Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕೊಪ್ಪಳ

ಯೋಗ ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆ: ಎಂ.ಜಿ. ನಾಗರಾಜ್

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

June 22, 2022
in ಕೊಪ್ಪಳ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  |

ಯೋಗವು ಬಹಳ ಹಳೆಯ ಅಭ್ಯಾಸವಾಗಿದ್ದು, ಪ್ರಾಚೀನ-ಪುರಾಣ ಕಾಲದಿಂದಲೂ ದೇಶದಲ್ಲಿ ಅನುಸರಿಸುತ್ತಾ ಬರಲಾಗಿದೆ.
ಪ್ರತಿ ವರ್ಷ ಜೂನ್‌ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಬೀಡು ಕಬ್ಬಿಣ ವಿಭಾಗದ ಹಿರಿಯ ಉಪಾಧ್ಯಕ್ಷ ಎಂ.ಜಿ. ನಾಗರಾಜ್ ಹೇಳಿದರು.

ಜಿಲ್ಲೆಯ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ Kirloskar Ferrous Industries ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಆಶ್ರಯದಲ್ಲಿ ಕಳೆದ 10 ವರ್ಷಗಳಿಂದ ದೈಹಿಕ ಆರೋಗ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಹತ್ತಿರದ ಪತಾಂಜಲಿ ಯೋಗ ಸಂಸ್ಥೆಯ ಸಹಾಯದಿಂದ ಯೋಗಭ್ಯಾಸ ಶಿಬಿರವನ್ನು ಆಯೋಜಿಸಲಾಗುತ್ತದೆ. ಪ್ರತಿ ವರ್ಷವೂ ಈ ಶಿಬಿರದಿಂದ ಸುಮಾರು 25 ಉದ್ಯೋಗಿಗಳು ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಇತ್ತಿಚಿನ ದಿನಗಳಲ್ಲಿ ವಿಶ್ವಾದ್ಯಂತ ಹೆಚ್ಚಿನ ಜನರು ತಮ್ಮ ಮಾನಸಿಕ ಒತ್ತಡ ಮತ್ತು ದೈಹಿಕ ಸೌಂದರ್ಯಕ್ಕಾಗಿ ಯೋಗದ ಮೊರೆ ಹೋಗುತ್ತಿದ್ದಾರೆ. ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದೆ. ಭಾರತವು ಜಗತ್ತಿಗೆ ನೀಡಿದ ಒಂದು ದೊಡ್ಡ ಕೊಡುಗೆಯಾಗಿದೆ ಎಂದರು.

ಕಾರ್ಖಾನೆಯಲ್ಲಿ ಆರೋಗ್ಯಕರ ವಾತಾವರಣ ಮೂಡಿಸಿ ಉತ್ತಮ ಆರೋಗ್ಯ ಮತ್ತು ಮಾನಸಿಕ ಒತ್ತಡವನ್ನು ಹೋಗಲಾಡಿಸಲು ಕಾರ್ಖಾನೆಯ ಕೆಲಸದ ಸಮಯದಲ್ಲಿ ಸಾಯಂಕಾಲ ಪ್ರತಿದಿನ 4 ರಿಂದ 5 ಘಂಟೆ ತನಕ ಪ್ರಾಣಾಯಾಮ, ಸೂರ್ಯ ನಮಸ್ಕಾರ, ಯೋಗದ ಧ್ಯಾನ ಹಾಗೂ ಸುಲಭವಾಗಿ ದಿನಂಪ್ರತಿ ಮಾಡುವ ಆಸನಗಳನ್ನು 10 ದಿನಗಳ ಕಾಲ ಹೇಳಿಕೋಡಲಾಗಿದೆ. ಕಾರ್ಖಾನೆಯ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗವು ಈ ಕಾರ್ಯಕ್ರಮ ಆಯೋಜಿಸಿ ಹಿರಿಯ ಅಧಿಕಾರಿಗಳಾದ ಶ್ರೀ ಶಾಂತಿ ಭೂಷಣ ದಾಸ್ ರವರ ಮುಂದಾಳತ್ವದಲ್ಲಿ ಈ ವರ್ಷದ ಯೋಗ ಶಿಬಿರ ಕಾರ್ಯಕ್ತಮ ಆಯೋಜಿಸಿ ಯಶಸ್ವಿಯಾಗಿ ಇಂದು ಮುಕ್ತಾಯವಾಯಿತು ಎಂದು ಹೇಳಿದರು.

ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೊ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯವು ಮನುಷ್ಯ ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ ಎಂದರು.
ಇಂದಿನ ಸಮಾರಂಭದಲ್ಲಿ ಹೊಸಪೇಟೆ ಪತಾಂಜಲಿ ಯೋಗ ಸಮಿತಿಯ ಸದಸ್ಯರಾದ ಶ್ರೀ ಕೃಷ್ಣಾ ನಾಯಕ್ ಸಹ ಕಳೆದ ಎರಡು ದಿನಗಳಿಂದ ಆಗಮಿಸಿ ಯೋಗಾಭ್ಯಾಸದಲ್ಲಿ ಬರುವ ಅನೇಕ ಸುಲಭ ಮತ್ತು ದಿನನಿತ್ಯದ ಅಭ್ಯಾಸದ ಆಸನಗಳನ್ನು ಹೇಳಿಕೊಟ್ಟರು. ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ ಕಾರಣ ದಿನಂಪ್ರತಿ ಅಭ್ಯಾಸ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.

ಪ್ರತಿವರ್ಷ ಯೊಗದ ದಿನಾಚರಣೆಯು ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮತ್ತು ದೇಶದ ಹಳ್ಳಿ ಹಳ್ಳಿಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ. ಪ್ರದಾನಿ ನರೇಂದ್ರ ಮೋದಿಯವರು ಯೋಗ ದಿನಾಚರಣೆ ಬಗ್ಗೆ 2014 ಸೆಪ್ಟೆಂಬರ್‌ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೊದಲ ಬಾರಿಗೆ ಪ್ರಸ್ತಾಪವನ್ನು ಮಂಡಿಸಿದ್ದರು. 2015 ಜೂನ್ 21 ರಂದು ಚೊಚ್ಚಲ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಆಯುಶ್ ಸಚಿವಾಲಯದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ರಾಜಪಥದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ 84 ರಾಷ್ಟ್ರಗಳ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, 21 ಯೋಗ ಆಸನಗಳನ್ನು ಅಭ್ಯಾಸಿಸಲಾಯಿತು.
ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹೆಸರಾಂತ ಮೈಸೂರಿನ ಅರಮನೆ ಅಂಗಳದಲ್ಲಿ 8 ನೇಯ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸಿ ಯೋಗಾಭ್ಯಾಸ ಮಾಡಿರುವುದನ್ನು ಸಹ ಇಂದು ಕಿರ್ಲೊಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ ಆಯೋಜಿಸಿದ ಸಮಾರಂಭದಲ್ಲಿ ನೆನೆದು ಸಂತಸ ವ್ಯಕ್ತಪಡಿಸಿದರು.

ಕಳೆದ ಹತ್ತು ದಿನಗಳಿಂದ ಕಾರ್ಖಾನೆಯ ಉದ್ಯೋಗಿಗಳಿಗೆ ಯೋಗಾಭ್ಯಾಸ ತರಬೇತಿ ನೀಡುವ ಮೂಲಕ ಯೋಗ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಸಿ ಉತ್ತಮ ಯೋಗಪ್ರದರ್ಶನ ಮಾಡಿದ 25 ವರ್ಷದ ಒಳಗಿನ ಉದ್ಯೋಗಿಗಳಾದ ಮಹಂತೇಶ್, ರವಿ, ನಾಗಶ್ರೀ ಹಾಗೂ 25 ವರ್ಷದ ಮೇಲಿನ ಉದ್ಯೋಗಿಗಳಾದ ಜಯಶ್ರೀ, ಬಸಣ್ಣ ಮತ್ತು ಅನಿಲ್ ಕುಮಾರ್ ಇವರಿಗೆ ಬಹುಮಾನ ನೀಡುವುದರ ಮ‌ೂಲಕ ಶುಭಾಶಯಗಳನ್ನು ತಿಳಿಸಿದರು.
ವರದಿ: ಮುರುಳೀಧರ್ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

 

 

 

 

 

ವರದಿ
ಮುರುಳೀಧರ್ ನಾಡಿಗೇರ್

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKirloskar Ferrous IndustriesKoppalaLatest News KannadaNewsinKannadaNewsKannadaಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಕೊಪ್ಪಳ
Previous Post

ಭದ್ರಾವತಿ ವಿಐಎಸ್‌ಎಲ್ ಕ್ವಾಟ್ರಸ್‌ನಲ್ಲಿ ಬೋನಿಗೆ ಬಿದ್ದ ಚಿರತೆ: ಆತಂಕ ದೂರ

Next Post

ನಟಿ ವೇದಿಕಾಗೆ ಕೊರೋನಾ ದೃಢ: ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅಭಿಮಾನಿಗಳಿಗೆ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಟಿ ವೇದಿಕಾಗೆ ಕೊರೋನಾ ದೃಢ: ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಅಭಿಮಾನಿಗಳಿಗೆ ಕರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!