ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಯೋಗವು ಬಹಳ ಹಳೆಯ ಅಭ್ಯಾಸವಾಗಿದ್ದು, ಪ್ರಾಚೀನ-ಪುರಾಣ ಕಾಲದಿಂದಲೂ ದೇಶದಲ್ಲಿ ಅನುಸರಿಸುತ್ತಾ ಬರಲಾಗಿದೆ.
ಪ್ರತಿ ವರ್ಷ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಬೀಡು ಕಬ್ಬಿಣ ವಿಭಾಗದ ಹಿರಿಯ ಉಪಾಧ್ಯಕ್ಷ ಎಂ.ಜಿ. ನಾಗರಾಜ್ ಹೇಳಿದರು.
ಜಿಲ್ಲೆಯ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ Kirloskar Ferrous Industries ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಆಶ್ರಯದಲ್ಲಿ ಕಳೆದ 10 ವರ್ಷಗಳಿಂದ ದೈಹಿಕ ಆರೋಗ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಹತ್ತಿರದ ಪತಾಂಜಲಿ ಯೋಗ ಸಂಸ್ಥೆಯ ಸಹಾಯದಿಂದ ಯೋಗಭ್ಯಾಸ ಶಿಬಿರವನ್ನು ಆಯೋಜಿಸಲಾಗುತ್ತದೆ. ಪ್ರತಿ ವರ್ಷವೂ ಈ ಶಿಬಿರದಿಂದ ಸುಮಾರು 25 ಉದ್ಯೋಗಿಗಳು ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ ಎಂದರು.
ಕಾರ್ಖಾನೆಯಲ್ಲಿ ಆರೋಗ್ಯಕರ ವಾತಾವರಣ ಮೂಡಿಸಿ ಉತ್ತಮ ಆರೋಗ್ಯ ಮತ್ತು ಮಾನಸಿಕ ಒತ್ತಡವನ್ನು ಹೋಗಲಾಡಿಸಲು ಕಾರ್ಖಾನೆಯ ಕೆಲಸದ ಸಮಯದಲ್ಲಿ ಸಾಯಂಕಾಲ ಪ್ರತಿದಿನ 4 ರಿಂದ 5 ಘಂಟೆ ತನಕ ಪ್ರಾಣಾಯಾಮ, ಸೂರ್ಯ ನಮಸ್ಕಾರ, ಯೋಗದ ಧ್ಯಾನ ಹಾಗೂ ಸುಲಭವಾಗಿ ದಿನಂಪ್ರತಿ ಮಾಡುವ ಆಸನಗಳನ್ನು 10 ದಿನಗಳ ಕಾಲ ಹೇಳಿಕೋಡಲಾಗಿದೆ. ಕಾರ್ಖಾನೆಯ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗವು ಈ ಕಾರ್ಯಕ್ರಮ ಆಯೋಜಿಸಿ ಹಿರಿಯ ಅಧಿಕಾರಿಗಳಾದ ಶ್ರೀ ಶಾಂತಿ ಭೂಷಣ ದಾಸ್ ರವರ ಮುಂದಾಳತ್ವದಲ್ಲಿ ಈ ವರ್ಷದ ಯೋಗ ಶಿಬಿರ ಕಾರ್ಯಕ್ತಮ ಆಯೋಜಿಸಿ ಯಶಸ್ವಿಯಾಗಿ ಇಂದು ಮುಕ್ತಾಯವಾಯಿತು ಎಂದು ಹೇಳಿದರು.
ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೊ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯವು ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ ಎಂದರು.
ಇಂದಿನ ಸಮಾರಂಭದಲ್ಲಿ ಹೊಸಪೇಟೆ ಪತಾಂಜಲಿ ಯೋಗ ಸಮಿತಿಯ ಸದಸ್ಯರಾದ ಶ್ರೀ ಕೃಷ್ಣಾ ನಾಯಕ್ ಸಹ ಕಳೆದ ಎರಡು ದಿನಗಳಿಂದ ಆಗಮಿಸಿ ಯೋಗಾಭ್ಯಾಸದಲ್ಲಿ ಬರುವ ಅನೇಕ ಸುಲಭ ಮತ್ತು ದಿನನಿತ್ಯದ ಅಭ್ಯಾಸದ ಆಸನಗಳನ್ನು ಹೇಳಿಕೊಟ್ಟರು. ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ ಕಾರಣ ದಿನಂಪ್ರತಿ ಅಭ್ಯಾಸ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.
ಪ್ರತಿವರ್ಷ ಯೊಗದ ದಿನಾಚರಣೆಯು ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮತ್ತು ದೇಶದ ಹಳ್ಳಿ ಹಳ್ಳಿಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ. ಪ್ರದಾನಿ ನರೇಂದ್ರ ಮೋದಿಯವರು ಯೋಗ ದಿನಾಚರಣೆ ಬಗ್ಗೆ 2014 ಸೆಪ್ಟೆಂಬರ್ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿಗೆ ಪ್ರಸ್ತಾಪವನ್ನು ಮಂಡಿಸಿದ್ದರು. 2015 ಜೂನ್ 21 ರಂದು ಚೊಚ್ಚಲ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಆಯುಶ್ ಸಚಿವಾಲಯದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜಪಥದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ 84 ರಾಷ್ಟ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, 21 ಯೋಗ ಆಸನಗಳನ್ನು ಅಭ್ಯಾಸಿಸಲಾಯಿತು.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹೆಸರಾಂತ ಮೈಸೂರಿನ ಅರಮನೆ ಅಂಗಳದಲ್ಲಿ 8 ನೇಯ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿರುವುದನ್ನು ಸಹ ಇಂದು ಕಿರ್ಲೊಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ ಆಯೋಜಿಸಿದ ಸಮಾರಂಭದಲ್ಲಿ ನೆನೆದು ಸಂತಸ ವ್ಯಕ್ತಪಡಿಸಿದರು.
ಕಳೆದ ಹತ್ತು ದಿನಗಳಿಂದ ಕಾರ್ಖಾನೆಯ ಉದ್ಯೋಗಿಗಳಿಗೆ ಯೋಗಾಭ್ಯಾಸ ತರಬೇತಿ ನೀಡುವ ಮೂಲಕ ಯೋಗ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಸಿ ಉತ್ತಮ ಯೋಗಪ್ರದರ್ಶನ ಮಾಡಿದ 25 ವರ್ಷದ ಒಳಗಿನ ಉದ್ಯೋಗಿಗಳಾದ ಮಹಂತೇಶ್, ರವಿ, ನಾಗಶ್ರೀ ಹಾಗೂ 25 ವರ್ಷದ ಮೇಲಿನ ಉದ್ಯೋಗಿಗಳಾದ ಜಯಶ್ರೀ, ಬಸಣ್ಣ ಮತ್ತು ಅನಿಲ್ ಕುಮಾರ್ ಇವರಿಗೆ ಬಹುಮಾನ ನೀಡುವುದರ ಮೂಲಕ ಶುಭಾಶಯಗಳನ್ನು ತಿಳಿಸಿದರು.
ವರದಿ: ಮುರುಳೀಧರ್ ನಾಡಿಗೇರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
ವರದಿ
ಮುರುಳೀಧರ್ ನಾಡಿಗೇರ್
Discussion about this post