ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಇಂದು ಸಂಜೆ ಸ್ಟೈಲ್ ಡ್ಯಾನ್ಸ್ ಕ್ರಿವ್ ಸಂಸ್ಥೆಯಿಂದ ಅಪ್ಪು ಪುನರ್ ಜನ್ಮೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಇದೇ ಸಂದರ್ಭದಲ್ಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು ಅಪ್ಪು ಅವರ ಹಾಡಿಗೆ ಕುಣಿದು ಕುಪ್ಪಳಿಸಿದರು. ಅಲ್ಲಿ ನೆರೆದಿದ್ದ ಸಾವಿರಾರು ಅಪ್ಪು ಅಭಿಮಾನಿಗಳಿಂದ ಅಪ್ಪುವಿಗೆ ಮೌನಚರಣೆ ಮಾಡುವ ಮೂಲಕ ಕಾರ್ಯಕ್ರಮ ಮುಕ್ತಾಯವಾಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಂಸ್ಥೆಯ ಅಧ್ಯಕ್ಷ ಕೆ. ಈ. ಕಾಂತೇಶ್, ಮೇಯರ್ ಶಿವಕುಮಾರ್, ಸಂಸ್ಥೆಯ ಸಲಹೆಗಾರರಾದ ಸಿಂಪ್ಲೆಕ್ಸ್ ರಮೇಶ್ ಹಾಗೂ ಶಶಿಕುಮಾರ್, ನೃತ್ಯ ಸಂಸ್ಥೆಯ ಸಂಸ್ಥಾಪಕರು ಇದ್ದರು.
ಭೈರವೇಶ್ವರ ಸೌಂಡ್ಸ್ ವಿನಯ್ ಮತ್ತು ಶ್ರೀ ದುರ್ಗಾ ಸಂಸ್ಥೆಯ ಸುನಿಲ್ ಅವರು ಕಾರ್ಯಕ್ರಮಕ್ಕೆ ಕೈ ಜೋಡಿಸಿದ್ದರು. ಸಂಸ್ಥೆಯ ನೃತ್ಯ ನಿರ್ದೇಶಕರಾದ ವಿನಯ್, ದರ್ಶನ್ , ಜೀತು ಕಾರ್ಯಕ್ರಮ ನಡೆಸಿಕೊಟ್ಟರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post