No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದೇಶದಾದ್ಯಂತ ಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್ ಜಾರಿಗೆ ತರಲು ಮುಂದಾದ ಕೇಂದ್ರ ಸರ್ಕಾರ

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅಭಿನಂದನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 22, 2022
in ಬೆಂಗಳೂರು ನಗರ
0
ಜನಸಂಖ್ಯೆ ಏರಿಕೆಗೆ ಮಿತಿ ಹೇರಲು ಕುಟುಂಬ ಯೋಜನೆಯ ಅಳವಡಿಕೆ ಜನಾಂದೋಲನವಾಗಲಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |   

ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ ʼಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್‌ʼ ಅನ್ನು ಕೇಂದ್ರ ಸರ್ಕಾರ ಮೆಚ್ಚಿದ್ದು, ದೇಶದಾದ್ಯಂತ ಈ ಕಾರ್ಯಕ್ರಮವನ್ನು ಜಾರಿ ಮಾಡುವುದಾಗಿ ಘೋಷಿಸಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಿಮ್ಹಾನ್ಸ್‌ ಸಂಸ್ಥೆಯನ್ನು ಅಭಿನಂದಿಸುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ Minister Sudhakar ಹೇಳಿದರು.

ನಿಮ್ಹಾನ್ಸ್‌ನಲ್ಲಿ ವಿಶ್ವ ಮೆದುಳು ಆರೋಗ್ಯ ದಿನ ಹಾಗೂ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ʼಬ್ರೈನ್‌ ಹೆಲ್ತ್‌ ಕ್ಲಿನಿಕ್‌ʼ ಉದ್ಘಾಟನಾ ಸಮಾರಂಭದಲ್ಲಿ ಸಚಿವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್‌ ಮಾಡಿದ ವೈದ್ಯರಿದ್ದಾರೆ. ಮಾನಸಿಕ ರೋಗಿಗಳು ಇವರ ಬಳಿ ಬಂದಾಗ ಚಿಕಿತ್ಸೆ ನೀಡಲು ವಿಶೇಷ ತರಬೇತಿ ಬೇಕು. ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ನಿಮ್ಹಾನ್ಸ್‌ನ ತಜ್ಞರು ಈಗಾಗಲೇ 100 ವೈದ್ಯರಿಗೆ ತರಬೇತಿ ನೀಡಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದೆ. ಮಾನಸಿಕ ರೋಗಿಗಳು ನೇರವಾಗಿ ನಿಮ್ಹಾನ್ಸ್‌ಗೆ ಬರದೇ ಸ್ಥಳೀಯ ಮಟ್ಟದಲ್ಲೇ ಸೇವೆ ಪಡೆಯಬಹುದು ಎಂದು ತಿಳಿಸಿದರು.
ವೈದ್ಯರಿಗೆ ಮಾನಸಿಕ ರೋಗಿಗಳಿಗೆ ಚಿಕಿತ್ಸೆ ನೀಡುವ ತರಬೇತಿ ಕೊಡುವ ಬಗ್ಗೆ ಎರಡು ವರ್ಷಗಳ ಹಿಂದೆಯೇ ಚರ್ಚೆ ನಡೆದಿತ್ತು. ಕೋವಿಡ್‌ ಬಂದ ಆರಂಭದಲ್ಲಿ ರೋಗಿಯೊಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೊರೊನಾ ಪಾಸಿಟಿವ್‌ ಎಂದು ವರದಿ ಬಂದ ಕೂಡಲೇ ಅವರು ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದರು. ರೋಗದಿಂದ ಸಾಯುವುದಕ್ಕಿಂತ ಭಯದಿಂದಲೇ ಕೆಲವರು ಸತ್ತಿದ್ದರು. ಇಂತಹ ರೋಗಿಗಳಿಗೆ ಆಪ್ತ ಸಮಾಲೋಚನೆ ಅಗತ್ಯವಿದೆ. ಇದಕ್ಕಾಗಿ ನಿಮ್ಹಾನ್ಸ್‌ ಸಹಯೋಗದಲ್ಲಿ ಆಪ್ತ ಸಮಾಲೋಚನೆ ಆರಂಭಿಸಲಾಯಿತು. ಜೊತೆಗೆ ಇದರಲ್ಲೇ ಆನ್‌ಲೈನ್‌ ಸೇವೆಯನ್ನೂ ಆರಂಭಿಸಲಾಯಿತು. ಇದು ಯಶಸ್ವಿಯಾಗಿದ್ದು, ಒಂದೂವರೆ ವರ್ಷದಲ್ಲಿ 25 ಲಕ್ಷ ಜನರಿಗೆ ಆಪ್ತ ಸಮಾಲೋಚನೆ ಮಾಡಲಾಗಿದೆ. ದೇಶದಲ್ಲಿ ಬೇರೆಲ್ಲೂ ಇಂತಹ ಕಾರ್ಯ ಆಗಿಲ್ಲ ಎಂದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯುವವರು, ಅನುತ್ತೀರ್ಣರಾದವರು ಕೂಡ ಆತ್ಮಹತ್ಯೆ ಮಾಡಿಕೊಳ್ಳುವುದು ಕಂಡುಬಂದಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಮೂರು ದಿನ ಮುನ್ನ ಕೌನ್ಸಿಲಿಂಗ್‌ ಮಾಡುವಂತೆ ಆರೋಗ್ಯ ಇಲಾಖೆಯ ಆಯುಕ್ತರಿಗೆ ಸೂಚಿಸಲಾಯಿತು. ಎಷ್ಟೋ ವಿದ್ಯಾರ್ಥಿಗಳು ಈ ಸೇವೆ ಪಡೆದಿದ್ದಾರೆ. ಇದಕ್ಕಾಗಿ ಇಲಾಖೆಯನ್ನು ಅಭಿನಂದಿಸುತ್ತೇನೆ ಎಂದರು.
ಜನರು ಯಾವುದೇ ಮಾನಸಿಕ ಸಮಸ್ಯೆ ಇದ್ದರೂ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯಬೇಕು. ಪ್ರತಿ ದಿನ ಒಂದು ಕ್ರೀಡೆ ಆಡಬೇಕು ಅಥವಾ ಒಂದು ಸಂಗೀತ ಸಾಧನವನ್ನು ಕಲಿಯಬೇಕು. ಇದರಿಂದಾಗಿ ಮೆದುಳಿನ ಆರೋಗ್ಯ ಉತ್ತಮವಾಗುತ್ತದೆ. ಜನಪ್ರಿಯ ಕ್ರಿಕೆಟಿಗ ರಾಬಿನ್‌ ಉತ್ತಪ್ಪ, ಕರ್ನಾಟಕದ ಮೆದುಳು ಆರೋಗ್ಯ ಉಪಕ್ರಮದ ರಾಯಭಾರಿಯಾಗಿದ್ದಾರೆ. ಅವರು ಉಚಿತವಾಗಿ ಈ ಕೆಲಸ ಮಾಡುತ್ತಿದ್ದು, ನಿಜವಾದ ಹೀರೋ ಆಗಿದ್ದಾರೆ ಎಂದು ಸಚಿವರು ಶ್ಲಾಘಿಸಿದರು.

Also read: ಅಣ್ಣಾಹಜಾರೆ ಹೋರಾಟ ಸಮಿತಿಯ ಅಶೋಕ್ ಯಾದವ್ ವಿಧಿವಶ

ಒಬ್ಬ ವ್ಯಕ್ತಿಗೆ ಕೇವಲ ದೈಹಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಸಾಲುವುದಿಲ್ಲ. ಮಾನಸಿಕ ಆರೋಗ್ಯ ಕೂಡ ಮುಖ್ಯವಾಗುತ್ತದೆ. ಮೆದುಳಿನ ಆರೋಗ್ಯ ನಮ್ಮ ನಡವಳಿಕೆ, ಅಭಿಪ್ರಾಯ ವ್ಯಕ್ತಪಡಿಸುವುದು, ನಗುವುದು, ಅಳುವುದು, ಎಲ್ಲಾ ಭಾವನೆಗಳನ್ನು ವ್ಯಕ್ತಪಡಿಸಲು ಮೆದುಳು ಅಗತ್ಯ. ನೆನಪು ಎನ್ನುವುದು ಸುಂದರವಾದ ಅನುಭವ. ಆ ನೆನಪನ್ನು ಹಿಡಿದಿಟ್ಟುಕೊಳ್ಳುವುದೇ ಮೆದುಳು. ನೆನಪಿನ ಶಕ್ತಿ ಇಲ್ಲದಿದ್ದರೆ ಭವಿಷ್ಯ ಸಂಪೂರ್ಣ ಮಂಕಾಗಿಬಿಡುತ್ತದೆ. ದೇಹದ ಎಲ್ಲಾ ಅಂಗಗಳು ಉತ್ತಮವಾಗಿರಲು ಮೆದುಳು ಮುಖ್ಯ. ಇದಕ್ಕಾಗಿ ಸದಾ ಕ್ರೀಯಾಶೀಲವಾಗಿರಬೇಕು. ಆಹಾರ ಸೇವನೆ, ವ್ಯಾಯಾಮ ಮೊದಲಾದವುಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು. ಉತ್ತಮ ಆರೋಗ್ಯಕ್ಕೆ ಕನಿಷ್ಠ 6-8 ಗಂಟೆ ನಿದ್ದೆ ಮಾಡಬೇಕಾಗುತ್ತದೆ. ನಿದ್ರಾಹೀನತೆ ಉಂಟಾದರೆ ಆರೋಗ್ಯವೂ ಕೆಡುತ್ತದೆ. ಈ ಬಗ್ಗೆ ಜನರಲ್ಲಿ ಅರಿವು ಅಗತ್ಯ ಎಂದರು.
ಮಾನಸಿಕ ರೋಗವನ್ನು ಜನರು ತಪ್ಪಾಗಿ ಭಾವಿಸುತ್ತಿದ್ದಾರೆ. ಮಾನಸಿಕ ಆರೋಗ್ಯ ತಜ್ಞರ ಬಳಿ ಹೋದರೆ, ಆ ವ್ಯಕ್ತಿಗೆ ತಲೆ ಸರಿ ಇಲ್ಲ ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಇದರಿಂದಾಗಿ ಅನೇಕರು ವೈದ್ಯರ ಬಳಿ ಹೋಗುವುದೇ ಇಲ್ಲ. ಆರಂಭಿಕ ಹಂತದಲ್ಲೇ ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆದರೆ ರೋಗ ನಿವಾರಣೆ ಸಾಧ್ಯ. ಆದರೆ ಬಡತನ, ಸಮಾಜದ ಬಗ್ಗೆ ಆತಂಕ, ಅರಿವಿನ ಕೊರತೆ, ಸೌಲಭ್ಯಗಳ ಕೊರತೆ ಮೊದಲಾದ ಕಾರಣಗಳಿಂದ ಮಾನಸಿಕ ಅನಾರೋಗ್ಯಕ್ಕೊಳಗಾಗುವವರ ಸಂಖ್ಯೆ ಹೆಚ್ಚುತ್ತಿದೆ. ಫಿಟ್ಸ್‌, ಪಾರ್ಶ್ವವಾಯು, ಡಿಮೆನ್ಶಿಯ, ಮೆದುಳು ಟ್ಯೂಮರ್‌ ಸೇರಿದಂತೆ ಹಲವಾರು ನರ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿವೆ. ಪಾರ್ಕಿನ್‌ಸನ್‌ ರೋಗಕ್ಕೂ ಅನೇಕರು ತುತ್ತಾಗುತ್ತಿದ್ದಾರೆ. ಈ ರೋಗಗಳನ್ನು ಆರಂಭದಲ್ಲೇ ಪತ್ತೆ ಮಾಡಿದರೆ ಉತ್ತಮವಾಗಿ ಚಿಕಿತ್ಸೆ ನೀಡಬಹುದು ಎಂದು ಸಲಹೆ ನೀಡಿದರು.

ಸಚಿವರು ಹೇಳಿದ ಇತರೆ ಅಂಶಗಳು:

ನಿಮ್ಹಾನ್ಸ್‌ ಸಂಸ್ಥೆ ಇಡೀ ದಕ್ಷಿಣ ಭಾರತದಲ್ಲೇ ಪ್ರಸಿದ್ಧಿ ಪಡೆದಿದ್ದು, ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗಿನ ಜನರು ಕೂಡ ಇದೇ ಆಸ್ಪತ್ರೆಗೆ ಬರುತ್ತಿದ್ದಾರೆ. ಇಲ್ಲಿ ಟ್ರಾಮಾ ಸೆಂಟರ್‌ ಆರಂಭಿಸುವ ಕುರಿತು ಕೇಂದ್ರ ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರ ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ʼನಮ್ಮ ಕ್ಲಿನಿಕ್‌ʼ ಮೂಲಕ ಎಲ್ಲರಿಗೂ ಪ್ರಾಥಮಿಕ ಆರೋಗ್ಯ ಸೇವೆ ನೀಡಲಿದೆ.

ಖಾಸಗಿ ಆಂಬ್ಯುಲೆನ್ಸ್‌ ದರ ಪರಿಷ್ಕರಣೆ ಮಾಡುವ ಅಧಿಕಾರ ಸಾರಿಗೆ ಇಲಾಖೆಗಿದೆ. ರೋಗಿಗಳಿಗೆ ದುಂದು ವೆಚ್ಚವಾದರೆ ಕಡಿವಾಣ ಹಾಕಲಾಗುವುದು. ಈ ಬಗ್ಗೆ ಸಾರಿಗೆ ಸಚಿವರು ಹಾಗೂ ಅಧಿಕಾರಿಗಳ ಬಳಿ ಚರ್ಚಿಸಲಾಗುವುದು. ಬೇಕಾಬಿಟ್ಟಿ ದರ ನಿಗದಿ ಮಾಡುವುದನ್ನು ಸರ್ಕಾರ ಒಪ್ಪುವುದಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister SudhakarNewsinKannadaNewsKannadaState Newsಬೆಂಗಳೂರುಸಚಿವ ಡಾ. ಕೆ. ಸುಧಾಕರ್‌
Share197Tweet123Send
Previous Post

ಅಣ್ಣಾಹಜಾರೆ ಹೋರಾಟ ಸಮಿತಿಯ ಅಶೋಕ್ ಯಾದವ್ ವಿಧಿವಶ

Next Post

ಸೋನಿಯಾ ವಿಚಾರಣೆ ವಿರೋಧಿಸಿ ಶಿವಮೊಗ್ಗದಲ್ಲೂ ಪ್ರತಿಭಟನೆ: ಕಾಂಗ್ರೆಸ್ ನಾಯಕರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೋನಿಯಾ ವಿಚಾರಣೆ ವಿರೋಧಿಸಿ ಶಿವಮೊಗ್ಗದಲ್ಲೂ ಪ್ರತಿಭಟನೆ: ಕಾಂಗ್ರೆಸ್ ನಾಯಕರ ಬಂಧನ

ಸೋನಿಯಾ ವಿಚಾರಣೆ ವಿರೋಧಿಸಿ ಶಿವಮೊಗ್ಗದಲ್ಲೂ ಪ್ರತಿಭಟನೆ: ಕಾಂಗ್ರೆಸ್ ನಾಯಕರ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಸುರೇಶ್ ಕುಮಾರ್

ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಸುರೇಶ್ ಕುಮಾರ್

March 24, 2026
ಘನತ್ಯಾಜ್ಯ ವಿಲೇವಾರಿ ಪರಿಣಾಮಕಾರಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲ: ಶಾಸಕ ಡಿ.ಎಸ್. ಅರುಣ್ ಟೀಕೆ

ಘನತ್ಯಾಜ್ಯ ವಿಲೇವಾರಿ ಪರಿಣಾಮಕಾರಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲ: ಶಾಸಕ ಡಿ.ಎಸ್. ಅರುಣ್ ಟೀಕೆ

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL