ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಶ್ವ ಕಂಡ ಅತ್ಯುತ್ತಮ ಶ್ರೇಷ್ಠ ಇಂಜಿನೀಯರ್ ಸರ್.ಎಂ. ವಿಶ್ವೇಶ್ವರಯ್ಯನವರ ಜೀವನವೇ ನಮ್ಮೆಲ್ಲರಿಗೂ ಒಂದು ಆದರ್ಶವಾಗಿದೆ ಎಂದು ವಿಐಎಸ್’ಎಲ್ ಕಾರ್ಯಪಾಲಕ ಇಂಜಿನೀಯರ್ ಬಿ.ಎಲ್. ಚಂದ್ವಾನಿ ಅಭಿಪ್ರಾಯಪಟ್ಟರು.
ಇಂಜಿನೀರ್ಸ್ ದಿನಾಚರಣೆ ಹಿನ್ನೆಲೆಯಲ್ಲಿ ಅತ್ಯುತ್ತಮ ಇಂಜಿನೀಯರ್, ರಾಜನೀತಿಜ್ಞ, ದಾರ್ಶನಿಕ, ಸರ್.ಎಂ. ವಿಶ್ವೇಶ್ವರಯ್ಯನವರಿಗೆ ವಿಐಎಸ್’ಪಿ ಸಮುದಾಯದ ವತಿಯಿಂದ ಗೌರವ ವಂದನೆ ಸಲ್ಲಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಮುಖ್ಯ ಮಹಾಪ್ರಬಂಧಕರು(ಸ್ಥಾವರ) ಟಿ. ರವಿಚಂದ್ರನ್, ಮಹಾಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ವಿಐಎಸ್ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ವಿಐಎಸ್ಎಲ್ ಅಧಿಕಾರಿಗಳ ಸಂಘದ ಅಧ್ಯಕ್ಷ ಸುಗಾಲಿ ಲೋಕನಾಥ್ ಅವರುಗಳು ವಿಐಎಸ್ಪಿ ಆವರಣದೊಳಗಿರುವ ಸರ್.ಎಂ. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಹಾನ್ ವ್ಯಕ್ತಿತ್ವಕ್ಕೆ ತಮ್ಮ ನಮ್ರತೆಯ ಗೌರವ ವಂದನೆ.
Also read: ಯುವತಿಯೊಡನೆ ಅಸಭ್ಯ ವರ್ತನೆ: ಆರೋಪಿ ಬಂಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post