ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ಕಿಶೋರ್ ಸಿಂಗ್ (27), ಸುನೀಲ್ (27) ಬಂಧಿತ ಆರೋಪಿಗಳಾಗಿದ್ದಾರೆ. ಸೊರಬ ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಾಗರ ಟೌನ್ ಠಾಣಾ ಪೊಲೀಸರು ದಾಳಿ ನಡೆಸಿ, ಆರೋಪಿಗಳಿಂದ ಅಂದಾಜು 30,000ರೂ. ಮೌಲ್ಯದ 1.135ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
Also read: ಭದ್ರಾವತಿ: 2ನೇ ಇಂಡೋ-ನೇಪಾಳ್ ಚಾಂಪಿಯನ್ಶಿಪ್ ಪಂದ್ಯಾವಳಿ ವಿಜೇತರಿಗೆ ಅದ್ದೂರಿ ಸ್ವಾಗತ
ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post