ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ರಾಜಸ್ತಾನದ ಜೈಪುರದ ಪಿಂಕಿ ಸಿಟಿಯಲ್ಲಿ ಜರುಗಿದ ಅಮೆಚೂರ್ ನ್ಯಾಷನಲ್ ಗೇಮ್ಸ್ ಪಂದ್ಯಾವಳಿಯಲ್ಲಿ 15 ಕ್ರೀಡಾಪಟುಗಳ ತಂಡ ರಾಜ್ಯವನ್ನು ಪ್ರತಿನಿಧಿಸಿ ಹಲವು ಸ್ಪರ್ಧೆಗಳಲ್ಲಿ ಗೆದ್ದು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಾಲಿಬಾಲ್ನಲ್ಲಿ ಪ್ರಥಮ ಬಹುಮಾನ, 1,600 ಮತ್ತು 1,500 ಮೀ. ಓಟದಲ್ಲಿ ಪ್ರಥಮ, 100 ಮೀ. ಮತ್ತು 800 ಮೀಟರ್ ಓಟದಲ್ಲಿ ದ್ವಿತೀಯ ಹಾಗು 400 ಮೀ. ಓಟದಲ್ಲಿ ತೃತೀಯ ಬಹುಮಾನ ಮತ್ತು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡು, ಒಟ್ಟು 11 ಪದಕಗಳನ್ನು ತಮ್ಮದಾಗಿಸಿಕೊಂಡಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ದೊಣಬಘಟ್ಟ ನಿವಾಸಿ ಇಮ್ರಾನ್ ತರಬೇತಿದಾರರಾಗಿದ್ದು, ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡುವಲ್ಲಿ ಇವರ ಶ್ರಮ ಹೆಚ್ಚಿನದ್ದಾಗಿದೆ. ಎಂಎಸ್ಎಂಇ-ಪಿಸಿ ರಾಜ್ಯ ಘಟಕದ ಅಧ್ಯಕ್ಷ, ಉದ್ಯಮಿ ಎಚ್.ಸಿ ರಮೇಶ್ 15 ಕ್ರೀಡಾಪಟುಗಳನ್ನೊಳಗೊಂಡ ತಂಡಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾಗಳ ಸಾಧನೆಗೆ ಬೆನ್ನೆಲುಬಾಗಿದ್ದಾರೆ.
Also read: Over 77 crore portable transactions recorded in One Nation One Ration Card Scheme
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post