ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಅಟಲ್ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆ ಒದಗಿಸುವಲ್ಲಿ ಧಾರವಾಡ ಜಿಲ್ಲೆಯ ನಾಡಕಛೇರಿಗಳಲ್ಲಿ ಜುಲೈ -2022 ಮಾಸದಲ್ಲಿ ಸ್ವೀಕರಿಸಿದ 28,113 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ . 99.98 ರಷ್ಟು ವಿಲೇವಾರಿ ಮಾಡಿ 7.14 ಸಿಗ್ಮಾ ಮೌಲ್ಯವನ್ನು ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದೆ ಎಂದು ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕಿ ಗಂಗೂಬಾಯಿ ಮಾನಕರ್ ಅಭಿನಂದಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಅಭಿನಂದನಾ ಪತ್ರ ಬರೆದಿರುವ ಅವರು, 8.9 ವಿಲೇವಾರಿ ಸೂಚ್ಯಂಕದ ( Disposal Index ) ಪ್ರಕಾರ ಧಾರವಾಡ ಜಿಲ್ಲೆಯಲ್ಲಿ 9.9 ಪಟ್ಟು ಅರ್ಜಿಗಳನ್ನು ನಿಗದಿತ ಅವಧಿಗಿಂತ ಶೀಘ್ರವಾಗಿ ವಿಲೇವಾರಿ ಮಾಡಿ , ಪ್ರಸಕ್ತ ಸಾಲಿನ ಜುಲೈ ತಿಂಗಳಲ್ಲಿ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವುದು ಶ್ಲಾಘನೀಯ.
ಜಿಲ್ಲೆಯಲ್ಲಿನ ಈ ಕಾರ್ಯ ಸಾಧನೆಗೆ ಜಿಲ್ಲಾಧಿಕಾರಿಗಳ ಕಚೇರಿ ,ನಾಡಕಛೇರಿ , ಅಟಲ್ಜೀ ಜನಸ್ನೇಹಿ ಕೇಂದ್ರದ ಅಧಿಕಾರಿ ,ಸಿಬ್ಬಂದಿ ವರ್ಗದ ಸಹಕಾರ , ಕಾರ್ಯತತ್ಪರತೆ ಕಾರಣವಾಗಿರುತ್ತದೆ . ಮುಂದಿನ ದಿನಗಳಲ್ಲಿಯೂ ಸಹ ಜಿಲ್ಲೆಯಲ್ಲಿ ಇದೇ ರೀತಿಯ ಸಹಕಾರ ಹಾಗೂ ಕಾರ್ಯ ಕ್ಷಮತೆಯನ್ನು ನಿರೀಕ್ಷಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
Also read: ಶಿಕ್ಷಕರು ಮಕ್ಕಳನ್ನು ಕನ್ನಡ ಮಾಧ್ಯಮಕ್ಕೆ ಸೇರಿಸಲು ಮುಂದಾಗಲಿ: ಬಸವರಾಜ ಹೊರಟ್ಟಿಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post