ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಐಸಿಸಿ, ಅಲ್ ಖೈದಾದಂತಹ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಉಗ್ರರು ಶಿವಮೊಗ್ಗದಲ್ಲಿ ಪತ್ತೆಯಾಗಿರುವುದು ದಿಗ್ಬö್ರಮೆ ಉಂಟಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಆತಂಕ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಹಾಗೂ ತೀರ್ಥಹಳ್ಳಿ ಮೂಲದ ಇಬ್ಬರು ಶಂಕಿತ ಉಗ್ರರನ್ನು ನಿನ್ನೆ ಪೊಲೀಸರು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಶಾಂತಿಗೆ ಹೆಸರಾದ ಮಲೆನಾಡಿನಲ್ಲಿ ಇಂತಹ ಘಟನೆ ನಡೆದಿರುವುದು, ನಮ್ಮ ಜಿಲ್ಲೆಯಲ್ಲಿ ಶಂಕಿತ ಉಗ್ರರು ಪತ್ತೆಯಾಗಿರುವುದು ಆತಂಕಕಾರಿ ವಿಚಾರವಾಗಿದೆ ಎಂದಿದ್ದಾರೆ.
ಯಾವುದೇ ರೀತಿಯ ಸಮಾಜಘಾತುಕ ಶಕ್ತಿಗಳನ್ನು ಬಿಡುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ನಮ್ಮ ಪೊಲೀಸರು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ, ಗೃಹ ಸಚಿವರು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ಇಂತಹ ದುಷ್ಟ ಶಕ್ತಿಗಳನ್ನು ಮಟ್ಟ ಹಾಕುವ ಕಾರ್ಯವನ್ನು ನಮ್ಮ ಸರ್ಕಾರ ನಿರಂತರವಾಗಿ ಮಾಡುತ್ತದೆ ಎಂದಿದ್ದಾರೆ.
Also read: ಬಾಂಬ್ ತಯಾರಿಸಿ ತುಂಗಾ ನದಿಗೆ ಎಸೆಯುತ್ತಿದ್ದ ಶಂಕಿತ ಉಗ್ರರು, ಗುರುಪುರದಲ್ಲಿ ಬ್ಲಾಸ್ಟ್’ಗೆ ಸಂಚು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post