No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ: ಸಂಭ್ರಮ, ಸಡಗರದ ಭೂಮಿ ಹುಣ್ಣಿಮೆ ಸಂಪನ್ನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 10, 2022
in ಸೊರಬ
0
ಸೊರಬ: ಸಂಭ್ರಮ, ಸಡಗರದ ಭೂಮಿ ಹುಣ್ಣಿಮೆ ಸಂಪನ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ವರ್ಷದ ಆಶ್ವೀಜ ಮಾಸದ ಹುಣ್ಣಿಮೆಯಂದು ನಡೆಯುವ ಭೂಮಿ ಹುಣ್ಣಿಮೆ ಅಥವಾ ಸೀಗೆ ಹುಣ್ಣಿಮೆ ಚೊಚ್ಚಲ ಗರ್ಭಿಣಿಗೆ ಬಯಕೆ ತೀರಿಸುವ ಸಾಂಕೇತಿಕ ಆಚರಣೆಯಾಗಿದ್ದು, ಕೃಷಿ ಕುಟುಂಬಗಳು ಇಂದಿಗೂ ಇಂತಹ ಬಯಕೆ ತೀರಿಸುವ ಆಚರಣೆಗಳಿಂದ ಹಿಂದೆ ಸರಿದಿಲ್ಲ ಎಂಬುದಕ್ಕೆ ಭಾನುವಾರ ಭೂಮಣ್ಣಿ ಹಬ್ಬ ತಾಲ್ಲೂಕಿನ ಎಲ್ಲೆಡೆ ಸಂಭ್ರಮ ಸಡಗರದಿಂದ ಜರುಗಿದ್ದು ಸಾಕ್ಷಿಯಾಗಿದೆ.

ಮಲೆನಾಡ ಭಾಗದಲ್ಲಿ ದೀವರು ಅಥವಾ ಒಕ್ಕಲಿಗ ಸಮುದಾಯದವರು ಇರುವೆಡೆ ಭೂಮಿ ಹುಣ್ಣಿಮೆ ವಿಶೇಷವಾಗಿರುತ್ತದೆ. ಗರ್ಭಿಣಿಯ ಬಯಕೆ ತೀರಿಸುವ ತಿನಿಸು ತುಂಬಲು ಅಗತ್ಯವಿರುವ ಭೂಮಣ್ಣಿ ಬುಟ್ಟಿಗಳ ತಯಾರಿ ಬಳಿಕ ಹಬ್ಬದ ಹಿಂದಿನ ದಿನ ನಡುರಾತ್ರಿ ಅಥವಾ ಬೆಳಗಿನ ಮೊದಲ ಜಾವದಲ್ಲೆ ಎದ್ದು ಬಯಕೆ ತೀರಿಸುವ ಆಹಾರ ಅಥವಾ ಚರಗು ಸಿದ್ಧಗೊಳಿಸಿ, ಸೂರ್ಯೋದಯಕ್ಕೂ ಮೊದಲು, ಕೆಲವರು ಸೂರ್ಯೋದಯದ ಬಳಿಕ ತಮ್ಮ ಕೃಷಿ ಭೂಮಿಗೆ ಚರಗು ಅಥವಾ ಎಡೆ ಅರ್ಪಿಸುವ ಕಾಯಕ ಇಂದಿಗೂ ಹಸಿರಾಗಿಯೆ ಇದೆ.
ಗ್ರಾಮಾಂತರ ಪ್ರದೇಶದಲ್ಲಿ ಸಿಗುವ, ತಿನ್ನಲು ಯೋಗ್ಯವಾದ ಬಾಳೆಕಾಯಿ, ಬಸಳೆ ಸೊಪ್ಪು ಹೊರತುಪಡಿಸಿ ಇನ್ನುಳಿದ ಎಲ್ಲ ರೀತಿ ಸೊಪ್ಪು, ತರಕಾರಿ ಬೇಯಿಸಿ ಭೂಮಿ ತಾಯಿಗೆ ಅರ್ಪಿಸುವ ಪದ್ಧತಿ ಬೆಳೆಸಿಕೊಂಡು ಬಂದಿದ್ದು, ಅಮಟೆಕಾಯಿ, ಸಿಹಿ ಕುಂಬಳ, ಹಾಲು ಕುಂಬಳ, ಸೌತೆ ಕಾಯಿ, ಕುಂಬಳಕಾಯಿಗಳನ್ನು ತೀರಾ ಅಗತ್ಯವಾಗಿ ಬಳಸುತ್ತಾರೆ. ಚರಗನ್ನು ಇಡಕಲು ಮುಂದಿಟ್ಟು ಪೂಜಿಸಿ ಬಳಿಕ ಜಮೀನಿಗೆ ಭೂಮಣ್ಣಿ ಬುಟ್ಟಿಯಲ್ಲಿ ತುಂಬಿ ಹೊಲ, ಗದ್ದೆ, ತೋಟಗಳಿಗೆ ತೆರಳುತ್ತಾರೆ. ಅಲ್ಲಿ ಬತ್ತದ ಎರಡು ಸಸಿಗಳನ್ನು ಒಂದಾಗಿ ಸೇರಿಸಿ ಕಡ್ಲಾಡಿ, ಮಡ್ಲಾಡಿ ಇಟ್ಟು ಹಸಿರು ಕಣ ಅಥವಾ ಸೀರೆ ಇರಿಸಿ ಪೂಜೆಸುತ್ತಾರೆ. ಒಬ್ಬ ಹೆಣ್ಣು ಮಗಳ ಸೀಮಂತದ ಆಚರಣೆ ಹೇಗೆ ನಡೆಯುತ್ತದೆಯೊ ಅದೇ ರೀತಿ ಇಲ್ಲಿಯೂ ನಡೆಸಲಾಗುತ್ತದೆ. ಬಳಿಕ ತಂದ ಚರಗಲ್ಲಿ ಎರಡು, ಮೂರು ಕಡೆ ಎಡೆ ಇಟ್ಟು ಕಾಗೆ ಅಥವಾ ಯಾವುದೇ ಪಕ್ಷಿ ಕರೆದು ಅವು ತಿಂದ ಬಳಿಕ ಭೂಮಿಗೆ ಹಚ್ಚಂಬ್ಲಿ, ಧಾರ ಹೀರೆ ಮುಚ್ಕಂಡ್ ಉಣ್ಣೆ ಭೂಮ್ಕ್ಯವ್ವ..ಹೋ..ಹೊ..ಹೊ..ಹೋ.. ಎನ್ನುತ್ತ ಚರಗು ಬೀರುತ್ತಾರೆ. ನಂತರ ಬೋಜನದ ಸಿದ್ಧತೆ ನಡೆಯುತ್ತದೆ. ಕಾಗೆ ಬಯಸಿ ತಿಂದಿದ್ದನ್ನು ತಮ್ಮ ಪಿತೃಗಳ ಬಯಕೆಯ ಆಹಾರ ಎಂದು ಬಗೆವ ಕೃಷಿಕರು ಕಡುಬನ್ನು ಜಮೀನಿನಲ್ಲಿ ಹುಗಿದಿಡುತ್ತಾರೆ. ಇದೇ ಕಡುಬನ್ನು ಬೆಳೆಯ ಕೊಯ್ಲಿನ ವೇಳೆ ಕುಡುಗೋಲು ಪೂಜೆಯ ಸಮಯದಲ್ಲಿ ತೆಗೆದು ಪ್ರಸಾಧವನ್ನಾಗಿ ಸ್ವೀಕರಿಸುವ ಪದ್ಧತಿಯೂ ಇದೆ. ಈ ಹೊತ್ತಿಗೆ ಕಡುಬು ಎಷ್ಟು ಹಾಳಾಗಿದೆಯೋ ಅಷ್ಟು ಬೆಳೆಯಲ್ಲಿ ಹುಲುಸು ಎಂದೆ ನಂಬುವ ಪದ್ಧತಿಯೂ ಇದೆ. ಭೋಜನಾ ನಂತರ ಹಂಗನೂಲು ಕೈಗೆ ಕಟ್ಟಿ ಗದ್ದೆ ಕೊಯ್ಲಿನ ವೇಳೆ ಹಂಗನೂಲು ಬಿಚ್ಚಿ ಪೂಜಿಸುವ ವಾಡಿಕೆಯೂ ಇದೆ. ಬಳಿಕ ತಮ್ಮ ಕೃಷಿ ಭೂಮಿಯಲ್ಲಿಯೇ ಅಂದಿನ ಬೋಜನ ಸವಿಯುವ ಕೃಷಿ ಕುಟುಂಬಗಳ ಅಂದಿನ ವಿಶೇಷ ಖಾದ್ಯ ಬಾಳೆ ಎಲೆ ಬಳಸಿ ಮಾಡುವ ಕೊಟ್ಟೆ ಕಡುಬು! ಉದ್ದು, ತೆಂಗಿನ ಕಾಯಿ, ಹಸಿಮೆಣಸು, ಅಕ್ಕಿ ಬಳಸಿದ ಕಾರದ ಮತ್ತು ಸಿಹಿ ಕುಂಬಳ, ಅಕ್ಕಿ ಬಳಸಿ ತಯಾರಿಸಿದ ಸಿಹಿ ಕಡುಬು ಅಂದು ತೀರಾ ಅಚ್ಚುಮೆಚ್ಚು. ಇದರೊಂದಿಗೆ ಹೋಳಿಗೆ, ಪಾಯಸ, ಕಜ್ಜಾಯ, ಬುತ್ತಿ, ವಿವಿಧ ತರಕಾರಿ ಬಳಸಿ ಮಾಡಿರುವ ಪಲ್ಯ, ಹಣ್ಣು ಮೆಣಸಿನ ಕಾಯಿ ಚಟ್ನಿ, ಮುಂತಾದವುಗಳ ಸ್ವಾಧಿಷ್ಟ, ಸತ್ವಭರಿತ ಅಡುಗೆ ಬಳಕೆಯಾಗುತ್ತದೆ.

Also read: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಹಿನ್ನೆಲೆ ದಕ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ
ಅರೆ ಮಲೆನಾಡು ಪ್ರದೇಶಗಳಲ್ಲಿ ತುಸು ಭಿನ್ನ ಆಚರಣೆ ಕಂಡುಬರುತ್ತಿದ್ದು, ಭೂಮಿ ಹುಣ್ಣಿಮೆ ಬದಲಿಗೆ ಸೀಗೆ ಹುಣ್ಣಿಮೆ ಎನ್ನುತ್ತಾರೆ. ಐದು ಧಾನ್ಯದ ಸಸಿಗಳನ್ನು ಬೇರು ಸಹಿತ ಇರಿಸಿಕೊಂಡು ಅದರೊಂದಿಗೆ ಐದು ಕಲ್ಲುಗಳಿಗೆ ಸುಣ್ಣ ಹಚ್ಚಿ ಪಾಂಡವರೆಂದು ಪೂಜಿಸುತ್ತಾರೆ, ಇಲ್ಲೂ ಕೂಡ ಕಡಬು ಹುಗಿಯಲಾಗುತ್ತದೆ, ವಿವಿಧ ಧಾನ್ಯಗಳ ರೊಟ್ಟಿ ಬಳಸಲಾಗುತ್ತದೆ. ಹುರಸಲು ಬೀರುವಾಗ ಹುಲಿಗ್ಯಾ…ಹುಲಿಗ್ಯಾ ಎಂದು ಕೂಗುತ್ತ ಭೂಮಿಗೆ ಅರ್ಪಿಸಲಾಗುತ್ತದೆ. ಇನ್ನುಳಿದಂತೆ ಮಲೆನಾಡಿನ ಕೆಲ ಪದ್ಧತಿಗಳು ಕೂಡ ಬಳಕೆಯಾಗುತ್ತವೆ.

ಗಮನಿಸುವ ಸಂಗತಿ:
ಕೋರಿಯಾ ದೇಶದಲ್ಲಿ ಭೂಮಿಯ ಜೀವಾಣುಗಳನ್ನು ವೃದ್ಧಿ ಗೊಳಿಸಲು ಐಎಂಒ ಹೆಸರಿನ ಜೀವದ್ರಾವಣವನ್ನು ಬಳಸುತ್ತಾರೆ. ಈ ಜೀವದ್ರಾವಣ ಅಕ್ಕಿ ಮತ್ತು ಬೆಲ್ಲದಿಂದ ತಯಾರಾಗುತ್ತದೆ. ಈ ಭೂಮಿ ಹುಣ್ಣಿಮೆಯ ಚರಗು, ಭೂಮಿಯಲ್ಲಿ ಹುಗಿಯುವ ಕಡುಬು ಕೂಡ ಇಂತಹ ಜೀವಾಣುವನ್ನು ವೃದ್ಧಿಸಬಲ್ಲದೆ ಎಂಬುದು ಸಂಶೋಧನಾರ್ಹ ಸಂಗತಿ. ಹಾಗೂ ಮಳೆಗಾಲದ ಬಳಿಕ ಭೂಮಿಯಲ್ಲಿ ಕೃಷಿಗೆ ಪೂರಕವಾದ ಜೀವಾಣುಗಳು ಕೊರತೆಯಿರುತ್ತದೆ ಎಂಬುದನ್ನು ನೆನಪಿಸಿಕೊಳ್ಳಬೇಕಿದೆ.
ಶ್ರೀಪಾದ ಬಿಚ್ಚುಗತ್ತಿ, ಪರಿಸರ ಕಾಯಕರ್ತ

ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share212Tweet123Send
Previous Post

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಹಿನ್ನೆಲೆ ದಕ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

Next Post

ಸಹಕಾರ ಮನೋಭಾವ ಹೊಂದಿದ್ದ ಗಣಪತಿ ಭಟ್ಟರು ಸರಳ, ಸಜ್ಜನಿಕೆಯ ವ್ಯಕ್ತಿ: ಶಿವಾನಂದ ದೀಕ್ಷಿತ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಹಕಾರ ಮನೋಭಾವ ಹೊಂದಿದ್ದ ಗಣಪತಿ ಭಟ್ಟರು ಸರಳ, ಸಜ್ಜನಿಕೆಯ ವ್ಯಕ್ತಿ: ಶಿವಾನಂದ ದೀಕ್ಷಿತ್

ಸಹಕಾರ ಮನೋಭಾವ ಹೊಂದಿದ್ದ ಗಣಪತಿ ಭಟ್ಟರು ಸರಳ, ಸಜ್ಜನಿಕೆಯ ವ್ಯಕ್ತಿ: ಶಿವಾನಂದ ದೀಕ್ಷಿತ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಎಲ್ಲ ವ್ರತಗಳಿಗಿಂತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠ | ಸತ್ಯಾತ್ಮ ತೀರ್ಥ ಸ್ವಾಮೀಜಿ

ಮೈಸೂರು | ಎಲ್ಲ ವ್ರತಗಳಿಗಿಂತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠ | ಸತ್ಯಾತ್ಮ ತೀರ್ಥ ಸ್ವಾಮೀಜಿ

June 12, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL