Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ದೇವಸ್ಥಾನಗಳ ಅಭಿವೃದ್ದಿಗೆ 693 ಕೋಟಿ ರೂ. ಅನುದಾನ: ಸಚಿವೆ ಶಶಿಕಲಾ ಜೊಲ್ಲೆ ಸಂತಸ

July 12, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |      

ರಾಜ್ಯದ ದೇವಸ್ಥಾನಗಳ ಅಭಿವೃದ್ದಿಗೆ ಕಳೆದ 10 ವರ್ಷಗಳಲ್ಲೇ ಅತಿಹೆಚ್ಚು ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಬಿಡುಗಡೆಗೊಳಿಸಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ದೇವಾಲಯಗಳ ಸಮಗ್ರ ಅಭಿವೃದ್ದಿಯ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಜರಾಯಿ ಇಲಾಖೆಗೆ ಬಲ ತುಂಬಿದ್ದಾರೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ Minister Shashikala Jolle ಸಂತಸ ವ್ಯಕ್ತಪಡಿಸಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು 2022 – 23 ರ ಆಯವ್ಯಯದಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ರಾಜ್ಯದ ಹೊರಭಾಗದಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ದಿಗಾಗಿ ಒಟ್ಟು 421 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ. ಇದರ ಜೊತೆಗೆ ಸನ್ಮಾನ್ಯ ಮುಖ್ಯಮಂತ್ರಿಯವರು ವಿಧಾನಸಭಾ ಕ್ಷೇತ್ರವಾರು ದೇವಸ್ಥಾನಗಳ ಜೀರ್ಣೋದ್ದಾರಕ್ಕಾಗಿ ಇದುವರೆವಿಗೂ (ಜುಲೈ 10, 2022 ರವರೆಗೆ) ಒಟ್ಟು 272 ಕೋಟಿ ರೂಪಾಯಿಗಳ ವಿಶೇಷ ಅನುದಾನ ಒದಗಿಸಿದ್ದು, ಅದರಲ್ಲಿ ಶೇ. 50 ರಷ್ಟನ್ನು (136 ಕೋಟಿ ರೂ) ಈಗಾಗಲೇ ಬಿಡುಗಡೆ ಮಾಡಿದ್ದಾರೆ. ಇದರಿಂದಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಇದುವರೆಗೂ ಒಟ್ಟು ರೂ. 693 ಕೋಟಿ ಗಳಷ್ಟು (ಬಜೆಟ್‌ ಅನುದಾನ 421 ಕೋಟಿ + ವಿಶೇಷ ಅನುದಾನ ರೂ. 272 ಕೋಟಿ) ಬೃಹತ್‌ ಗಾತ್ರದ ಅನುದಾನ ಒದಗಿಸಲಾಗಿದೆ ಎಂದರು.
ಕಳೆದ ಒಂದು ವರ್ಷದಲ್ಲಿ ಮುಜರಾಯಿ ಇಲಾಖೆಯ ವತಿಯಿಂದ ಹಲವಾರು ನೂತನ ಯೋಜನೆಗಳನ್ನ ಘೋಷಣೆ ಮಾಡಿ ಅನುಷ್ಠಾನಗೊಳಿಸಲಾಗುತ್ತಿದೆ. ದೈವ ಸಂಕಲ್ಪ (ರೂ. 1140 ಕೋಟಿ ವೆಚ್ಚದಲ್ಲಿ 25 ಏ ದರ್ಜೆ ದೇವಾಲಯಗಳ ಸಮಗ್ರ ಅಭಿವೃದ್ದಿ), ಇಂಟಿಗ್ರೇಟೆಡ್‌ ಟೆಂಪಲ್‌ ಮ್ಯಾನೇಜ್‌ಮೆಂಟ್‌ ಸಿಸ್ಟಮ್‌ ಅಳವಡಿಕೆ, ಕಾಯಕಲ್ಪ (ಮುಜರಾಯಿ ಇಲಾಖೆಯ ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಅನುದಾನ), ಕಾಶಿ ಯಾತ್ರೆಗೆ ಸಹಾಯಧನ, ಕಾಶಿಗೆ ಭಾರತ್‌ ಗೌರವ್‌ ಯೋಜನೆಯ ಮೂಲಕ ರೈಲು, ಇಲಾಖೆಯ ನೌಕರರು ಹಾಗೂ ಅರ್ಚಕರುಗಳಿಗೆ ವಿಮಾ ಸೌಲಭ್ಯ, ತಸ್ತಿಕ್‌ ಹಣ ಹೆಚ್ಚಳದಂತಹ ಯೋಜನೆಗಳಿಗೆ ಮುಖ್ಯಮಂತ್ರಿಗಳು ಅಗತ್ಯ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

Also read: ಭದ್ರಾವತಿ ಎಸ್ ಎಸ್ ಜ್ಯೂವೆಲ್ಲರಿಯಲ್ಲಿ ಕಳ್ಳತನ : ಇಬ್ಬರ ಬಂಧನ

ಕಾಂಗ್ರೆಸ್‌ ಸರಕಾರ ತನ್ನ 5 ವರ್ಷಗಳ ಅಧಿಕಾರದ ಅವಧಿಯಲ್ಲಿ ಮುಜರಾಯಿ ಇಲಾಖೆಗೆ ಹೆಚ್ಚಿನ ಅನುದಾನ ನೀಡಿರಲಿಲ್ಲ. 5 ವರ್ಷಗಳಲ್ಲಿ ಕೇವಲ 1,289 ಕೋಟಿ ರೂಪಾಯಿಗಳಷ್ಟು ಅನುದಾನ ನೀಡಿದ್ದರೆ, ಬಿಜೆಪಿ ಸರಕಾರ ಕಳೆದ ಮೂರು ವರ್ಷಗಳಲ್ಲಿ 1,781 ಕೋಟಿ ರೂಪಾಯಿಗಳಷ್ಟು ಅನುದಾನ ನೀಡುವ ಮೂಲಕ ಮುಜರಾಯಿ ಇಲಾಖೆಗೆ ಹೆಚ್ಚಿನ ಮಹತ್ವ ನೀಡಿದೆ. ಕಾಂಗ್ರೆಸ್‌ ಮತ್ತು ಸಮ್ಮಿಶ್ರ ಸರಕಾರದ ಆಡಳಿತದಲ್ಲಿ ದೇವಸ್ಥಾನಗಳ ಅಭಿವೃದ್ದಿಯ ನಿಟ್ಟಿನಲ್ಲಿ ನೂತನ ಯೋಜನೆಗಳ ಘೋಷಣೆಯೇ ಆಗಿರಲಿಲ್ಲ ಎನ್ನುವುದನ್ನ ಮುಖ್ಯವಾಗಿ ಗಮನಿಸಬೇಕಾದ ಸಂಗತಿಯಾಗಿದೆ ಎಂದರು.
ಎಲ್ಲಾ ಪಕ್ಷದವರಿಗೂ ಅನುದಾನ: ಧಾರ್ಮಿಕ ಕೇಂದ್ರಗಳ ಅನುದಾನ ಬಿಡುಗಡೆಯಲ್ಲಿ ಯಾವುದೇ ತಾರತಮ್ಯ ಮಾಡಲಾಗಿಲ್ಲ ಎನ್ನುವುದು ಮತ್ತೊಂದು ವಿಶೇಷ. ದೇವಸ್ಥಾನಗಳ ಅಭಿವೃದ್ದಿಯ ನಿಟ್ಟಿನಲ್ಲಿ ವಿರೋಧ ಪಕ್ಷದ ಪ್ರಮುಖ ನಾಯಕರು ಹಾಗೂ ಶಾಸಕರುಗಳಿಗೂ ಅನುದಾನ ಹಂಚಿಕೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸುವ ಭರವಸೆಯನ್ನು ಸಚಿವರು ವ್ಯಕ್ತಪಡಿಸಿದ್ದಾರೆ. ಆಯಾ ಕ್ಷೇತ್ರಗಳ ದೇವಸ್ಥಾನಗಳ ಅಭಿವೃದ್ದಿಗಾಗಿ ಬೇಡಿಕೆ ಸಲ್ಲಿಸಿದ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದ ಶಾಸಕರು ಹಾಗೂ ಹಿರಿಯ ನಾಯಕರಿಗೂ ಅನುದಾನ ಹಂಚಿಕೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರ ಕ್ಷೇತ್ರಕ್ಕೆ 10 ಕೋಟಿ ರೂಪಾಯಿಗಳು, ಡಾ. ಯತೀಂದ್ರ ಎಸ್‌ ಅವರ ಕ್ಷೇತ್ರಕ್ಕೆ 1.50 ಕೋಟಿ ರೂಪಾಯಿಗಳು, ಶ್ರೀಮತಿ ಅನಿತಾ ಕುಮಾರಸ್ವಾಮಿ, ಆರ್‌ ವಿ ದೇಶಪಾಂಡೆ ಮತ್ತು ಈಶ್ವರ ಖಂಡ್ರೆ ಅವರ ಕ್ಷೇತ್ರಗಳಿಗೆ ತಲಾ 3 ಮೂರು ಕೋಟಿಗಳ ಅನುದಾನ ಹಂಚಿಕೆಯಾಗಲಿದೆ.

ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನು ಅತ್ಯುತ್ತಮವಾಗಿ ಅಭಿವೃದ್ದಿ ಪಡಿಸಿ ಪ್ರಧಾನಮಂತ್ರಿಗಳ ಕನಸನ್ನ ನನಸು ಮಾಡುವ ನಿಟ್ಟಿನಲ್ಲಿ ಸಹಕಾರ ನೀಡಿರುವುದರಿಂದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Shashikala JolleNewsinKannadaNewsKannadaState Newsಬೆಂಗಳೂರುಸಚಿವೆ ಶಶಿಕಲಾ ಜೊಲ್ಲೆ
Previous Post

ಭದ್ರಾವತಿ ಎಸ್ ಎಸ್ ಜ್ಯೂವೆಲ್ಲರಿಯಲ್ಲಿ ಕಳ್ಳತನ : ಇಬ್ಬರ ಬಂಧನ

Next Post

ಜನಸಂಖ್ಯೆ ಏರಿಕೆಗೆ ಮಿತಿ ಹೇರಲು ಕುಟುಂಬ ಯೋಜನೆಯ ಅಳವಡಿಕೆ ಜನಾಂದೋಲನವಾಗಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಜನಸಂಖ್ಯೆ ಏರಿಕೆಗೆ ಮಿತಿ ಹೇರಲು ಕುಟುಂಬ ಯೋಜನೆಯ ಅಳವಡಿಕೆ ಜನಾಂದೋಲನವಾಗಲಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!