ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಗರ, ಭದ್ರಾವತಿ ತಾಲೂಕುಗಳು ಸೇರಿದಂತೆ ಶಿವಮೊಗ್ಗದಲ್ಲಿ ಶಾಂತಿ ಸಭೆ ನಡೆಸಲಾಗಿದ್ದು, ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತರಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮ ವಹಿಸಲಾಗಿದೆ ಎಂದು ಎಸ್ಪಿ ಲಕ್ಷ್ಮೀ ಪ್ರಸಾದ್ SP Lakshmi Prasad ಹೇಳಿದರು.
ಮೀಡಿಯಾ ಹೌಸ್ನಲ್ಲಿ ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ಫ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್ಸ್ ಹಾಕುವ ಸ್ಥಳದಲ್ಲಿ ಸ್ಪರ್ಧೆ ಏರ್ಪಡಾಗುವುದರಿಂದ ಸಮಸ್ಯೆ ಉದ್ಭವಿಸುವ ಸಂಭವವಿರುವುದರಿಂದ ಸ್ಥಳದ ಸೂಕ್ಷ್ಮತೆ ಅರಿತು ಅವಕಾಶ ನೀಡಲಾಗುವುದನ್ನು ಇದನ್ನರಿತು ಗಣಪತಿ ಸಮಿತಿಯವರು ಸಹಕರಿಸಬೇಕು ಎಂದು ಮನವಿ ಮಾಡಿದರು.
ರಾತ್ರಿಯ ವೇಳೆ ಅನಾವಶ್ಯಕ ಗಲಭೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಹಾಗೂ ಗಣಪತಿ ಮೆರವಣಿಗೆ ಸಂದರ್ಭದಲ್ಲಿ ಅನ್ಯಕೋಮಿನವರ ವಿರುದ್ಧ ಘೋಷಣೆ ಕೂಗಿದರೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ನೀಡಿದರು.
ಗುಪ್ತಚರ ಇಲಾಖೆ ವೈಫಲ್ಯವಾಗಿಲ್ಲ. ಹಾಗೂ ಅದರ ಬಗ್ಗೆ ತಾವು ಮಾತನಾಡುವುದಿಲ್ಲ. ಬದಲಿಗೆ ನಮ್ಮ ಠಾಣಾ ಮತ್ತು ಎಸ್ಪಿ ಕಚೇರಿಯ ಗುಪ್ತಚರ ಸಿಬ್ವಂದಿಗಳು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಗಳು ಎಲ್ಲೂ ಬಹಿರಂಗವಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಮಾತನಾಡಿ, ನಮ್ಮ ದೇಶದಲ್ಲಿ ಹಬ್ವವಿಲ್ಲದ ತಿಂಗಳಿಲ್ಲ. ಹಬ್ಬಗಳನ್ನು ಸಂತೋಷ, ಸಂಭ್ರಮದಿಂದ ಇನ್ನೊಬ್ಬರೊಂದಿಗೆ ಆಚರಿಸಬೇಕು. ಪಾಲಿಕೆ, ನಗರಸಭೆ, ಪುರಸಭೆಯೊಂದಿಗೆ ಚರ್ಚಿಸಿ ಗಣೇಶ ಹಬ್ವದ ತಯಾರಿಗೆ ಸೂಚನೆ ನೀಡಲಾಗಿದೆ. ಪ್ರತಿಯೊಬ್ಬರು ಮಾಲಿನ ನಿಯಂತ್ರಣ ನಿಯಮಗಳನ್ನು ಪಾಲಿಸಬೇಕು ಎಂದು ಕರೆ ನೀಡಿದರು.
Also read: ಚಾಮರಾಜಪೇಟೆ ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್: ನಿರ್ಧಾರ ಸರ್ಕಾರದ ಹೆಗಲಿಗೆ
ಈಗಾಗಲೇ ಧಾರ್ಮಿಕ ಮುಖಂಡರು ಮತ್ತು ಇತರೆ ಸಂಘಟನೆಗಳ ಜೊತೆ ಮಾತುಕತೆ ನಡೆಸಲಾಗಿದೆ. ಗಣಪತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಗರದ ಹಲವೆಡೆ ವಿಡಿಯೋ ರೆಕಾರ್ಡಿಂಗ್ ವ್ಯವಸ್ಥೆ ಮಾಡಲಾಗಿದೆ. ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗ್ರ ಕ್ರಮ ಜರುಗಿಸಲಾಗಿದೆ ಎಂದು ಹೇಳಿದರು.
ಸಂವಾದದಲ್ಲಿ ಕಾರ್ಯನಿರತ ಪತ್ರಕರ್ತ ಸಂಘದ ಶಿವಮೊಗ್ಗ ಶಾಖೆಯ ಅಧ್ಯಕ್ಷ ಶಿವಕುಮಾರ್, ಕಾರ್ಯದರ್ಶಿ ವಿ.ಟಿ. ಅರುಣ್, ಉಪಾಧ್ಯಕ್ಷ ಹಾಲಸ್ವಾಮಿ, ರಾಜ್ಯ ಸಮಿತಿ ಸದಸ್ಯ ಟೆಲೆಕ್ಸ್ ರವಿ, ಖಜಾಂಚಿ ರಂಜಿತ್ ಮೊದಲಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post