Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕೊಡಗು

ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಬವ: ಎಷ್ಟು ಗಂಟೆಗೆ ನಡೆಯಲಿದೆ?

September 17, 2022
in ಕೊಡಗು
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್   | ಮಡಿಕೇರಿ |

ನಾಡಿನ ಜೀವನದಿ, ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಇದೇ ಅಕ್ಟೋಬರ್ 17 ರಂದು ರಾತ್ರಿ 7.21 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ಶ್ರೀ ಕಾವೇರಿ Cauveri ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ ಸಂಭವಿಸಲಿದೆ.

ಸೆಪ್ಟೆಂಬರ್ 27 ರಂದು ಬೆಳಗ್ಗೆ 11.05 ನಿಮಿಷಕ್ಕೆ ಸಲ್ಲುವ ವೃಚ್ಛಿಕ ಲಗ್ನದಲ್ಲಿ “ಪತ್ತಾಯಕ್ಕೆ ಅಕ್ಕಿ ಹಾಕುವುದು”, ಅಕ್ಟೋಬರ್ 05 ರಂದು ಬೆಳಗ್ಗೆ 09.35 ನಿಮಿಷಕ್ಕೆ ಸಲ್ಲುವ ವೃಚ್ಛಿಕ ಲಗ್ನದಲ್ಲಿ “ಆಜ್ಞಾ ಮುಹೂರ್ತ”. ಅಕ್ಟೋಬರ್ 15 ರಂದು ಬೆಳಿಗ್ಗೆ 11.45 ನಿಮಿಷಕ್ಕೆ ಸಲ್ಲುವ ಧನುರ್ ಲಗ್ನದಲ್ಲಿ “ಅಕ್ಷಯ ಪಾತ್ರೆ ಇರಿಸುವುದು” ಮತ್ತು 04.15 ನಿಮಿಷಕ್ಕೆ ಸಲ್ಲುವ ಕುಂಭ ಲಗ್ನದಲ್ಲಿ “ಕಾಣಿಕೆ ಡಬ್ಬಿಗಳನ್ನು ಇಡುವುದು”. ಅಕ್ಟೋಬರ್ 17 ರ ಸೋಮವಾರ ರಾತ್ರಿ 07.21 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜರುಗಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳ ಆಡಳಿತಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ.
ನಗರದ ಜಿ.ಪಂ.ಭವನದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಜೀವ ವೈವಿದ್ಯ ಮಂಡಳಿ ರಾಜ್ಯ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ ಅವರ ಉಪಸ್ಥಿತಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾಹಿತಿ ನೀಡಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವಕ್ಕೆ ಎಲ್ಲಾ ಭಕ್ತಾಧಿಗಳಿಗೂ ಅವಕಾಶ ಮಾಡಬೇಕು. ಯಾವುದೇ ನಿರ್ಬಂಧ ಇರಬಾರದು ಎಂದರು.

ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್ ಅವರು ವಾಹನ ನಿಲುಗಡೆಗೆ ಇರುವ ಸ್ಥಳಾವಕಾಶ ನೋಡಿಕೊಂಡು ಅವಕಾಶ ಮಾಡಲಾಗುವುದು, ಉಳಿದಂತೆ ಬಸ್ ಮೂಲಕ ಸಂಚಾರ ಮಾಡಬಹುದಾಗಿದೆ ಎಂದರು.
ಭಾಗಮಂಡಲ ತಲಕಾವೇರಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಮನುಮುತ್ತಪ್ಪ ಅವರು ಮಾತನಾಡಿ ತಲಕಾವೇರಿಯಲ್ಲಿ ವಾಹನ ನಿಲುಗಡೆ ಸಂಬಂಧಿಸಿದಂತೆ ಹಿಂದೆ ನೀಲನಕಾಶೆ ತಯಾರಿಸಲಾಗಿದ್ದು, ಅದನ್ನು ಬಳಸಿಕೊಳ್ಳಬೇಕು ಎಂದು ಅವರು ಸಲಹೆ ಮಾಡಿದರು.

ಭಾಗಮಂಡಲ ಗ್ರಾ.ಪಂ.ಉಪಾಧ್ಯಕ್ಷರಾದ ಹೊಸೂರು ಸತೀಶ್ ಕುಮಾರ್ ಅವರು ಮಾತನಾಡಿ ಗ್ರಾ.ಪಂ.ವತಿಯಿಂದ ಸ್ವಚ್ಚತೆ ಹಾಗೂ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದರು. ಪರವಾನಗಿ ಇರುವ ಖಾಸಗಿ ಬಸ್‍ಗಳ ಸಂಚಾರಕ್ಕೆ ಅವಕಾಶ ಮಾಡಬೇಕು ಎಂದು ಮನವಿ ಮಾಡಿದರು.

ಭಾಗಮಂಡಲ-ತಲಕಾವೇರಿ, ಮಡಿಕೇರಿ-ಭಾಗಮಂಡಲ, ಕಡಂಗ-ಭಾಗಮಂಡಲ ಮತ್ತು ಭಾಗಮಂಡಲ-ಕರಿಕೆ ರಸ್ತೆಯಲ್ಲಿ ಗಿಡಗಳನ್ನು ಕಡಿಯುವಂತಾಗಬೇಕು ಎಂದು ಅವರು ಮನವಿ ಮಾಡಿದರು.
ಈ ಬಗ್ಗೆ ಮಾತನಾಡಿದ ಶಾಸಕರಾದ ಕೆ.ಜಿ. ಬೋಪಯ್ಯ ಅವರು ಅರಣ್ಯ ಇಲಾಖೆಯವರು ಭಾಗಮಂಡಲ ಕರಿಕೆ ರಸ್ತೆ ಬದಿಯ ಮರಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದರು.

ಉಳಿದಂತೆ ಗಿಡಗಳನ್ನು ಕಡಿಯುವಂತೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‍ಗೆ ಕೆ.ಜಿ.ಬೋಪಯ್ಯ ಅವರು ನಿರ್ದೇಶನ ನೀಡಿದರು.

ತಲಕಾವೇರಿ ವನ್ಯಜೀವಿ ವಿಭಾಗದ ವ್ಯಾಪ್ತಿಗೆ ಬರುವುದರಿಂದ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕಷ್ಟವಾಗುತ್ತದೆ ಎಂದು ವಾಹನ ನಿಲುಗಡೆ ಬಗ್ಗೆ ಮಾಹಿತಿ ನೀಡಿದರು.
ಭಕ್ತಾಧಿಯೊಬ್ಬರು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ ಭಕ್ತಾಧಿಗಳು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ದೀಪದೊಂದಿಗೆ ತೆರಳುತ್ತಾರೆ. ಇಂತಹ ಭಕ್ತಾಧಿಗಳಿಗೆ ಕಿರಿಕಿರಿ ಉಂಟುಮಾಡಬಾರದು ಎಂದರು.

ಎಂ.ಬಿ.ದೇವಯ್ಯ ಅವರು ಮಾತನಾಡಿ ಭಕ್ತಾಧಿಗಳಿಗೆ ತೊಂದರೆ ನೀಡಬಾರದು. ವಾಹನ ಪಾಸನ್ನು ನೀಡಬೇಕು ಎಂದು ಅವರು ಕೋರಿದರು.

ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ತಲಕಾವೇರಿಯ ಕೊಳದ ಬಳಿಗೆ ಭಕ್ತಾಧಿಗಳನ್ನು ಸಾಲಾಗಿ ಕಳುಹಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ಭಾಗಮಂಡಲ ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯಗಳ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಕಾರ್ಯ ನಿರ್ವಹಣಾಧಿಕಾರಿ ಕೃಷ್ಣಪ್ಪ, ರಮೇಶ್ ಹೊಳ್ಳ, ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು, ಸೆಸ್ಕ್ ಇಇ ಅನಿತಾ ಬಾಯಿ ಅವರು ಹಲವು ಮಾಹಿತಿ ನೀಡಿದರು.
ಜೀವ ವೈವಿದ್ಯ ಮಂಡಳಿ ರಾಜ್ಯ ಅಧ್ಯಕ್ಷರಾದ ನಾಪಂಡ ರವಿ ಕಾಳಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಇದ್ದರು.

ಮತ್ತಷ್ಟು ಮಾಹಿತಿ: ಭಾಗಮಂಡಲ ಶ್ರೀ ಭಗಂಡೇಶ್ವರ ತಲಕಾವೇರಿ ದೇವಾಲಯಗಳಲ್ಲಿ ಅಕ್ಟೋಬರ್ 17 ರಂದು ಜರುಗಲಿರುವ ಕಾವೇರಿ ತುಲಾ ಸಂಕ್ರಮಣ ತೀರ್ಥೋದವದ ಪ್ರಯುಕ್ತ ಪೊಲೀಸ್ ಇಲಾಖೆ ಬಂದೋಬಸ್ತ್ ವ್ಯವಸ್ಥೆ ಮಾಡುವುದು, ವಾಹನಗಳ ಸುಗಮ ಸಂಚಾರಕ್ಕಾಗಿ ಅಗತ್ಯ ಕ್ರಮ, ತುರ್ತು ಸಂದರ್ಭಗಳನ್ನು ನಿರ್ವಹಿಸಲು ಅಗ್ನಿಶಾಮಕ ದಳ ನಿಯೋಜನೆ, ಗೃಹರಕ್ಷಕ ದಳ ಸಿಬ್ಬಂದಿಯ ನಿಯೋಜನೆ ಮಾಡುವುದು.

ಸ್ಥಳೀಯ ಸಂಸ್ಥೆಗಳು ಭಾಗಮಂಡಲ-ತಲಕಾವೇರಿಗಳಲ್ಲಿ ಭಕ್ತಾದಿಗಳಿಗೆ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ ಸೌಲಭ್ಯ ಒದಗಿಸುವುದು, ಪಂಚಾಯಿತಿ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡುವುದು, ಬೀದಿ ದೀಪಗಳ ವ್ಯವಸ್ಥೆ, ಭಾಗಮಂಡಲ ತಲಕಾವೇರಿ ಕಾಲುದಾರಿ ದುರಸ್ತಿ ಹಾಗೂ ಇತರೇ ಕಾರ್ಯಗಳು, ಭಗಂಡೇಶ್ವರ-ತಲಕಾವೇರಿ ಕ್ಷೇತ್ರಗಳಲ್ಲಿ ನೈರ್ಮಲ್ಯ ಕಾಪಾಡಲು ನಗರ ಸಭೆಯ ವತಿಯಿಂದ ಪೌರಕಾರ್ಮಿಕರನ್ನು ನಿಯೋಜಿಸುವುದು.
ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ಭಾಗಮಂಡಲಕ್ಕೆ ಸೇರುವ ಎಲ್ಲಾ ರಸ್ತೆಗಳ ದುರಸ್ತಿ ಕಾರ್ಯ, ಅಗತ್ಯ ಸ್ಥಳಗಳಲ್ಲಿ ಮಾರ್ಗಸೂಚಿ ಅಳವಡಿಸುವುದು, ಸೇತುವೆಗಳಿಗೆ ಸುಣ್ಣ ಬಣ್ಣ ಬಳಿಯುವುದು, ಅಗತ್ಯ ಸ್ಥಳಗಳಲ್ಲಿ ಬ್ಯಾರಿಕೇಡ್‍ಗಳ ರಚನೆ, ರಸ್ತೆಯ ಎರಡೂ ಬದಿಗಳಲ್ಲಿ ಕಾಡು ಕಡಿಯುವುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಭಾಗಮಂಡಲ ತಲಕಾವೇರಿ ಕ್ಷೇತ್ರಗಳಲ್ಲಿ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯುವುದು. ಅಂಬ್ಯುಲೆನ್ಸ್, ನುರಿತ ವೈದ್ಯರು, ಸಿಬ್ಬಂದಿಯವರೊಂದಿಗೆ ಉತ್ತಮ ಔಷಧಿಗಳನ್ನು ಒದಗಿಸುವುದು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವತಿಯಿಂದ ಜಾತ್ರಾ ದಿನಗಳಂದು ಸಮರ್ಪಕವಾಗಿ ನಿರಂತರ ವಿದ್ಯುತ್ ಪೂರೈಕೆ ಅಗತ್ಯ ಸಿಬ್ಬಂದಿಗಳ ನಿಯೋಜನೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಜಿಲ್ಲೆಯ ವಿವಿಧ ಭಾಗಗಳಿಂದ ಬಸ್ ವ್ಯವಸ್ಥೆ. ತುಲಾ ಮಾಸದ ಒಂದು ತಿಂಗಳು ಭಾಗಮಂಡಲ-ತಲಕಾವೇರಿಗೆ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವುದು. ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಖಾಸಗಿ ಬಸ್‍ಗಳ ಓಡಾಟಕ್ಕೆ ಪರವಾನಗಿ ನೀಡುವುದು.

ಅರಣ್ಯ ಇಲಾಖೆ ವತಿಯಿಂದ ಭಾಗಮಂಡಲಕ್ಕೆ ಸೇರುವ ರಸ್ತೆಗಳ ಎರಡೂ ಬದಿಗಳಲ್ಲಿ ಇರಬಹುದಾದ ಅಪಾಯದ ಸ್ಥಿತಿಯಲ್ಲಿರುವ ಮರಗಳ ಕೊಂಬೆಗಳನ್ನು ತೆರವುಗೊಳಿಸುವುದು. ತಲಕಾವೇರಿಯಲ್ಲಿ ವನ್ಯ ಪ್ರಾಣಿಗಳಿಂದ ಭಕ್ತಾದಿಗಳು/ ಯಾತ್ರಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮ ವಹಿಸುವುದು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು. ಕೃಷಿ ಇಲಾಖೆ/ ತೋಟಗಾರಿಕೆ ಇಲಾಖೆಗಳ ವತಿಯಿಂದ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಅನುಕೂಲಕ್ಕಾಗಿ ವಸ್ತು ಪ್ರದರ್ಶನ ಏರ್ಪಡಿಸುವುದು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪೆÇಲೀಸ್ ಬಂದೋಬಸ್ತ್‍ಗೆ ಆಗಮಿಸುವ ಪೆÇೀಲೀಸ್ ಸಿಬ್ಬಂದಿಗಳಿಗೆ ಭಾಗಮಂಡಲ ಸರ್ಕಾರಿ ಶಾಲೆಗಳಲ್ಲಿ ವಸತಿ ಸೌಕರ್ಯ, ವಿದ್ಯುತ್ ಬೆಳಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CauveriKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMadikeriNewsinKannadaNewsKannadaಕಾವೇರಿಮಡಿಕೇರಿ
Previous Post

ಏಳು ದಶಕದ ನಂತರ ಭಾರತದಲ್ಲಿ ‘ಚೀತಾ’ ಯುಗಾರಂಭ: ಬಿಡುಗಡೆ ಮಾಡಿದ ಪ್ರಧಾನಿ ಮೋದಿ

Next Post

ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಡಿಸಿ ಡಾ. ಸೆಲ್ವಮಣಿ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಡಿಸಿ ಡಾ. ಸೆಲ್ವಮಣಿ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

June 23, 2025

ಶಾಸಕ ಸುನೀಲ್ ಕುಮಾರ್ ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025

ಯಶಸ್ಸಿನ ಬೆನ್ನು ಹತ್ತಲು ಆತ್ಮವಿಶ್ವಾಸ ಬಹಳ ಮುಖ್ಯ: ಚಂದನ್ ರಾವ್

June 23, 2025

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!