ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಡುಗೆ ಅನಿಲ ದರ ಏರಿಕೆ ಖಂಡಿಸಿ ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಪ್ರತಿಭಟನೆ ನಡೆಸಲಾಯಿತು.
ಅಡುಗೆ ಅನಿಲದ ಬೆಲೆ ಈಗಾಗಲೇ ಸಾವಿರ ರೂ. ಗಡಿಯನ್ನು ದಾಟಿದ್ದು, ಮತ್ತೆ ಕೇಂದ್ರ ಸರ್ಕಾರ 50ರೂ. ಏರಿಸಿರುವುದು ಖಂಡನಾರ್ಹ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಬುಡಮೇಲಾಗಿದ್ದು ಶ್ರೀಸಾಮಾನ್ಯ ಸಂಕಷ್ಟಪಡುವ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೇ ಎಳೆದಂತಾಗಿದೆ. ಹಲವು ಬಾರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ಸುಪ್ರೀಂಕೋರ್ಟ್ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವನ್ನು ನೀಡಿದರು ಸಹ ಯಾವುದೇ ಆರ್ಥಿಕ ವ್ಯವಸ್ಥೆಯನ್ನು ಹತೋಟಿಗೆ ತರವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ. ಈ ಕೂಡಲೇ ರಾಷ್ಟ್ರಪತಿಗಳು ಸರ್ಕಾರವನ್ನು ವಜಾ ಮಾಡಬೇಕೆಂದು ಯುವ ಕಾಂಗ್ರೆಸ್ ಆಗ್ರಹಿಸಿದೆ.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅನಿತಾ ಕುಮಾರಿ, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಎಸ್ ಕುಮಾರೇಶ್, ಗ್ರಾಮಾಂತರಧ್ಯಕ್ಷ ಈಟಿ ನಿತಿನ್, ಭದ್ರಾವತಿ ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಅಹಮದ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸಚಿನ್ ಸಿಂಧ್ಯಾ, ಶಿಲ್ಪ ಈಶ್ವರ್ , ಮಹಿಳಾ ಕಾಂಗ್ರೆಸ್ ಮುಖಂಡರಾದ ಸುವರ್ಣ ನಾಗರಾಜ್ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಎಮ್ ರಾಹುಲ್ , ಇರ್ಫಾನ್, ಪುಷ್ಪಕ್ ಕುಮಾರ, ಎಂ ರಾಕೇಶ್ , ಇಮ್ರಾನ್ ಸಮೀರ್ ಖಾನ್., ಜಮೀಲ್, ಮೋಹನ್ ಸೋಮಿನಕೊಪ್ಪ, ಸುಹಾಸ್ ಗೌಡ, ತಬ್ರೇಸ್ ಭದ್ರಾವತಿ, ಶಶಿ ಮೈದೊಳ್, ನದಿಮ್ ಮದರಿ ಪಾಳ್ಯ, ಉಲ್ಲಾಸ್ ಹೂಸ ನಗರ, ಸುಭಾನ್ ಶಿಕಾರಿಪುರ, ಮಸ್ತಾನ್ , ಚೇತನ್, ಯುವರಾಜ್ , ಸಲ್ಮಾನ್, ಯುವ ಕಾರ್ಯಕರ್ತರು ಭಾಗವಹಿಸಿದ್ದರು.
Also read: ಬೆಳಗಾವಿ: ಪ್ರಸ್ತುತ ಯಾವುದೇ ಸಮಸ್ಯೆಯಿಲ್ಲ, ಮುನ್ನೆಚ್ಚರಿಕಾ ಕ್ರಮವಾಗಿ ಯಲ್ಲೋ ಅಲರ್ಟ್ – ಡಿಸಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post