No Result
View All Result
Cervical Cancer | Early Detection and Prevention Can Save Lives
English Articles

Cervical Cancer | Early Detection and Prevention Can Save Lives

by ಕಲ್ಪ ನ್ಯೂಸ್
January 16, 2026
0

Kalpa Media House  |  Special Article  |Cervical cancer remains one of the most preventable yet life-threatening cancers affecting women worldwide....

Read moreDetails
From Global Gold to Mumbai Spirit: Andre De Grasse Brings Olympic Legacy to the Tata Mumbai Marathon

From Global Gold to Mumbai Spirit: Andre De Grasse Brings Olympic Legacy to the Tata Mumbai Marathon

January 16, 2026
ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

Haseena Themali Raises Over ₹5 Lakh for Palliative Care at the Tata Mumbai Marathon 2026 in her bid

January 15, 2026
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?

Winter Infections and Antibiotic Misuse: What Is Viral? What Is Dangerous?

January 12, 2026
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

January 1, 2026
  • Advertise With Us
  • Grievances
  • About Us
  • Contact Us
Monday, January 19, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶ್ರೀ ಗಣೇಶ ಚತುರ್ಥಿಯ ಬಗ್ಗೆ ನಿಮಗಿವು ತಿಳಿದಿವೆಯೇ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 29, 2022
in Special Articles
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  |

ಗಣೇಶ ಚತುರ್ಥಿಯನ್ನು ಕುಟುಂಬದಲ್ಲಿ ಯಾರು ಆಚರಿಸಬೇಕು, ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಯಂದು ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಂಗವಾದರೆ ಅದರ ಪರಿಹಾರಗಳೇನು ಈ ವಿಷಯಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ಇಲ್ಲಿ ನೀಡುತ್ತಿದ್ದೇವೆ.

ಕುಟುಂಬದಲ್ಲಿ ಯಾರು ಆಚರಿಸಬೇಕು?
ಗಣೇಶ ಚತುರ್ಥಿಯಂದು ಆಚರಿಸಲಾಗುವ ವ್ರತವನ್ನು ‘ಸಿದ್ಧಿವಿನಾಯಕ ವ್ರತ’ ಎನ್ನುತ್ತಾರೆ. ವಾಸ್ತವದಲ್ಲಿ ಇದನ್ನು ಎಲ್ಲ ಕುಟುಂಬಗಳೂ ಆಚರಿಸಬೇಕು. ಅಣ್ಣ ತಮ್ಮಂದಿರೆಲ್ಲರೂ ಒಟ್ಟಿಗೆ ಇದ್ದರೆ, ಅಂದರೆ ಅವರ ದ್ರವ್ಯಕೋಶ ಮತ್ತು ಪಾಕನಿಷ್ಪತ್ತಿ (ಒಲೆ) ಒಟ್ಟಿಗೆ ಇದ್ದರೆ ಎಲ್ಲರೂ ಸೇರಿ ಒಂದೇ ಮೂರ್ತಿಯ ಪೂಜೆಯನ್ನು ಮಾಡಬೇಕು; ಆದರೆ ದ್ರವ್ಯಕೋಶ ಮತ್ತು ಪಾಕನಿಷ್ಪತ್ತಿಯು ಕಾರಣಾಂತರದಿಂದ ವಿಭಕ್ತವಾಗಿದ್ದರೆ (ಬೇರೆ ಬೇರೆ) ಪ್ರತಿಯೊಬ್ಬರೂ ಅವರವರ ಮನೆಗಳಲ್ಲಿ ಸ್ವತಂತ್ರವಾಗಿ ಗಣೇಶವ್ರತವನ್ನು ಆಚರಿಸಬೇಕು.
ಗಣೇಶಚತುರ್ಥಿಯ ಮಹತ್ವವೇನು?
ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ 120 ದಿನಗಳ ಕಾಲದಲ್ಲಿ ವಿನಾಶಕಾರಿ, ತಮಪ್ರಧಾನ ಯಮಲಹರಿಗಳು ಪೃಥ್ವಿಯ ಮೇಲೆ ಹೆಚ್ಚು ಪ್ರಮಾಣದಲ್ಲಿ ಬರುತ್ತವೆ. ಈ ಸಮಯದಲ್ಲಿ ಅವುಗಳ ತೀವ್ರತೆಯೂ ಹೆಚ್ಚಿಗೆ ಇರುತ್ತದೆ. ಈ ಕಾಲಾವಧಿಯಲ್ಲಿ, ಅಂದರೆ ಭಾದ್ರಪದ ಶುಕ್ಲ ಚತುರ್ಥಿಯಿಂದ ಅನಂತ ಚತುರ್ದಶಿಯ ವರೆಗೆ ಗಣೇಶ ಲಹರಿಗಳು ಪೃಥ್ವಿಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ಯಮಲಹರಿಗಳ ತೀವ್ರತೆ ಕಡಿಮೆಯಾಗಲು ಸಹಾಯವಾಗುತ್ತದೆ.

ಗಣೇಶ ಚತುರ್ಥಿಯಂದು ನೂತನ ಶ್ರೀ ಗಣೇಶ ಮೂರ್ತಿಯನ್ನು ತರುವ ಹಿಂದಿನ ಉದ್ದೇಶವೇನು?
ಮನೆಯಲ್ಲಿ ಪೂಜೆಗಾಗಿ ಗಣಪತಿಯನ್ನು ಇಟ್ಟಿರುವಾಗಲೂ ನೂತನ ಮೂರ್ತಿಯನ್ನು ತರುವ ಉದ್ದೇಶವು ಮುಂದಿನಂತಿದೆ. ಗಣೇಶ ಚತುರ್ಥಿಯ ಸಮಯದಲ್ಲಿ ಗಣೇಶ ಲಹರಿಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರುತ್ತವೆ. ನಿತ್ಯದ ಪೂಜೆಯಲ್ಲಿರುವ ಮೂರ್ತಿಯಲ್ಲಿ ಅವುಗಳ ಆವಾಹನೆ ಮಾಡಿದರೆ ಅದರಲ್ಲಿ ಬಹಳಷ್ಟು ಶಕ್ತಿ ಬರಬಹುದು. ಇಂತಹ ಹೆಚ್ಚು ಶಕ್ತಿ ಇರುವ ಮೂರ್ತಿಯ ಎಲ್ಲ ಬಗೆಯ ಪೂಜೆ-ಅರ್ಚನೆಗಳನ್ನು ವರ್ಷಪೂರ್ತಿ ಸರಿಯಾಗಿ ಮಾಡುವುದು ಕಠಿಣವಾಗಿರುತ್ತದೆ; ಏಕೆಂದರೆ ಅದಕ್ಕೆ ಕರ್ಮಕಾಂಡದ ಬಹಳಷ್ಟು ಬಂಧನಗಳನ್ನು ಪಾಲಿಸಬೇಕಾಗುತ್ತದೆ. ಈ ಕಾರಣಕ್ಕಾಗಿಯೇ ಗಣೇಶ ಲಹರಿಗಳನ್ನು ಆವಾಹನೆ ಮಾಡಲು ನೂತನ ಮೂರ್ತಿಯನ್ನು ಉಪಯೋಗಿಸಿ ನಂತರ ಅದನ್ನು ವಿಸರ್ಜನೆ ಮಾಡುತ್ತಾರೆ. ಗಣೇಶ ಲಹರಿಗಳಲ್ಲಿನ ಸತ್ತ್ವ, ರಜ ಮತ್ತು ತಮದ ಪ್ರಮಾಣವು 5:5:5 ಹೀಗಿದ್ದರೆ ಸರ್ವಸಾಧಾರಣ ವ್ಯಕ್ತಿಯಲ್ಲಿ ಅದರ ಪ್ರಮಾಣವು 1:3:5 ಹೀಗೆ ಇರುತ್ತದೆ; ಆದ್ದರಿಂದ ಸರ್ವಸಾಧಾರಣ ವ್ಯಕ್ತಿಯು ಗಣೇಶ ಲಹರಿಗಳನ್ನು ಹೆಚ್ಚು ಸಮಯದ ವರೆಗೆ ಗ್ರಹಣ ಮಾಡಲಾರನು.
ಶಾಸ್ತ್ರೋಕ್ತ ವಿಧಿ ಮತ್ತು ರೂಢಿ ಇವುಗಳ ಅವಧಿ
‘ಭಾದ್ರಪದ ಶುಕ್ಲ ಚತುರ್ಥಿಯ ದಿನ ಮಣ್ಣಿನ ಗಣಪತಿಯನ್ನು ತಯಾರಿಸಿ, ಅದನ್ನು ಎಡಗೈ ಮೇಲಿಟ್ಟು ಅಲ್ಲಿಯೇ ಸಿದ್ಧಿವಿನಾಯಕ ಹೆಸರಿನಿಂದ ಪ್ರಾಣಪ್ರತಿಷ್ಠೆ ಮತ್ತು ಪೂಜೆಯನ್ನು ಮಾಡಿ ಕೂಡಲೇ ವಿಸರ್ಜನೆ ಮಾಡಬೇಕು ಎಂಬ ಶಾಸ್ತ್ರವಿದೆ. ಆದರೆ ಮಾನವರು ಉತ್ಸವಪ್ರಿಯರಾಗಿರುವುದರಿಂದ ಇಷ್ಟರಿಂದಲೇ ಅವರಿಗೆ ಸಮಾಧಾನವಾಗಲಿಲ್ಲ. ಆದುದರಿಂದ ಒಂದೂವರೆ, ಐದು, ಏಳು ಅಥವಾ ಹತ್ತು ದಿನ ಗಣಪತಿಯ ಮೂರ್ತಿಯನ್ನು ಇಟ್ಟು ಉತ್ಸವ ಮಾಡತೊಡಗಿದರು. ಕೆಲವರು ಗಣಪತಿಯ ವಿಸರ್ಜನೆಯನ್ನು ಗೌರಿಯ ಜೊತೆಗೆ ಮಾಡುತ್ತಾರೆ. ಯಾರಾದರೊಬ್ಬರ ಕುಲದಲ್ಲಿ ಗಣಪತಿಯನ್ನು ಐದು ದಿನ ಇಡುವ ಪದ್ಧತಿ ಇದ್ದು ಅವರು ಅದನ್ನು ಒಂದೂವರೆ ಅಥವಾ ಏಳು ದಿನ ಇಡಬೇಕಾಗಿದ್ದರೆ ಅವರು ಹಾಗೆ ಮಾಡಬಹುದು. ಇದಕ್ಕೆ ಯಾವುದೇ ಅಧಿಕಾರಯುತ ವ್ಯಕ್ತಿಯನ್ನು ಕೇಳುವ ಆವಶ್ಯಕತೆಯಿಲ್ಲ. ತಮ್ಮ ತಮ್ಮ ರೂಢಿಗನುಸಾರ ಮೊದಲನೆಯ, ಎರಡನೆಯ, ಮೂರನೆಯ, ಆರನೆಯ, ಏಳನೆಯ ಅಥವಾ ಹತ್ತನೆಯ ದಿನ ಗಣೇಶಮೂರ್ತಿಯ ವಿಸರ್ಜನೆಯನ್ನು ಮಾಡಬೇಕು.
ಮೂರ್ತಿಯು ಭಗ್ನವಾದರೆ ಏನು ಮಾಡಬೇಕು?
ಮೂರ್ತಿಯ ಪ್ರಾಣಪ್ರತಿಷ್ಠೆಯನ್ನು ಮಾಡುವುದಕ್ಕಿಂತ ಮೊದಲು ಯಾವುದಾದರೊಂದು ಅವಯವಕ್ಕೆ ಏಟಾದರೆ ಅಥವಾ ಭಿನ್ನವಾದರೆ ಚಿಂತಿಸುವ ಕಾರಣವಿಲ್ಲ, ಅದರ ಬದಲು ಬೇರೆ ಮೂರ್ತಿಯನ್ನು ತಂದು ಪೂಜಿಸಬೇಕು. ವಿಸರ್ಜನೆಗಾಗಿ ಅಕ್ಷತೆ ಹಾಕಿದ ನಂತರ (ದೈವತ್ತ್ವವು ಹೋದ ನಂತರ) ಅವಯವಗಳಿಗೆ ಏಟಾದರೆ ಅಥವಾ ಭಿನ್ನವಾದರೆ ಆ ಮೂರ್ತಿಯನ್ನು ನಿತ್ಯದಂತೆ ವಿಸರ್ಜನೆ ಮಾಡಬೇಕು. ಪ್ರಾಣ ಪ್ರತಿಷ್ಠೆಯಾದ ನಂತರ ಅವಯವಕ್ಕೆ ಏಟಾದರೆ ಅಥವಾ ಮುರಿದರೆ ಆ ಮೂರ್ತಿಗೆ ಅಕ್ಷತೆಯನ್ನು ಅರ್ಪಿಸಿ ವಿಸರ್ಜಿಸಬೇಕು. ಈ ಘಟನೆಯು ಗಣೇಶ ಚತುರ್ಥಿಯ ದಿನವೇ ನಡೆದರೆ ಬೇರೆ ಮೂರ್ತಿಯನ್ನು ತಂದು ಪೂಜಿಸಬೇಕು. ಎರಡನೆಯ ಅಥವಾ ಮೂರನೆಯ ದಿನ ನಡೆದರೆ ಹೊಸ ಮೂರ್ತಿಯನ್ನು ತಂದು ಪೂಜಿಸಬೇಕಾಗಿಲ್ಲ. ಮೂರ್ತಿಯು ಸಂಪೂರ್ಣ ಭಗ್ನವಾದರೆ ಕುಲಪುರೋಹಿತರ ಸಲಹೆಯಂತೆ ಯಥಾವಕಾಶ ‘ಅದ್ಭುತ ದರ್ಶನ ಶಾಂತಿ’ಯನ್ನು ಮಾಡಿಸಬೇಕು. ಗಣೇಶ ಚತುರ್ಥಿಯಂದು ದೀಪಪತನ (ದೀಪ ಆರಿ ಹೋಗುವುದು), ಅರೆಯುವ ಕಲ್ಲು, ಬೀಸುವ ಕಲ್ಲು ಅಥವಾ ಸಾಣೆಕಲ್ಲು ಒಡೆದು ಹೋಗುವುದು, ಕೆಸುವಿನ ಎಲೆಗೆ ಹೂವು ಬರುವುದು, ಮೂರ್ತಿಭಗ್ನ ಇತ್ಯಾದಿ ಘಟನೆಗಳಾದರೆ ಆ ಕುಟುಂಬದಲ್ಲಿ ದ್ರವ್ಯ ಹಾನಿ, ಗಂಭೀರ ರೋಗ ಅಥವಾ ಅಪಮೃತ್ಯು ಆಗುವ ಸಾಧ್ಯತೆಯಿರುತ್ತದೆ; ಅದಕ್ಕಾಗಿ ಮೇಲೆ ಕೊಟ್ಟಿರುವ ಪರಿಹಾರಗಳನ್ನು ಶ್ರದ್ಧೆಯಿಂದ ಮಾಡಬೇಕು.
ಚಂದ್ರ, ಮನಸ್ಸು ಮತ್ತು ಗಣೇಶ ಚತುರ್ಥಿ ಇವುಗಳ ಸಂಬಂಧ

  • ಸೌರಮಂಡಲದಲ್ಲಿನ ಎಲ್ಲ ಗ್ರಹಗಳಲ್ಲಿ ಚಂದ್ರಗ್ರಹವು ಅತ್ಯಂತ ಚಂಚಲವಾಗಿದೆ. ಆದುದರಿಂದ ಚಂಚಲ ಸ್ವಭಾವವಿರುವವರ ಮನಸ್ಸಿನ ಮೇಲೆ ಚಂದ್ರನ ಸ್ಪಂದನಗಳು ಹೆಚ್ಚು ಕಾರ್ಯ ಮಾಡುತ್ತವೆ.
  • ಪೃಥ್ವಿಯಿಂದ ಚಂದ್ರಗ್ರಹದ ದರ್ಶನವನ್ನು ನಾವು ಸಹಜವಾಗಿ ಪಡೆದುಕೊಳ್ಳಬಹುದು ಮತ್ತು ಅದನ್ನು ನಾವು ಮನಸ್ಸಿನಲ್ಲಿ ಅತ್ಯಂತ ಸಹಜವಾಗಿ ಯಾವಾಗ ಬೇಕಾದರೂ ನೋಡಬಹುದು.
  • ಪರಿಣಾಮ: ಗಣೇಶ ಚತುರ್ಥಿಯ ದಿನ ಬ್ರಹ್ಮಾಂಡದಲ್ಲಿ ನಿರ್ಮಾಣವಾಗುವ ರಜೋಗುಣದ ಸ್ಪಂದನಗಳು ಚಂದ್ರನ ಕಡೆಗೆ ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿತವಾಗಿ ಚಂಚಲ ಮನಸ್ಸಿರುವ ಮನುಷ್ಯರ ಕಡೆಗೆ ಆಕರ್ಷಿಸಲ್ಪಡುತ್ತವೆ.

ಗಣೇಶ ಚತುರ್ಥಿಯ ವೈಶಿಷ್ಟ್ಯಗಳು:
ಈ ದಿನ ರಜೋಗುಣದಿಂದಾಗಿ ಚಂದ್ರನ ಸುತ್ತಲಿರುವ ಪ್ರಭಾವಲಯವು ಬಹಳ ತೇಜಸ್ವಿಯಾಗಿ ಕಾಣಿಸುತ್ತದೆ ಮತ್ತು ಅದು ಚಂಚಲ ಮನಸ್ಸನ್ನು ಸಹಜವಾಗಿ ಆಕರ್ಷಿಸಿಕೊಳ್ಳುತ್ತದೆ. ಈ ದಿನ ಚಂದ್ರದರ್ಶನವನ್ನು ಪಡೆದುಕೊಂಡರೆ, ಚಂದ್ರನು ತನ್ನ ಪ್ರಚಂಡ ರಜೋಗುಣದೊಂದಿಗೆ ಮನಸ್ಸಿನಲ್ಲಿ ಬೇರೂರುತ್ತಾನೆ. ಮನಸ್ಸಿನ ಮೇಲೆ ಮೂಡುವ ಅವನ ಚಿತ್ರವೂ ಅಷ್ಟೇ ಚಂಚಲವಾಗಿರುತ್ತದೆ. ಆದುದರಿಂದ ಅದು ಯಾವ ಕಾರಣಗಳು ಇಲ್ಲದಿರುವಾಗಲೂ ಮತ್ತು ಯಾವುದೇ ಸಮಯದಲ್ಲಿ ಮನಸ್ಸಿನ ಮೇಲೆ ಮೂಡುತ್ತದೆ. ಚಂದ್ರನನ್ನು ನೋಡಿದ ಸಮಯದಲ್ಲಿನ ದೃಶ್ಯವನ್ನು ನೆನಪಿಸಿಕೊಂಡರೂ ಮನಸ್ಸು ಚಂಚಲವಾಗುತ್ತದೆ.
ಗಣೇಶ ಚತುರ್ಥಿಯ ದಿನ ಚಂದ್ರನ ದರ್ಶನವನ್ನು ಪಡೆದುಕೊಳ್ಳದಿರುವುದು
ಮನಸ್ಸಿನ ಚಂಚಲತೆಯು ಸುಮಾರು ಒಂದು ವರ್ಷದವರೆಗೆ ಉಳಿಯುತ್ತದೆ. ಮನಸ್ಸಿನ ಚಂಚಲತೆಯ ಪ್ರಚಂಡ ಪ್ರಭಾವದಿಂದಾಗಿ ಯಾವುದಾದರೊಂದು ಘಟನೆಯು ಘಟಿಸುವ ಮೊದಲೇ ಅದು ಘಟಿಸಿ ಹೋಗಿದೆ ಎಂಬ ತಪ್ಪುತಿಳುವಳಿಕೆ ಅಥವಾ ಗಾಳಿ ಸುದ್ದಿ ಹರಡುವ ಸಾಧ್ಯತೆ ಇರುತ್ತದೆ. ಇದನ್ನೇ ಯಾವುದಾದರೊಂದು ಅಡಚಣೆಯನ್ನು ಮೈಮೇಲೆ ಎಳೆದುಕೊಳ್ಳುವುದು ಎಂದು ಹೇಳುತ್ತಾರೆ. ಈ ಕಾರಣಕ್ಕಾಗಿ ಗಣೇಶ ಚತುರ್ಥಿಯ ದಿನ ಚಂದ್ರನನ್ನು ನೋಡುವುದು ಅಶುಭವೆಂದು ತಿಳಿದುಕೊಳ್ಳುತ್ತಾರೆ.

ಜ್ಯೋತಿಷ್ಯ ಮತ್ತು ಚಂದ್ರದರ್ಶನ
ಗಣೇಶ ಚತುರ್ಥಿಯ ದಿನದಂದು ಯಾವ ವ್ಯಕ್ತಿಯ ರಾಶಿಯಲ್ಲಿ ಯಾವುದೇ ಸ್ಥಾನದಲ್ಲಿ ಚಂದ್ರನಿದ್ದರೆ ಅವನು ಚಂದ್ರದರ್ಶನವನ್ನು ಮಾಡಲೇಬಾರದು. ಇಂತಹ ವ್ಯಕ್ತಿಯು ನೀರಿನಲ್ಲಿ ಕಾಣಿಸುವ ಚಂದ್ರನ ಪ್ರತಿಬಿಂಬವನ್ನು ಸಹ ನೋಡಬಾರದು. ಏಕೆಂದರೆ ನೀರಿನಿಂದ ನೆನೆದಿರುವ ಮಣ್ಣಿನಲ್ಲಿಯೂ ಪ್ರಜನನ ಶಕ್ತಿಯು ಹೆಚ್ಚಾಗಿರುವುದರಿಂದ ಅಲ್ಲಿಯೂ ಪ್ರಚಂಡ ಪ್ರಮಾಣದಲ್ಲಿ ರಜೋಗುಣವು ನಿರ್ಮಾಣವಾಗಿರುತ್ತದೆ.
ಗಣೇಶೋತ್ಸವದ ಸಮಯದಲ್ಲಿ ಮಾಡಬೇಕಾದ ಪ್ರಾರ್ಥನೆ
ಹೇ ಶ್ರೀ ಗಣೇಶಾ, ಗಣೇಶೋತ್ಸವದ ಸಮಯದಲ್ಲಿ ಎಂದಿಗಿಂತ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುವ ನಿನ್ನ ತತ್ತ್ವದ ಲಾಭವು ನನಗೆ ಹೆಚ್ಚಿನ ಪ್ರಮಾಣದಲ್ಲಿ ಗ್ರಹಿಸುವಂತಾಗಲಿ. (ಪ್ರಾರ್ಥನೆಯ ಬಗ್ಗೆ ಸವಿಸ್ತಾರವಾದ ವಿವೇಚನೆ ಮತ್ತು ಜೀವನದಲ್ಲಿನ ವಿವಿಧ ಪ್ರಸಂಗಗಳಲ್ಲಿ ಮಾಡಬೇಕಾದ ಪ್ರಾರ್ಥನೆಗಳನ್ನು ಸನಾತನ ನಿರ್ಮಿಸಿದ ‘ಪ್ರಾರ್ಥನೆ (ಮಹತ್ವ ಮತ್ತು ಉದಾಹರಣೆಗಳು)’ ಈ ಕಿರುಗ್ರಂಥದಲ್ಲಿ ನೀಡಲಾಗಿದೆ.)
(ಹೆಚ್ಚಿನ ಮಾಹಿತಿಗಾಗಿ ಸನಾತನ ಸಂಸ್ಥೆ ನಿರ್ಮಿಸಿದ ‘ಗಣಪತಿ’ ಎಂಬ ಗ್ರಂಥವನ್ನು ಓದಿರಿ.)          

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ganesha FestivalKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaವಿಶೇಷ ಲೇಖನ
Share197Tweet123Send
Previous Post

ಸಾಲ ವಾಪಸ್ ಕೇಳಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ | ವಿದ್ಯುತ್ ಶಾಕ್ ನಿಂದ ರೈತ ಸಾವು

Next Post

ಸೋಮಿನಕೊಪ್ಪದಲ್ಲಿ ಸೆರೆಸಿಕ್ಕ ಚಿರತೆ: ನಿಟ್ಟುಸಿರು ಬಿಟ್ಟ ಜನತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೋಮಿನಕೊಪ್ಪದಲ್ಲಿ ಸೆರೆಸಿಕ್ಕ ಚಿರತೆ: ನಿಟ್ಟುಸಿರು ಬಿಟ್ಟ ಜನತೆ

ಸೋಮಿನಕೊಪ್ಪದಲ್ಲಿ ಸೆರೆಸಿಕ್ಕ ಚಿರತೆ: ನಿಟ್ಟುಸಿರು ಬಿಟ್ಟ ಜನತೆ

Leave a Reply Cancel reply

Your email address will not be published. Required fields are marked *

  • Trending
  • Latest
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

January 14, 2026
ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

January 9, 2026
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

January 12, 2026
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 18, ಭಾನುವಾರ

January 17, 2026
ದೆಹಲಿ ಬ್ಲಾಸ್ಟ್ | ಯಾರೊಬ್ಬರನ್ನೂ ಬಿಡಲ್ಲ | ಮೋದಿ ಶಪಥ | ಸದ್ಯದಲ್ಲಿ ಕಾದಿದೆ ಮಾರಿಹಬ್ಬ?

ಕ್ರೂರ ತೃಣಮೂಲ ಸರ್ಕಾರವನ್ನು ಕಿತ್ತೊಗೆಯಿರಿ | ಪ.ಬಂಗಾಳದ ಜನರಿಗೆ ಪ್ರಧಾನಿ ಮೋದಿ ಮನವಿ

January 17, 2026
ಆರ್’ಸಿಬಿಗೆ ಭರವಸೆ | ಸ್ಪೋಟಕ ಬ್ಯಾಟಿಂಗ್’ಗೆ ಬೆಚ್ಚಿ ಬಿದ್ದ ಬೌಲರ‍್ಸ್

ಆರ್’ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ | ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಕ್ಕೆ ಗ್ರೀನ್ ಸಿಗ್ನಲ್

January 17, 2026
ಉದ್ಯೋಗ ಮೇಳದ ಪೂರ್ವಭಾವಿ ತರಬೇತಿಯಿಂದ ಸಂದರ್ಶನ ಕೌಶಲ್ಯ ವೃದ್ಧಿ | ಗುರುಮೂರ್ತಿ ಅಭಿಮತ

ಉದ್ಯೋಗ ಮೇಳದ ಪೂರ್ವಭಾವಿ ತರಬೇತಿಯಿಂದ ಸಂದರ್ಶನ ಕೌಶಲ್ಯ ವೃದ್ಧಿ | ಗುರುಮೂರ್ತಿ ಅಭಿಮತ

January 17, 2026
ಮೈಸೂರು ವಿವಿ ಕುಲಪತಿ ಹೇಳಿಕೆಗೆ ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿ ಖಂಡನೆ | ಏನಿದು ವಿಚಾರ?

ಮೈಸೂರು ವಿವಿ ಕುಲಪತಿ ಹೇಳಿಕೆಗೆ ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿ ಖಂಡನೆ | ಏನಿದು ವಿಚಾರ?

January 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL