ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
12 ನೆಯ ಶತಮಾನದಲ್ಲಿ ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದ ಸಮಾಜ ಮಡಿವಾಳ ಸಮಾಜ, ಭಕ್ತಿಯ ಮೂಲಕ ಮಹಾದೇವನನ್ನು ಒಲಿಸಿಕೊಂಡು ಸರ್ವರಿಗೂ ಸಮಪಾಲು ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡು, ಶರಣರ ಅಗ್ರ ಗಣ್ಯ ಬಳಗದಲ್ಲಿ ‘ಮಡಿವಾಳ ಮಾಚಿದೇವ’ ಅತ್ಯಂತ ಪ್ರಕಾಶಮಾನವಾಗಿ ಕಂಡುಬರುವರು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಶಿವಮೊಗ್ಗ ಜಿಲ್ಲಾ ಮಡಿವಾಳ ಸಮಾಜ ವೃತ್ತಿ ನಿರತ ಸಂಘ, ಮಡಿವಾಳ ಸಮಾಜ ಬಾಂಧವರ ಜನ ಜಾಗೃತಿ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಮಡಿವಾಳ ಶ್ರೀ ಮಾಚಿದೇವ ಸಮುದಾಯಕ್ಕೆ ಶಕ್ತಿ ತುಂಬಲು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ನವರು ಸಮುದಾಯ ಭವನ ನಿರ್ಮಾಣಕ್ಕೆ ಸುಮಾರು 4 ಕೋಟಿ ಅನುದಾನವನ್ನು ನೀಡಿದ್ದಾರೆ, ಮುಂದಿನ ದಿನದಲ್ಲಿ ಸಮಾಜಕ್ಕೆ ಆಗಬೇಕಿರುವ ಕೆಲಸವನ್ನು ನಾವು ಹಾಗೂ ನಮ್ಮ ಸಂಘಟನೆ ಮಾಡುತ್ತೇವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಸವ ಮಾಚಿದೇವ ಶ್ರೀಗಳು, ಎಂಎಲ್’ಸಿ ಆಯನೂರು ಮಂಜುನಾಥ್, ಸಮಾಜದ ಅಧ್ಯಕ್ಷರಾದ ಎಂಜಿರಪ್ಪ, ಸಂಘದ ಅಧ್ಯಕ್ಷರಾದ ಚೌಡಪ್ಪ, ಜಿಲ್ಲಾಧ್ಯಕ್ಷರಾದ ಸುರೇಶ್, ರಾಜು ತಲ್ಲೂರ್, ಹಿರಣ್ಣಯ್ಯ ಮತ್ತಿತರ ಮುಖಂಡರು ಸಮಾಜ ಭಾಂದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post