇವೆ ಸರ್ಜಿಯಲ್ಲಿ ಲಭ್ಯ. ಐವಿಎಫ್‌ ಸೆಂಟರ್‌ (ಬಂಜೆತನ ನಿವಾರಣಾ ಕೇಂದ್ರ) ಶೀಘ್ರವೇ ಆರಂಭವಾಗಿದೆ. ಸರ್ಜಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಲ್ಲ ವಿಭಾಗದಲ್ಲಿ ಒಟ್ಟು 50 ಕನ್ಸಲ್ಟೆಂಟ್‌ ವೈದ್ಯರು ಇದ್ದಾರೆ.

ಮತ್ತೊಂದು ವಿಶೇಷವೆಂದರೆ 12 ಭಾಷೆಗಳಲ್ಲಿ ಔಷಧ ಚೀಟಿ ಸೌಲಭ್ಯವಿದೆ. ಜಿಲ್ಲೆಯ ಆರೋಗ್ಯ ಕ್ಷೇತ್ರದ ಇತಿಹಾಸದಲ್ಲೇ ಇಷ್ಟು ವೇಗವಾಗಿ ಅಭಿವೃದ್ಧಿಗೊಂಡ ಶ್ರೇಯಸ್ಸು ಸರ್ಜಿ ಆಸ್ಪತ್ರೆಗೆ ಸಲ್ಲುತ್ತದೆ.
2 ಲಕ್ಷ ಒಪಿಡಿ ತಪಾಸಣೆ
ವರ್ಷಕ್ಕೆ 2ಲಕ್ಷ ಮಂದಿಯ ಒಪಿಡಿ ತಪಾಸಣೆ ಮಾಡುವ ಮೂಲಕ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲೇ ನಂ 1 ಆಗಿ ಸರ್ಜಿ ಆಸ್ಪತ್ರೆ ಬೆಳೆದು ನಿಂತಿದೆ.

Also read: ಮಳೆಗಾಲ ಆರಂಭಕ್ಕೂ ಮುನ್ನವೇ ಮುಂಜಾಗ್ರತೆ ವಹಿಸಿ: ಶಾಸಕ ಹಾಲಪ್ಪ ಸೂಚನೆ

ಜಿಲ್ಲಾಡಳಿತ ಹಾಗೂ ಬಿ.ಎಸ್‌. ಯಡಿಯೂರಪ್ಪ ಶ್ಲಾಘನೆ
2020 ಏಪ್ರಿಲ್‌ನಲ್ಲಿ ಹಿಂದೆ ನಗರದ ಮೆಗ್ಗಾನ್‌ ಆಸ್ಪತ್ರೆಯ ಮಕ್ಕಳ ಐಸಿಯು ವಿಭಾಗದಲ್ಲಿ ಶಾರ್ಟ್‌ ಸಕ್ರ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಸಂದರ್ಭ ನವಜಾತ 33 ಮಕ್ಕಳನ್ನೂ ಸರ್ಜಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಈ ಸಂದರ್ಭ ಸರ್ಜಿ ಆಸ್ಪತ್ರೆ ತೀವ್ರ ನಿಗಾ ವಹಿಸಿ ಆರೈಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪ್ರಶಂಸಾ ಪತ್ರ ನೀಡುವ ಮೂಲಕ ಸೇವೆಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿದೆ. ಹಾಗೆಯೇ ಅಂದಿನ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್‌ ಯಡಿಯೂರಪ್ಪ ಅವರು ದೂರವಾಣಿ ಕರೆ ಮಾಡಿ ಶ್ಲಾಘನೆ ವ್ಯಕ್ತಪಡಿಸಿದ್ದರು.

ಆಟೊ ಚಾಲಕರಿಗೆ ಹೆಲ್ತ್ ಕಾರ್ಡ್‌
ಆಯುಷ್ಮಾನ್‌ ಭಾರತ್‌ ಯೋಜನೆ ಅಡಿ ಸಾವಿರಾರು ಮಕ್ಕಳಿಗೆ ಚಿಕಿತ್ಸಾ ಸೌಲಭ್ಯ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯ 2500 ಮಂದಿ ಆಟೊ ಚಾಲಕರಿಗೆ ಸರ್ಜಿ ಆಸ್ಪತ್ರೆಯಿಂದ ಹೆಲ್ತ್ ಕಾರ್ಡ್‌ಗಳನ್ನು ಉಚಿತವಾಗಿ ನೀಡಲು ಚಾಲನೆ ಕೊಡಲಾಗಿದೆ. ಪ್ರತಿ ತಿಂಗಳು ಉಚಿತ ಆರೋಗ್ಯ ಅರಿವು ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ.

ಕೊರೊನಾ ಕೈ ಮೀರಿದಾಗ ಯುನಿಟಿ ಆಸ್ಪತ್ರೆ ಸಹಯೋಗದಲ್ಲಿ ಸಾವಿರಾರು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಹಾಗೆಯೇ 1500 ಆಶಾ ಕಾರ್ತೆಯರಿಗೆ ಹೆಲ್ತ್ ಕಾರ್ಡ್‌ ವಿತರಿಸಲಾಗಿದೆ.

ಸಾಮಾಜಿಕ ಕಳಕಳಿ ಹೊಂದಿರುವ ಡಾ. ಧನಂಜಯ ಸರ್ಜಿ ಅವರು 2016ರಲ್ಲಿ ಮಕ್ಕಳ ದಿನಾಚರಣೆ ಸಂದರ್ಭ 160 ವಿಶೇಷಚೇತನ ಹಾಗೂ ಅನಾಥ ಮಕ್ಕಳನ್ನು ಆರೋಗ್ಯಕ್ಕೆ ಸಂಬಂಸಿದಂತೆ ದತ್ತು ಪಡೆದಿದ್ದಾರೆ. ಇತ್ತೀಚೆಗೆ ಸರ್ಜಿ ಫೌಂಡೇಷನ್‌ ಎಂಬ ದತ್ತು ಸಂಸ್ಥೆಯನ್ನು ಆರಂಭಿಸಿದ್ದಾರೆ. ಅಲ್ಲದೇ ಕಳೆದ ಎರಡು ವರ್ಷದ ಮಹಾಮಳೆಯ ಪ್ರವಾಹ ಸಂದರ್ಭ ರೌಂಡ್‌ಟೇಬಲ್‌ ಸಹಾಯದೊಂದಿಗೆ 2 ಸಾವಿರ ಮಕ್ಕಳಿಗೆ ಉಚಿತವಾಗಿ ಟೈಫಾಯಿಡ್‌ ವ್ಯಾಕ್ಸಿನೇಷನ್‌ ನೀಡಿರುವುದು ವಿಶೇಷವಾಗಿದೆ.

ಉಚಿತ ಹಾಸ್ಟೆಲ್‌ ಸೌಲಭ್ಯ
ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಸರ್ಜಿ ಉಚಿತ ಹಾಸ್ಟೆಲ್‌. ಈ ಹಾಸ್ಟೆಲ್‌ನಲ್ಲಿ ಒಟ್ಟು 270 ರಿಂದ 300 ಮಂದಿಗೆ ಉಚಿತವಾಗಿ ಹಾಸ್ಟೆಲ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಮತ್ತೊಂದು ವಿಶೇಷವೆಂದರೆ ಸರ್ಜಿ ಸಮೂಹ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಸುಮಾರು 1200 ಮಂದಿಗೆ ನಿತ್ಯವೂ ಉಚಿತವಾಗಿ ಊಟ, ಉಪಹಾರದ ವ್ಯವಸ್ಥೆ ಮಾಡಿದ್ದು, ಅವರ ಅನ್ನ ದಾಸೋಹಕ್ಕೆ ಸಾಕ್ಷಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ಶಿವಮೊಗ್ಗ
Previous Post

ಮಳೆಗಾಲ ಆರಂಭಕ್ಕೂ ಮುನ್ನವೇ ಮುಂಜಾಗ್ರತೆ ವಹಿಸಿ: ಶಾಸಕ ಹಾಲಪ್ಪ ಸೂಚನೆ

Next Post

ಪ್ರಧಾನಿ ಮೋದಿ ಆಡಳಿತ 8 ವರ್ಷ ಪೂರ್ಣ: ಬಂಟ್ವಾಳದಲ್ಲಿ ಅರ್ಥಪೂರ್ಣ ಸಂಭ್ರಮಾಚರಣೆ ಹೇಗಿತ್ತು ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪ್ರಧಾನಿ ಮೋದಿ ಆಡಳಿತ 8 ವರ್ಷ ಪೂರ್ಣ: ಬಂಟ್ವಾಳದಲ್ಲಿ ಅರ್ಥಪೂರ್ಣ ಸಂಭ್ರಮಾಚರಣೆ ಹೇಗಿತ್ತು ನೋಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದಸರಾ-ನಾಡು ನಲಿವ ನಾಡಹಬ್ಬ | ನಮ್ಮ ಪೂರ್ವಜರು ಕೊಟ್ಟ ಸಂದೇಶಗಳೇನು?

September 28, 2025

ನವರಾತ್ರಿ | ಏಳನೇ ದಿನ ಕಾಳರಾತ್ರಿ ದೇವಿ ಪೂಜೆಯ ವಿಶೇಷತೆಯೇನು?

September 28, 2025

ಮುಂಜಾನೆ ಸುವಿಚಾರ | ಹೂವುಗಳು ಭಿನ್ನ ಇರುವಂತೆ ಮನುಷ್ಯರು ಕೂಡ ಭಿನ್ನರು

September 28, 2025

ಭದ್ರಾವತಿ | ಹಳೇನಗರದ ರಾಯರ ಮಠಕ್ಕೆ ಶಾಸಕ ಸಂಗಮೇಶ್ 4 ಲಕ್ಷ ರೂ. ಅನುದಾನ

September 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದಸರಾ-ನಾಡು ನಲಿವ ನಾಡಹಬ್ಬ | ನಮ್ಮ ಪೂರ್ವಜರು ಕೊಟ್ಟ ಸಂದೇಶಗಳೇನು?

September 28, 2025

ನವರಾತ್ರಿ | ಏಳನೇ ದಿನ ಕಾಳರಾತ್ರಿ ದೇವಿ ಪೂಜೆಯ ವಿಶೇಷತೆಯೇನು?

September 28, 2025

ಮುಂಜಾನೆ ಸುವಿಚಾರ | ಹೂವುಗಳು ಭಿನ್ನ ಇರುವಂತೆ ಮನುಷ್ಯರು ಕೂಡ ಭಿನ್ನರು

September 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!