ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಭಾರೀ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿಯಾಗಿ ಜಾರ್ಖಂಡ್ ರಾಜ್ಯಪಾಲೆಯಾಗಿದ್ದ ದ್ರೌಪತಿ ಮುರ್ಮು ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಅಚ್ಚರಿಯ ಆಯ್ಕೆ ಮಾಡಿರುವ ಎನ್ಡಿಎ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದು, ಜೆಪಿ ನಡ್ಡಾ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ.
ಒಡಿಶಾ ಆದಿವಾಸಿ ಮಹಿಳೆಯಾಗಿರುವ ಮುರ್ಮು ಅವರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸ್ಥಾನದಿಂದ ಬೆಳೆದುಬಂದು, ರಾಜ್ಯಪಾಲೆಯಾಗಿದ್ದರು.
ಎನ್ಡಿಎ ಅಭ್ಯರ್ಥಿಗೆ ಬಿಜು ಜನತಾದಳವೂ ಸಹ ಬೆಂಬಲ ಘೋಷಣೆ ಮಾಡಿದೆ. ಯಶವಚಿತ್ ಸಿನ್ಹಾ ಅವರು ಪ್ರತಿಪಕ್ಷಗಳ ಅಭ್ಯರ್ಥಿಯಾಗಿದ್ದು, ಎನ್ಡಿಎ ಅಭ್ಯರ್ಥಿ ಮುರ್ಮು ಅವರ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















