ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆ 2011ರ ಕಲಮು 2(ಡಿ) ಗೆ ತಿದ್ದುಪಡಿ ತರಲು ನಿರ್ಧಾರ ಮಾಡಿದ್ದು, ಬಹುದಿನಗಳ ಜನತೆಯ ಬೇಡಿಕೆಗೆ, ಸ್ಪಂದಿಸಿ ದಂತಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ತಿಳಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಪ್ರಸ್ತಾವಿತ ಕರಡು ತಿದ್ದುಪಡಿಯು, ಯಾವುದೇ ರೀತಿಯಲ್ಲಿಯೂ ವಿಧೇಯಕದ ಮೂಲ ಕರಡಿಗೆ ವಿರುದ್ದವಾಗಿರದೆ, ಗ್ರಾಮೀಣ ಪ್ರದೇಶದ, ರೈತರ ಹಾಗೂ ಇತರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಗಳನ್ನು ದಾಖಲಿಸುವುದರಿಂದ ರಕ್ಷಣೆ ದೊರೆಯುತ್ತದೆ. ಸಣ್ಣ ಹಾಗೂ ಅತಿ ಸಣ್ಣ ರೈತರು ಹಾಗೂ ಜನಸಾಮಾನ್ಯರು, ಬಗರ್ ಹುಕುಮ್ ಸಾಗುವಳಿ ಸಂಬಂಧ, ಬೆಂಗಳೂರಿನಲ್ಲಿ ಸ್ಥಾಪಿತವಾದ ವಿಶೇಷ ನ್ಯಾಯಾಲಯಕ್ಕೆ ಅಲೆಯುವುದನ್ನು ತಪ್ಪಿಸಿದಂತಾಗುತ್ತದೆ ಎಂದಿದ್ದಾರೆ.
ಈ ಕುರಿತು, ಸೂಕ್ತ ನಿರ್ಧಾರಕ್ಕೆ ಬಂದು, ವಿಧೇಯಕಕ್ಕೆ ತಿದ್ದುಪಡಿ ತರಲು ನಿರ್ಧರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರನ್ನು, ಹಾರ್ಧಿಕವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ.
Also read: ವಸತಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಡಿಸಿ ಡಾ. ಸೆಲ್ವಮಣಿ ಸೂಚನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post