ಕಲ್ಪ ಮೀಡಿಯಾ ಹೌಸ್ | ಮೈಸೂರು |
ಶಿವಮೊಗ್ಗದಲ್ಲಿ ಶಂಕಿತ ಉಗ್ರರು ಪತ್ತೆಯಾಗಿರುವುದು ಆತಂಕಕಾರಿಯಾಗಿದ್ದು, ವಿದ್ಯಾವಂತರೇ ಈ ದಾರಿ ಹಿಡಿಯುತ್ತಿರುವುದು ಆಘಾತಕಾರಿಯಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ Vijayendra ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವಿದ್ಯಾವಂತರಿಗೇ ಐಸಿಸಿ ಸೇರಿದಂತೆ ವಿವಿಧ ಉಗ್ರ ಸಂಘಟನೆಗಳ ನಂಟು ಇರುವುದು ಆತಂಕಕಾರಿ ವಿಚಾರವಾಗಿದೆ. ಶಿವಮೊಗ್ಗದಂತಹ ಪ್ರದೇಶದಲ್ಲಿ ಶಂಕಿತ ಉಗ್ರರು ಪತ್ತೆಯಾಗಿರುವುದು ಅತ್ಯಂತ ಗಂಭೀರವಾದ ಪ್ರಕರಣವಾಗಿದೆ.

ಕಾಂಗ್ರೆಸ್’ನ ಓಲೈಕೆ ರಾಜಕಾರಣಕ್ಕಾಗಿ ಶಾಂತಿ ಕದಡುವ ಕೆಲಸವನ್ನು ಮಾಡುತ್ತಿದೆ. ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ವಿಚಾರದಲ್ಲಿ ಉಂಟಾದ ಗಲಭೆಯೇ ಇದಕ್ಕೆ ಕಾರಣವಾಗಿದೆ. ಅಲ್ಲದೇ ಎಂದು ಕಿಡಿ ಕಾರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















