ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಳೆಯಿಂದಾಗಿ 22 ಮನೆಗಳಿಗೆ ಹಾನಿಯಾಗಿದ್ದು, 8 ಮನೆಗಳು ಸಂಪೂರ್ಣ ಹಾನಿಗೀಡಾಗಿದೆ. ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ.
ಮಳೆಯಿಂದಾಗಿ ಹಾನಿಗೊಳಗಾದ ನಗರದ ವಿವಿಧ ಬಡಾವಣೆಗಳ ಮನೆಗಳಿಗೆ ಭೇಟಿ ನೀಡಿದ ನಂತರ ಅವರು ಮಾತನಾಡಿದರು.

Also read: ಶೃಂಗೇರಿ ಜಗದ್ಗುರುಗಳಿಗೆ ಅವಮಾನ: ಆರೋಪಿ ಮುನ್ನಾಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಶಾಂತಿ ನಗರ, ಬಾಪೂಜಿ ನಗರ, ಶೇಷಾದ್ರಿಪುರಂ ಸೇರಿ ವಿವಿಧ ಬಡಾವಣೆಗಳಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ತೆರಳಿ ಅವರು ಪರಿಶೀಲನೆ ನಡೆಸಿದರು. ಮನೆ ಕಳೆದುಕೊಂಡು ಸಂಕಷ್ಟಕ್ಕೀಡಾದವರಿಗೆ ಸಾಂತ್ವನ ಹೇಳಿ, ಆದಷ್ಟು ಬೇಗ ಪರಿಹಾರ ಒದಗಿಸುವ ಭರವಸೆ ನೀಡಿದರು.











Discussion about this post