ಕಲ್ಪ ಮೀಡಿಯಾ ಹೌಸ್ | ತುಮಕೂರು |
ಜಿಲ್ಲೆಯ ಶಿರಾ ಬಳಿ ಇಂದು ನಸುಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 9 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ತೀವ್ರವಾಗಿ ಗಾಯಗೊಂಡಿದ್ದಾರೆ.
ಇಂದು ಬೆಳಗಿನ ಜಾವ ಲಾರಿ ಹಾಗೂ ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮಕ್ಕಳೂ ಸೇರಿದಂತೆ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯಚೂರು ಜಿ¯್ಲೆಯ ಕೂಲಿ ಕಾರ್ಮಿಕರು ಎಂದು ತಿಳಿದುಬಂದಿದ್ದು, ಇವರೆಲ್ಲರೂ ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳುತ್ತಿದ್ದರು.
ನಸುಕಿನ 4 ಗಂಟೆ ವೇಳೆ ಶಿರಾ ಬಳಿ ಕ್ರೂಸರ್ ತೆರಳುತ್ತಿದ್ದಾಗ ಲಾರಿಯನ್ನು ಓವರ್ ಟೇಕ್ ಮಾಡಲು ಯತ್ನಿಸಿದ ವೇಳೆ ಚಾಲಕ ನಿಯಂತ್ರಣ ಕಳೆದುಕೊಂಡು ಡಿಕ್ಕಿಯಾಗಿದೆ ಎನ್ನಲಾಗಿದೆ.
ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು, ಇಬ್ಬರು ಮಕ್ಕಳು ಸೇರಿ ಒಟ್ಟು 9 ಮಂದಿ ಸ್ಥಳದಲ್ಲಿ ಅಸುನೀಗಿದ್ದಾರೆ. 11 ಜನ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು, ಗಾಯಾಳು ಮಹಿಳೆಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾವೆಲ್ಲವೂ ನಿದ್ದೆಯಲ್ಲಿ ಇದ್ದೆವು. ಏನಾಯಿತು ಎಂದು ತಿಳಿಯುವ ವೇಳೆಗೆ ಅಪಘಾತ ಸಂಭವಿಸಿತ್ತು. ನನ್ನ ಪತಿ ಸೇರಿದಂತೆ ಎಲ್ಲರೂ ಒಳಗೆ ಸಿಲುಕಿ, ಸಹಾಯಕ್ಕೆ ಕೂಗುತ್ತಿದ್ದೆವು. ಆದರೆ, ನಮ್ಮ ಕಣ್ಣ ಮುಂದೆಯೇ ವಾಹನಗಳು ಜನ ಹೋಗುತ್ತಿದ್ದರೂ ಯಾರೂ ಸಹಾಯಕ್ಕೆ ಬರಲಿಲ್ಲ. ಸಾಯುತ್ತೇವೆ ಎಂದು ನನ್ನ ಸಂಬಂಧಿಗಳು ಕೂಗುತ್ತಿದ್ದರು. ಅಕ್ಷರಶಃ ನರಕ ನೋಡಿದ್ದೇವೆ ಎಂದು ಕಣ್ಣೀರು ಹಾಕಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post