Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸುಂದರ ಜೀವನ ಅನುಭವಿಸಲು ಉತ್ತಮ ಆರೋಗ್ಯ, ಅಭ್ಯಾಸಗಳು ಅವಶ್ಯ: ಕವಿರಾಜ್

ಅಂತರಾಷ್ಟ್ರೀಯ ಮಾದ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನ

June 27, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜೀವನ ತುಂಬಾ ಸುಂದರವಾಗಿದೆ. ಅದನ್ನು ಅನುಭವಿಸಲು ಉತ್ತಮ ಆರೋಗ್ಯ ಮತ್ತು ಅಭ್ಯಾಸಗಳು ಬೇಕು. ಈ ನಿಟ್ಟಿನಲ್ಲಿ ನಡೆದು ಸುಂದರ ಬದುಕನ್ನು ನಮ್ಮದಾಗಿಸಿಕೊಳ್ಳೋಣ ಎಂದು ಕನ್ನಡ ಚಲನಚಿತ್ರ ಸಾಹಿತಿ ಕವಿರಾಜ್ ಯಡೂರು Kaviraj ಯುವ ಸಮುದಾಯಕ್ಕೆ ಕರೆ ನೀಡಿದರು.

ಶಿವಮೊಗ್ಗ ಜಿಲ್ಲಾ ಪೊಲೀಸ್, ಕೌಶಲ್ಯಾಭಿವೃದ್ದಿ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯ, ನೆಹರು ಯುವ ಕೇಂದ್ರ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಾದ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಡೀ ಸಮಾಜ ಒಗ್ಗೂಡಿ ಎದುರಿಸಬಹುದಾದಂತಹ ಆಪತ್ತು ಮಾದಕ ವ್ಯಸನ. ಪ್ರಸ್ತುತ ಶೇ.30 ರಷ್ಟು ಯುವಜನತೆ ಮಾದಕ ವ್ಯಸನಕ್ಕೆ ತುತ್ತಾಗಿರುವ ಅಂಕಿಅಂಶ ಆಘಾತಕಾರಿಯಾಗಿದ್ದು, ಇದನ್ನು ತಡೆಯುವುದು ಅತ್ಯವಶ್ಯ. ಚಿಕಿತ್ಸೆಗಿಂತ ರೋಗ ಬಾರದಂತೆ ತಡೆಯುವುದು ಮುಖ್ಯ ಎಂಬಂತೆ ಯುವಜನತೆ ವಿವಿಧ ಮಾದಕ ದ್ರವ್ಯಗಳಿಗೆ ವ್ಯಸನಿಗಳಾಗದಂತೆ ಸಮುದಾಯದಲ್ಲಿ ಜಾಗೃತಿ ಹೆಚ್ಚಬೇಕು.
ಮಕ್ಕಳು ಅಥವಾ ಯುವ ಜನತೆ ಮಾಡುವ ಕೆಲಸಗಳು ಅವರ ತಂದೆ ತಾಯಿ, ಕುಟುಂಬಕ್ಕೆ ಒಳ್ಳೆಯ ಅಥವಾ ಕೆಟ್ಟ ಹೆಸರನ್ನು ತಂದು ಕೊಡುತ್ತದೆ. ಮೊದಲಿಗೆ ಮಾದಕ ಚಟಗಳು ಸ್ವರ್ಗದಂತೆ ಕಂಡರೂ ಹಂತ ಹಂತವಾಗಿ ವ್ಯಸನಿಯನ್ನು ಇದು ನರಕಕ್ಕೆ ತಳ್ಳುತ್ತದೆ. ಆದ್ದರಿಂದ ಯುವಜನತೆ ಯಾವುದೇ ದುಶ್ಚಟಗಳಿಗೆ ದಾಸರಾಗದೇ, ಜವಾಬ್ದಾರಿಯುತವಾಗಿ ನಡೆದುಕೊಂಡು ಪೋಷಕರಿಗೆ ಒಳ್ಳೆಯ ಹೆಸರನ್ನು ತರಬೇಕು. ಸಂಗೀತ, ಓದು, ಜ್ಞಾನ, ಗೆಳತನದಂತಹ ಉತ್ತಮ ಚಟಗಳನ್ನು ಬೆಳೆಸಿಕೊಳ್ಳಬೇಕು ಎಂದರು.

Also read: ಪತ್ರಕರ್ತರು ಜನಪತ್ರಿನಿಧಿಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ : ಸಂಸದ ರಾಘವೇಂದ್ರ

ಗೆಳೆಯರಲ್ಲಿ ಯಾರಾದರೂ ಒಬ್ಬರು ಸಿಗರೇಟ್, ಕುಡಿತ ಅಥವಾ ಗಾಂಜಾ ಇತರೆ ಡ್ರಗ್ಸ್‍ಗೆ ಒಳಗಾಗುತ್ತಿದ್ದಾರೆಂಬ ಸುಳಿವು ಸಿಕ್ಕಲ್ಲಿ ಅವರ ತಂದೆ, ತಾಯಿ ಅಥವಾ ಅವರ ಪ್ರಾಥಮಿಕ ಸಂಪರ್ಕಿತರಿಗೆ ತಿಳಿಸುವ ಮೂಲಕ ಗೆಳಯನ ಜೀವನ ಉಳಿಸಲು ಸಹಾಯ ಮಾಡಬೇಕು. ಜೀವನದಲ್ಲಿ ದೊಡ್ಡದಾಗಿ ಸಾಧಿಸಿದರೆ ಮಾತ್ರ ಸಾಧನೆಯಲ್ಲ. ಉತ್ತಮ ಜೀವನ ನಿರ್ವಹಣೆ ಕೂಡ ಒಂದು ದೊಡ್ಡ ಸಾಧನೆಯಾಗಿದ್ದು ಮಕ್ಕಳು ಯಾವುದೇ ದುಶ್ಚಟಕ್ಕೆ ಬಲಿಯಾಗದೇ ಬದುಕನ್ನು ಸುಂದರವಾಗಿಸಿಕೊಳ್ಳಬೇಕೆಂದರು.
ಮನೋವೈದ್ಯರಾದ ಡಾ. ಎಸ್.ಟಿ. ಅರವಿಂದ್ ಮಾತನಾಡಿ, ಮಾದಕ ವ್ಯಸನ ಎಂದರೇನು, ಯಾವೆಲ್ಲ ರೀತಿಯ ಮಾದಕ ವಸ್ತುಗಳನ್ನು ವ್ಯಸನಕ್ಕೆ ಬಳಸಲಾಗುತ್ತಿದೆ, ಮಾದಕ ವಸ್ತುಗಳ ಬಳಕೆ ನಿಧಾನವಾಗಿ ಆರಂಭವಾಗಿ ನಂತರ ವ್ಯಸನವಾಗಿ ಹೇಗೆ ಪರಿವರ್ತನೆಯಾಗುತ್ತದೆ ಎಂದು ವಿವರಿಸಿದ ಅವರು ಮಾದಕ ವ್ಯಸನವನ್ನು ಒಂದೇ ಬಾರಿಗೆ ಬಿಡಿಸಲು ಬರುವುದಿಲ್ಲ. ಅದು ರೋಗಿಗೆ ಮಾರಕ ಕೂಡ. ಆದ್ದರಿಂದ ಸರಿಯಾದ ಮನೋವೈದ್ಯಕೀಯ ಚಿಕಿತ್ಸೆ ಮತ್ತು ಆಪ್ತಸಮಾಲೋಚನೆಯಿಂದ ವ್ಯಸನಮುಕ್ತಗೊಳಿಸಬಹುದು. ವ್ಯಸನ ಬಿಟ್ಟ ನಂತರ ಕೂಡ ಅನುಸರಣೆ ತುಂಬಾ ಮುಖ್ಯವಾಗುತ್ತದೆ. ವ್ಯಸನಿಗಳಿಗೆ ಮಾನಸಿಕ ಚಿಕಿತ್ಸೆಯ ಅಗತ್ಯ ತುಂಬಾ ಇದ್ದು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಡಿ-ಅಡಿಕ್ಷನ್ ಚಿಕಿತ್ಸೆ ಲಭ್ಯವಿರುವ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್  ಮಾತನಾಡಿ, ಯುವಪೀಳಿಗೆಯನ್ನು ಅತಿ ವೇಗವಾಗಿ ಸೆಳೆಯುತ್ತಿರುವ ಸಮಸ್ಯೆಗಳಲ್ಲಿ ಮಾದಕ ವ್ಯಸನ ಪ್ರಮುಖವಾಗಿದ್ದು, ಇದರ ದುಷ್ಪರಿಣಾಮವನ್ನು ಎಲ್ಲರೂ ಅರಿಯಬೇಕೆಂದು ಒಂದು ಕಥೆ ಮೂಲಕ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಮಾದಕ ವ್ಯಸನದ ದುಷ್ಪರಿಣಾಮದಿಂದ ವಸ್ಯನಿ ಮಾತ್ರವಲ್ಲದೆ ಅವರ ತಂದೆ ತಾಯಿ, ಕುಟುಂಬ ಸೇರಿದಂತೆ ಇಡೀ ಸಮುದಾಯವೇ ನೋವು ಅನುಭವಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು, ಯುವಜನತೆ ಇದರಿಂದ ದೂರವಿರಬೇಕು. ಗೆಳೆಯರು ಮಾದಕ ವಸ್ತುಗಳ ಬಳಕೆ ಮಾಡುವಂತೆ ಹೇಳಿದರೆ, ಒತ್ತಾಯಿಸಿದರೆ ದೃಢವಾಗಿ ಅಲ್ಲಗಳೆಯಬೇಕು. ಗೆಳೆಯರು ಕೂಡ ತಮ್ಮಲ್ಲಿ ಯಾರಾದರೊಬ್ಬರು ಮಾದಕ ವ್ಯಸನಕ್ಕೆ ತುತ್ತಾಗುವುದು ಕಂಡು ಬಂದಲ್ಲಿ ದೊಡ್ಡವರಿಗೆ ತಿಳಿಸಬೇಕು. ಯುವಜನತೆಯೇ ಸಂದೇಶಕಾರರಾಗಿ ಉತ್ತಮ ಸಂದೇಶವನ್ನು ನೀಡಬೇಕು. ಸಮುದಾಯದಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದರು.
ಜಿಲ್ಲೆಯಲ್ಲಿ ಮಾದಕ ವ್ಯಸನ ತಡೆಯುವ ನಿಟ್ಟಿನಲ್ಲಿ ಮಾದಕ ವ್ಯಸಕ ಕುರಿತು ಜಾಗೃತಿ ಮೂಡಿಸಲು 100 ಜನ ಯುವ ಸ್ವಯಂಸೇವಕರ ತಂಡ ಸಿದ್ದವಾಗಿದೆ. ಈ ತಂಡಕ್ಕೆ ಇಂದು ಚಾಲನೆ ನೀಡಲಾಗುವುದು. ಹಾಗೂ ಅವರಿಗೆ ತರಬೇತಿ ಸಹ ನೀಡಲಾಗುವುದು. ಆಸಕ್ತಿ ಇರುವ ಸ್ವಯಂ ಸೇವಕರು ಈ ತಂಡಕ್ಕೆ ಸೇರಬಹುದು ಎಂದು ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ರೇಖಾ ಗಿರೀಶ್ ಮಾತನಾಡಿ, ಹೆಣ್ಣುಮಕ್ಕಳು ಸುರಕ್ಷಿತವಾಗಿ ಇರುವ ಬಗ್ಗೆ, ಸುರಕ್ಷಿತ ಮೊಬೈಲ್ ಬಳಕೆ ಹಾಗೂ ಮಕ್ಕಳ ಸಹಾಯವಾಣಿ ಸಂಖ್ಯೆ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಾದಕ ವ್ಯಸನ ತಡೆ ಕುರಿತಾದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾದಕ ವ್ಯಸನ ದುಷ್ಪರಿಣಾಮ ಕುರಿತು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕುವೆಂಪು ವಿವಿ ಎನ್‍ಎಸ್‍ಎಸ್ ಕಾರ್ಯಕ್ರಮ ಸಂಯೋಜಕ ಡಾ.ನಾಗರಾಜ್ ಪರಿಸರ, ಕೌಶಲ್ಯಾಭಿವೃದ್ದಿ ಅಧಿಕಾರಿ ಹೆಚ್.ಎಂ.ಸುರೇಶ್, ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆಟಿಕೆ, ಅಮೃತ್ ನೋನಿ ಆಯುರ್ವೇದಿಕ್ ಔಷಧಿ ವಿತರಕ ಡಾ.ಶ್ರೀನಿವಾಸ್, ವಿದ್ಯಾರ್ಥಿಗಳು ಹಾಜರಿದ್ದರು. ಸಾಗರ ಉಪವಿಭಾಗದ ಡಿವೈಎಸ್‍ಪಿ ರೋಹನ್ ಜಗದೀಶ್ ಸ್ವಾಗತಿಸಿದರು, ಸಮನ್ವಯ ಕಾಶಿ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKavirajLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಕವಿರಾಜ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪತ್ರಕರ್ತರು ಜನಪತ್ರಿನಿಧಿಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ : ಸಂಸದ ರಾಘವೇಂದ್ರ

Next Post

ವಿದ್ಯುತ್ ಕಂಪೆನಿಗಳ ಅಭಿವೃದ್ದಿಗಾಗಿ ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ವಿದ್ಯುತ್ ಕಂಪೆನಿಗಳ ಅಭಿವೃದ್ದಿಗಾಗಿ ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ: ಸಿಎಂ ಬೊಮ್ಮಾಯಿ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!