ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಶ್ವದ ಆರೋಗ್ಯ ಕಾಪಾಡುವಲ್ಲಿ ಫಾರ್ಮಸಿಸ್ಟ್ ಪಾತ್ರ ಪ್ರಮುಖವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಅಭಿಪ್ರಾಯಪಟ್ಟರು.
ಸೋಮವಾರ ಸಂಜೆ ರಾಷ್ಟ್ರೀಯ ಔಷಧ ಮಹಾವಿದ್ಯಾಲಯ ವತಿಯಿಂದ ವಿಶ್ವ ಔಷಧಿಕಾರರ ದಿನಾಚರಣೆ ಹಾಗೂ ಎನ್.ಎಸ್.ಎಸ್ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಂದ ಆರೋಗ್ಯ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್ ಮಾತನಾಡಿ ಫಾಮರ್ಸಿ ಕಲ್ಪನೆಯ ಅರಿವು ಜನರಿಗೆ ಮೂಡಿಸುವಲ್ಲಿ ಇಂತಹ ಜಾಥಾಗಳು ಪರಿಣಾಮಕಾರಿಯಾಗಿ ನಿಲ್ಲಲಿದೆ. ಸಾರ್ವಜನಿಕವಾಗಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಫಾರ್ಮಸಿಸ್ಟ್ ಮೂಲಕ ಸಮಾಜಮುಖಿ ಚಿಂತನೆಗಳು ಹೊರಹೊಮ್ಮಲಿ ಎಂದು ಆಶಿಸಿದರು

Also read: ಸ್ವಾಯತ್ತತೆ ಉಳಿಸಿಕೊಳ್ಳುವುದೇ ಸರ್ಕಾರಿ ವಿವಿಗಳಿಗೆ ದೊಡ್ಡ ಸವಾಲು: ಪ್ರೊ. ಎಂ. ವೆಂಕಟೇಶ್ವರಲು











Discussion about this post