ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಾಡಹಬ್ಬ ದಸರಾ ಸಂಭ್ರಮದಲ್ಲಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕರೆಂಟ್ ಶಾಕ್ ನೀಡಿದ್ದು, ಅ.1ರಿಂದ ಹೊಸ ವಿದ್ಯುತ್ ದರ ಪರಿಷ್ಕರಣೆ ಜಾರಿ ಮಾಡಿದೆ.
ಹೊಸ ವಿದ್ಯುತ್ ದರ ಪರಿಷ್ಕರಣೆ ಅನ್ವಯ ಪ್ರತಿ ಯುನಿಟ್ಗೆ 23ರಿಂದ 43ಪೈಸೆ ದರ ಏರಿಕೆಯಾಗಲಿದ್ದು, ಕೆಇಆರ್ಸಿ ಆದೇಶದ ಪ್ರಕಾರ, ಬೆಂಗಳೂರು ನಗರವನ್ನು ಒಳಗೊಳ್ಳುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಅಡಿಯಲ್ಲಿ ಗ್ರಾಹಕರು ಪ್ರತಿ ಯೂನಿಟ್ಗೆ 43 ಪೈಸೆ ಹೆಚ್ಚುವರಿ ಪಾವತಿಸಬೇಕಾಗುತ್ತದೆ ಮತ್ತು ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಮೆಸ್ಕಾಂ) ಅಡಿಯಲ್ಲಿ ಗ್ರಾಹಕರು 24 ಪೈಸೆ ಹೆಚ್ಚು ಪಾವತಿಸಬೇಕಾಗುತ್ತದೆ.
Also read: ಗುಡ್ನ್ಯೂಸ್! ವಾಣಿಜ್ಯ ಅಡುಗೆ ಅನಿಲ ದರ ಇಳಿಕೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















