ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ(ವಿಜಯನಗರ) |
ಸರ್ಕಾರದ ಆದೇಶದ ಮೇರೆಗೆ ವಿಜಯನಗರ ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕೋಟಿಕಂಠ ಗಾಯನ Koti Kanta Gayana ಕಾರ್ಯಕ್ರವನ್ನು ವಿಶ್ವ ಪಾರಂಪರಿಕ ತಾಣವಾಗಿರುವ ಹಂಪಿಯ ಎದುರು ಬಸವಣ್ಣ ಮಂಟಪ ಸೇರಿದಂತೆ ವಿವಿಧ ಐತಿಹಾಸಿಕ ಸ್ಥಳಗಳಲ್ಲಿ ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಜಯನಗರ ಅಪರ ಜಿಲ್ಲಾಧಿಕಾರಿ ಟಿ.ವಿ. ಪ್ರಕಾಶ್ ಅವರು ತಿಳಿಸಿದರು.
ಅವರು ಬುಧವಾರದಂದು ವಿಜಯನಗರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕೋಟಿಕಂಠ ಗಾಯನ ಕಾರ್ಯಕ್ರಮದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Also read: ದೀಪಾವಳಿ ಹಬ್ಬದ ಅಂಗವಾಗಿ ಅ.25ರಂದು ಗೋಪೂಜೆ ಮಾಡಲು ಇಲ್ಲಿದೆ ಅವಕಾಶ
ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದ ಎದುರು ಬಸವಣ್ಣ ಮಂಟಪದ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರ ಜನರು ಗಾಯನ ಮಾಡಲಿದ್ದಾರೆ. ಇದೇ ಸಮಯದಲ್ಲಿ ಹೊಸಪೇಟೆ ಟಿ.ಬಿ.ಡ್ಯಾಂ ಆವರಣದಲ್ಲಿ 20 ಸಾವಿರ, ಕೂಡ್ಲಿಗಿಯ ಉಜ್ಜಯಿನಿಪೀಠದಲ್ಲಿ 20 ಸಾವಿರ, ಕೊಟ್ಟೂರಿನ ಕೊಟ್ಟೂರೇಶ್ವರ ದೇವಸ್ಥಾನದ ಆವರಣದಲ್ಲಿ 20 ಸಾವಿರ, ಹರಪನಹಳ್ಳಿಯ ಕೋಟೆ ಪ್ರದೇಶದಲ್ಲಿ 15 ಸಾವಿರ, ಹೂವಿನಹಡಗಲಿಯ ಗವಿಸಿದ್ದೇಶ್ವರ ಮಠದ ಆವರಣದಲ್ಲಿ 10 ಸಾವಿರ ಹಾಗೂ ಹಗರಿಬೊಮ್ಮನಹಳ್ಳಿಯ ಮಾಲ್ವಿಡ್ಯಾಂನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 10 ಸಾವಿರ ಜನರ ಸಮಕ್ಷಮದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನುಆಯೋಜಿಸಲಾಗಿದೆ. ಕೋಟಿ ಕಂಠಗಾಯನ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳಿಗೆ ವಹಿಸಲಾದ ಜವಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಲು ಅವರು ಸೂಚಿಸಿದರು.












Discussion about this post