Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಶಿಕ್ಷಕರು ಮಕ್ಕಳನ್ನು ಕನ್ನಡ ಮಾಧ್ಯಮಕ್ಕೆ ಸೇರಿಸಲು ಮುಂದಾಗಲಿ: ಬಸವರಾಜ ಹೊರಟ್ಟಿ

August 13, 2022
in ಧಾರವಾಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಹುಬ್ಬಳ್ಳಿ  |

ನಮ್ಮ ರಾಜ್ಯ ಹಾಗೂ ಬೇರೆ ರಾಜ್ಯದಲ್ಲಿ ಕನ್ನಡದ ಬಗ್ಗೆ ಅಸಂಬದ್ಧ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಇಂದು ಕನ್ನಡ ಮಾಯವಾಗುತ್ತಿದೆ. ಕನ್ನಡದಲ್ಲಿ 100 ಕ್ಕೆ 100 ಸಾಧನೆ ಮಾಡುವ ಶಿಕ್ಷಕರು ಹಾಗೂ ಶಾಲೆಗೆ ವಿಶೇಷ ಯೋಜನೆ ರೂಪಿಸಿ, ಪ್ರೋತ್ಸಾಹಿಸಲಾಗುವುದು. ಕನ್ನಡ ಶಿಕ್ಷಕರು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮಕ್ಕೆ ಸೇರಿಸಬೇಕು.ಕನ್ನಡ ಉಳಿಸಿ, ಬೆಳೆಸುವ ಕೆಲಸಗಳು ಆಗಬೇಕಿವೆ ಎಂದು ಮಾಜಿ ಸಭಾಪತಿ ಮತ್ತು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಹುಬ್ಬಳ್ಳಿಯ ವಿದ್ಯಾನಗರದ ಬಿ.ವಿ.ಬಿ ಕಾಲೇಜ್ ಆವರಣದ ಬಯೋಟೆಕ್ ಸಭಾಂಗಣದಲ್ಲಿ ಇಂದು ಧಾರವಾಡ ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಸಿರಿಗನ್ನಡ ನುಡಿ ಬಳಗ ಇವುಗಳ ಸಂಯುಕ್ತಾಶ್ರಯದಲ್ಲಿ ಕನ್ನಡ ಭಾಷಾ ಬೋಧಕರ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ಶೇ.23 ರಷ್ಟು ಮಾತ್ರ ಕನ್ನಡ ಮಾತನಾಡುವವರು ಸಿಗುತ್ತಾರೆ. ಈಗ ಕನ್ನಡ ಮಾತನಾಡುವವರು ಸಹ ಇಂಗ್ಲಿಷ್ ಮಾತನಾಡುತ್ತಾರೆ. ಬಿಎಡ್ ಮುಗಿಸಿದ 38 ಸಾವಿರ ಹಾಗೂ ಡಿಎಡ್ ಮುಗಿಸಿದ 92 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತಿಲ್ಲ. ಬಾಹ್ಯ ಮೂಲದಿಂದ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದು ಅಷ್ಟು ಸರಿಯಲ್ಲ. ಕನ್ನಡ ಮಾಧ್ಯಮದ ಶಿಕ್ಷಕರಿಗೆ 14 ಸಾವಿರ ಮತ್ತು ಇಂಗ್ಲಿಷ್ ಮಾಧ್ಯಮದ ಶಿಕ್ಷಕರಿಗೆ 16 ಸಾವಿರ ವೇತನವನ್ನು ನೀಡಲಾಗುತ್ತಿದೆ. ಆ ಮೂಲಕ ವೇತನದಲ್ಲಿ ಸಹ ತಾರತಮ್ಯ ಮಾಡಲಾಗುತ್ತಿದೆ. ಕನ್ನಡದ ಬಗ್ಗೆ ಹೆಚ್ಚು ಆಸಕ್ತಿ ವಹಿಸುವಂತೆ ಜನರಿಗೆ ತಿಳಿಸಬೇಕು. ಕನ್ನಡದಲ್ಲಿ ಹೆಚ್ಚು ಪ್ರಾವೀಣ್ಯತೆ ಪಡೆಯಬೇಕು. ಕನ್ನಡ ಬಗ್ಗೆ ಕಾಳಜಿ ವಹಿಸಿ ಎಂದು ಹೇಳುವುದು ದುರ್ದೈವದ ಸಂಗತಿಯಾಗಿದೆ. ಕನ್ನಡಕ್ಕೆ ಅಗ್ರಸ್ಥಾನವನ್ನು ನೀಡಬೇಕು. ಬೇರೆ ಬೇರೆ ರಾಜ್ಯಗಳ ಜನರು ಐಎಎಸ್ ಪರೀಕ್ಷೆಗಳಲ್ಲಿ ಸಾಧನೆಗೈಯುತ್ತಿದ್ದಾರೆ. ಅವರಿಗಿಂತ ನಮ್ಮ ರಾಜ್ಯ ಹಿಂದೆಯಿಲ್ಲ. ಕನ್ನಡಿಗರು ಎಂಬ ಇಚ್ಛಾಶಕ್ತಿಯನ್ನು ತೋರಿಸಬೇಕು‌ ಎಂದು ತಿಳಿಸಿದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಭಾಷೆಯನ್ನು ಬೋಧನೆ ಮಾಡುವ ಶಿಕ್ಷಕರು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆ ಮೇಲೆ ಪ್ರಭುತ್ವ ಸಾಧಿಸಬೇಕಾದರೆ ಹೆಚ್ಚು ಹೆಚ್ಚು ಗ್ರಂಥಗಳನ್ನು ಅಧ್ಯಯನ ಮಾಡಬೇಕು. ಮಕ್ಕಳು ಕೇಳುವ ಪ್ರಶ್ನೆಗಳಿಗೆ ಹೆಚ್ಚು ಸಮರ್ಥವಾಗಿ ಉತ್ತರವನ್ನು ನೀಡಬಹುದಾಗಿದೆ. ಆಕರ ಗ್ರಂಥಗಳ ಅಧ್ಯಯನದಿಂದ ಆಸಕ್ತಿಕರವಾದ ಬೋಧನೆ ಮಾಡಬಹುದು. ಭಾಷೆ ಮೇಲೆ ಹಿಡಿತವಿರಬೇಕು. ಕನ್ನಡ ಭಾಷೆಯಲ್ಲಿ ಮಕ್ಕಳು ನೂರಕ್ಕೆ ನೂರರಷ್ಟು ಅಂಕಗಳನ್ನು ಗಳಿಸಬೇಕು. ಮಕ್ಕಳಲ್ಲಿ ಪ್ರಾವೀಣ್ಯತೆ ಬರಲು ಶಿಕ್ಷಕರು ಮೊದಲು ತಯಾರಾಗಬೇಕು. ಕನ್ನಡ ಬೋಧನೆ ಮಕ್ಕಳಿಗೆ ಯಾವ ರೀತಿಯಾಗಿ ಪರಿಣಾಮಕಾರಿಯಾಯಿತು ಎಂಬುದನ್ನು ಅರಿತುಕೊಳ್ಳಬೇಕಾಗಿದೆ.ಮಕ್ಕಳಲ್ಲಿ ಭಾಷೆ ಬಗ್ಗೆ ಅಭಿಮಾನ ಮೂಡುವಂತೆ ಮಾಡಬೇಕು ಎಂದರು.
ರವೀಶಕುಮಾರ ಮಾತನಾಡಿ, ನಾವು ಉತ್ತಮ ಶಿಕ್ಷಕರಾಗಬೇಕು. ತರಗತಿಯಲ್ಲಿ ಶಿಕ್ಷಕರು ಸಾರ್ವಭೌಮರಾಗಬೇಕು. ಮನಸ್ಸಿಟ್ಟು ಕೆಲಸ ಮಾಡಲು ಮುಂದಾಗಬೇಕು. ವೃತ್ತಿ ಗೌರವ ಕಾಪಾಡಿಕೊಳ್ಳಬೇಕು. ನಿಷ್ಠೆಯಿಂದ ದುಡಿಯಬೇಕು. ಬೇರೆ ವೃತ್ತಿಗಿಂತ ಶಿಕ್ಷಕರ ವೃತ್ತಿ ಅಂತರಂಗ ಶುದ್ದಿಗೆ ಹೆಚ್ಚಿನ ಮಹತ್ವ ಕೊಡುತ್ತದೆ ಎಂದು ಹೇಳಿದರು.

ಕನ್ನಡ ವಿಷಯದ ಪರಿವೀಕ್ಷಕರಾದ ಅರಿಹಂತ ಪಾಟೀಲ ಅವರು, ಮಕ್ಕಳಿಗೆ ಪಾಠ ಬೋಧನೆ ಮಾಡುವಾಗ ನೈತಿಕ ಮೌಲ್ಯಗಳನ್ನು ತುಂಬಬೇಕು. ಒಬ್ಬರಿಂದ ಇನ್ನೊಬ್ಬರಿಂದ ಕಲಿಯಬೇಕು. ನಾವುಗಳು ಆದರ್ಶ ಶಿಕ್ಷಕರಾಗಬೇಕು. ತಂತ್ರಜ್ಞಾನ ಬಳಸಿಕೊಂಡು ಪರಿಣಾಮಕಾರಿಯಾಗಿ ಪಾಠ ಬೋಧನೆ ಮಾಡಬಹುದು ಎಂದು ಅನಿಸಿಕೆ ‌ಹಂಚಿಕೊಂಡರು.
ನಿವೃತ್ತ ಪ್ರಾಚಾರ್ಯ ಡಾ.ಎಸ್.ಬಿ.ಮಟೋಳಿ ಅವರು ಕನ್ನಡ ಭಾಷಾ ಬೋಧನೆಯ ಕೌಶಲ್ಯಗಳು ಹಾಗೂ ರಾಜೇಸಾಬ ವಾಲಿಕಾರ ಅವರು ಕಲಿಕಾ ಬೋಧನಾ ಪ್ರಕ್ರಿಯೆಯಲ್ಲಿ ತಂತ್ರಜ್ಞಾನದ ಬಳಕೆ – ಒಂದು ಪ್ರಾತ್ಯಕ್ಷಿಕೆ ಎಂಬ ವಿಷಯಗಳ ಕುರಿತು ಉಪನ್ಯಾಸ ನೀಡಿದರು.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿಗಳಾದ ಸುರೇಶ ಹುಗ್ಗಿ, ಡಿವೈಪಿಸಿಗಳಾದ ಜಿ.ಎನ್‌. ಮಠಪತಿ, ಎಸ್.ಎಮ್.ಹುಡೇದಮನಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ ಸಿಂದಗಿ, ಎನ್.ಎಸ್. ಖಾನಗೌಡ್ರ, ಮಂಜಯ್ಯ ಶಿವಳ್ಳಿಮಠ, ಜಿಲ್ಲಾ ಸಿರಿಗನ್ನಡ ನುಡಿ ಬಳಗದ ಅಧ್ಯಕ್ಷ ವೆಂಕಟೇಶ ಲಕ್ಷಾಣಿ, ಕನ್ನಡ ಭಾಷಾ ಬೋಧನಾ ಪರಿವಾರದ ವಿವಿಧ ಘಟಕಗಳ ಅಧ್ಯಕ್ಷರಾದ ವಿ.ಆಯ್. ಪಾಟೀಲ, ಎಸ್.ಎಸ್. ಬೆನಕನಾಳ, ಸಂಗಮೇಶ ಹಡಪದ, ಎಲ್.ಎ.ನದಾಫ್, ಎಂ.ಎಚ್. ಮುನ್ನೋಳಿ, ಅಶೋಕ‌ ಈರಗಾರ, ಪ್ರಕಾಶ ಕಳಸದ, ವರ್ಧಮಾನ ಕುರಕುರಿ, ವೆಂಕಟೇಶ ಭೋವಿ, ಹನುಮಂತ ಪೂಜಾರ ಸೇರಿದಂತೆ ವಿವಿಧ ಜಿಲ್ಲೆಗಳ ಶಿಕ್ಷಕರು ಉಪಸ್ಥಿತರಿದ್ದರು.

ಕನ್ನಡ ವಿಷಯ ಪರಿವೀಕ್ಷಕರಾದ ಪೂರ್ಣಿಮಾ ಮುಕ್ಕುಂದಿ ಸ್ವಾಗತಿಸಿದರು. ಕನ್ನಡ ಭಾಷಾ ಬೋಧಕ ಪರಿವಾರ ನವಲಗುಂದ ಘಟಕದ ಅಧ್ಯಕ್ಷೆ ಶರೀಫಾ ಬೇಗಂ ವಂದಿಸಿದರು. ವಿಜಯಲಕ್ಷ್ಮಿ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaHubliKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಹುಬ್ಬಳ್ಳಿ
Previous Post

ಸ್ವಾತಂತ್ಯೋತ್ಸವ ಅಮೃತ ಮಹೋತ್ಸವ: ದುರ್ಗಿಗುಡಿ ಸರ್ಕಾರಿ ಶಾಲಾ ಮಕ್ಕಳಿಂದ ಬೃಹತ್ ಜಾಥಾ

Next Post

ಅಟಲ್ ಜಿ‌ ಜನಸ್ನೇಹಿ ಕೇಂದ್ರ ಸೇವೆ ನೀಡಿಕೆ ಧಾರವಾಡ ಜಿಲ್ಲೆಗೆ ತೃತೀಯ ಸ್ಥಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಟಲ್ ಜಿ‌ ಜನಸ್ನೇಹಿ ಕೇಂದ್ರ ಸೇವೆ ನೀಡಿಕೆ ಧಾರವಾಡ ಜಿಲ್ಲೆಗೆ ತೃತೀಯ ಸ್ಥಾನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!