ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಕೆ.ಆರ್.ಪೇಟೆಯ ಅಂಬಿಗರಹಳ್ಳಿಯಲ್ಲಿ ಅಕ್ಟೋಬರ್ 13 ರಿಂದ 16 ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.
ಅವರು ಇಂದು ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕುಂಭ ಮೇಳದ ವೇದಿಕೆ, ಯಾಗಶಾಲೆ, ಪಾಕ ಶಾಲೆ, ಸ್ನಾನದ ಘಟ್ಟ, ವಿಶ್ರಂತಿ ಗೃಹ, ಭದ್ರತಾ ವ್ಯವಸ್ಥೆ ಕುರಿತು ಮಾಹಿತಿ ಪಡೆದುಕೊಂಡರು.
ವಿಐಪಿ ಪಾರ್ಕಿಂಗ್, ಅಧಿಕಾರಿಗಳ ಪಾರ್ಕಿಂಗ್ ಹಾಗೂ ಭಕ್ತಾಧಿಗಳ ವಾಹನಗಳು ಸುರಕ್ಷಿತವಾಗಿ ಪಾರ್ಕಿಂಗ್ ಮಾಡಲು ಸ್ಥಳವನ್ನು ನಿಗದಿಪಡಿಸಿ ಪಾರ್ಕಿಂಗ್ ವ್ಯವಸ್ಥೆಗಳ ಸುತ್ತಮುತ್ತಲಿನಲ್ಲಿ ಸಂಪೂರ್ಣ ಸ್ವಚ್ಛತೆಯಾಗಬೇಕು. ಪಾರ್ಕಿಂಗ್ ಗೆ ನಿಗಧಿಪಡಿಸಿದ ಸ್ಥಳಗಳಲ್ಲಿ ಲೈಟಿಂಗ್ಸ್ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ಕುಂಭಮೇಳಕ್ಕೆ ಬರುವ ಭಕ್ತಾಧಿಗಳಿಗೆ ಊಟದ ವ್ಯವಸ್ಥೆಗಾಗಿ 100 ಕೌಂಟರ್ ಗಳನ್ನು ತೆರೆಯಲಾಗುವುದು. ಉತೋಪಚಾರಕ್ಕೆಯಾವುದೇ ಕೊರತೆಯಾಗದಂತೆ ಕ್ರಮವಹಿಸಿ ಎಂದರು.
ಸ್ನಾನಘಟ್ಟದಲ್ಲಿ ಸುರಕ್ಷತಾ ಸ್ಥಳಗಳನ್ಬು ಗುರುತಿಸಿ, ಈಜುಗಾರರನ್ನು ನಿಯೋಜಿಸಿ. ಸ್ವಚ್ಛತೆ ಕಪಾಡಲು ಪೌರಕಾರ್ಮಿಕರನ್ನು ಪಾಳಿಯಲ್ಲಿ ನಿಯೋಜಿಸಿ ಎಂದರು.
ಸೋಮನಹಳ್ಳಿಯಿಂದ ತ್ರಿವೇಣಿ ಸಂಗಮದ ವರೆಗೆ ಭಕ್ತಾದಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಬಸ್ ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಪಾರ್ಕಿಂಗ್,ಅಡುಗೆ ಮಾಡುವ ಸ್ಥಳಗಳಲ್ಲಿ ಹಾಗೂ ಇನ್ನಿತರ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವಂತೆ ತಿಳಿಸಿದರು.
Also read: ರಾಷ್ಟ್ರೀಯ ಅನ್ನದಾನ ಸಮಿತಿಗೆ ಕೆ.ಈ. ಕಾಂತೇಶ್, ಎನ್.ಡಿ. ಸತೀಶ್ ಆಯ್ಕೆ
ವಸತಿ ಸಮಿತಿ, ಆಹಾರ ಸಮಿತಿ, ಕುಡಿಯುವ ನೀರು ಸಮಿತಿ, ಸ್ವಚ್ಛತಾ ಸಮಿತಿ, ಪ್ರದರ್ಶನ ಸಮಿತಿ, ಪ್ರಚಾರ ಸಮಿತಿ,ರಕ್ಷಣೆ ಸಮಿತಿ,ವೇದಿಕೆ ನಿರ್ಮಾಣ ಹಾಗೂ ದೀಪಾಲಂಕಾರ ಸಮಿತಿಗೆ ನಿರ್ವಹಿಸಿರುವ ಕೆಲಸ ಕಾರ್ಯಗಳು ಸಂಪೂರ್ಣವಾಗಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಸ್ವಚ್ಚತೆ, ರಸ್ತೆ ಕಾಮಗಾರಿ ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣ ಮಾಡಿ ಕುಂಭಮೇಳ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಕ್ರಮವಹಿಸಿ ಎಂದು ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳ ಕಾರ್ಯಕ್ರಮಕ್ಕೆ ಸಜ್ಜಾಗುತ್ತಿರುವ ಬೃಹತ್ ವೇದಿಕೆ ಹಾಗೂ ಇನ್ನಿತರ ಸಣ್ಣ ಪುಟ್ಟ ಕಾಮಗಾರಿಗಳನ್ನು ವೀಕ್ಷಿಸಿ ಬಾಕಿ ಉಳಿದಿರುವ ಕೆಲಸಗಳನ್ನು ಶೀಘ್ರದಲ್ಲೇ ಪೂರ್ಣ ಗೊಳಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಸಚಿವರ ಆಪ್ತಕಾರ್ಯದರ್ಶಿ ಹೆಚ್.ಜಿ.ಪ್ರಭಾಕರ್, ಉಪವಿಭಾಗಾಧಿಕಾರಿಗಳಾದ ಬಿ.ಸಿ ಶಿವಾನಂದ ಮೂರ್ತಿ,ಆರ್.ಐಶ್ವರ್ಯ, ತಹಶೀಲ್ದಾರ್ ಎಂ.ವಿ.ರೂಪ, ಜಿ.ಪಂ ಉಪಕಾರ್ಯದರ್ಶಿ ಸಂಜೀವಪ್ಪ, ಡಿವೈಎಸ್ ಪಿ ಲಕ್ಷ್ಮಿ ನಾರಾಯಣ ಪ್ರಸಾದ್, ಸಣ್ಣಸ್ವಾಮಿ ಗೌಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post