ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲ್ಲೂಕಿನ ಚಂದ್ರಗುತ್ತಿ ಸಮೀಪದ ಬಸ್ತಿಕೊಪ್ಪಗ್ರಾಮದಲ್ಲಿ ಗಣಿಗಾರಿಕೆ ಬ್ಲಾಸ್ಟಿಂಗ್ ತೀವ್ರತೆಯಿಂದ ಗ್ರಾಮದ ಅನೇಕ ಮನೆಗಳು ಬಿರುಕುಬಿಟ್ಟಿದ್ದು ಯಾವುದಾದರೂ ವಿಶೇಷ ಅನುದಾನದಡಿ ಸಂತ್ರಸ್ತರಿಗೆ ಪರಿಹಾರ ದೊರಕಬೇಕು. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶಿಸರ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲ್ಲೂಕು ಜೀವವೈವಿಧ್ಯ ಸಮಿತಿಯ ಕ್ರಿಯಾತ್ಮಕ ಚಟುವಟಿಕೆಗಳ ಕುರಿತಂತೆ ಕರೆದಿದ್ದ ಸಭೆ ಉದ್ಧೇಶಿಸಿ ಮಾತನಾಡಿದರು.

ಈಗಾಗಲೇ ಇಲ್ಲಿನ ಜೀವವೈವಿಧ್ಯ ಸಮಿತಿಗೆ ರಾಜ್ಯ ಜೀವವೈವಿಧ್ಯ ಮಂಡಳಿಯೂ ಸೇರಿದಂತೆ ವೃಕ್ಷ ಲಕ್ಷ ಆಂದೋಲನವೂ ಕೈ ಜೋಡಿಸಿದ್ದು ಉತ್ತಮ ಕಾರ್ಯವಾಗಿದೆ. ಮುಂದುವರೆದಂತೆ ತಾಲ್ಲೂಕಿನಲ್ಲಿ ವಿಶೇಷವಾಗಿ ಕೊಡಸೆ ವನ, ಗೊಗ್ಗಯ್ಯವನಕ್ಕೆ ಮುಂದಾಗಲು ಸಿದ್ಧತೆ ನಡೆಸಿದ್ದು, ಮುಂದಿನ ತಿಂಗಳು ವಿವಿಧ ಪರಿಸರ ರಕ್ಷಣೆ ಕುರಿತ ಕಾರ್ಯಗಾರ ನಡೆಯಲಿದೆ ಎಂದರು.

ಇಒ ಕುಮಾರ್, ಜೀವವೈವಿಧ್ಯ ನಿರ್ವಹಣಾ ಸಮಿತಿಯ ಶ್ರೀಪಾದ ಬಿಚ್ಚುಗತ್ತಿ, ಬಸ್ತಿಕೊಪ್ಪ ಗ್ರಾಮಸ್ಥರಿದ್ದರು.









Discussion about this post